ಭೀಮ್ ರಾವ್ ಸುಂಗಲ್ಕರ್ ಯಾದಗಿರಿ ಕನ್ನಡ ಭವನ ಜಿಲ್ಲಾಧ್ಯಕ್ಷರಾಗಿ ಆಯ್ಕೆ

ಕಾಸರಗೋಡು : ಸಂಘಟಕ ಸಾಹಿತಿ ಕಲಾವಿದ, ವಿವಿಧ ಸಂಘಟನೆಗಳ ಪದಾಧಿಕಾರಿಯಾಗಿ ಜನಪ್ರಿಯರಾಗಿರುವ ಭೀಮ್ ರಾವ್ ಸುಂಗಲ್ಕರ್ ಕೇರಳ ರಾಜ್ಯದ ಕಾಸರಗೋಡು ಕನ್ನಡ ಭವನದ ಯಾದಗಿರಿ ಜಿಲ್ಲೆಯ ಜಿಲ್ಲಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಕನ್ನಡ ಭವನದ ರಜತ ಸಂಭ್ರಮ ವರ್ಷವಾದ 2025ರಲ್ಲಿ ಕರ್ನಾಟಕ ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಕನ್ನಡ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸದುದ್ದೇಶದಿಂದ ಎಲ್ಲಾ ಜಿಲ್ಲೆಗಳಲ್ಲಿ ಘಟಕ ಸ್ಥಾಪಿಸಲಾಗುತ್ತಿದೆ.
ಕನ್ನಡ ಭವನದ ಕರ್ನಾಟಕ ರಾಜ್ಯ ಸಂಚಾಲಕರಾದ ಡಾ. ಟಿ. ತ್ಯಾಗರಾಜ್ ಮೈಸೂರ್ ನಾಮ ನಿರ್ದೇಶನ ಮಾಡಿದರು. ಇನ್ನೊರ್ವ ರಾಜ್ಯ ಸಂಚಾಲಕರಾದ ಸಂಘಟಕ ಬಿ. ಶಿವಕುಮಾರ್ ಕೋಲಾರ ಅನುಮೋದಿಸಿದರು. ಸರ್ವಾನುಮತಿಯೊಂದಿಗೆ ಆಯ್ಕೆಯಾದ ಭೀಮ್ ರಾವ್ ಸುಂಗಲ್ಕರ್ ಇವರು ಕಾಸರಗೋಡು ಕನ್ನಡ ಭವನ ಮತ್ತು ಗ್ರಂಥಾಲಯ (ರಿ.) ಕನ್ನಡ ಭವನ ಪ್ರಕಾಶನ, ಸುಮಾರು 20000 ಪುಸ್ತಕಗಳಿರುವ ಸಾರ್ವಜನಿಕ ವಾಚನಾಲಯ, ಕರ್ನಾಟಕದಿಂದ ಕಾಸರಗೋಡು ಪ್ರದೇಶಕ್ಕೆ ಸಾಹಿತ್ಯ, ಸಾಂಸ್ಕೃತಿಕ ರಾಯಬಾರಿ ಗಳಿಗೆ “ಉಚಿತ ವಸತಿ ಸೌಕರ್ಯ” ಪ್ರತಿ ಮನೆಗೊಂದು ಗ್ರಂಥಾಲಯ, ರಜತ ಸಂಭ್ರಮ ವಿಶೇಷ ಕಾರ್ಯಕ್ರಮ, ಸಂಘಟನೆ, ಸಂಯೋಜನೆಯಲ್ಲಿ ಘಟಕ ವಿಸ್ತರಿಸಿ, ಕಾರ್ಯ ಪ್ರವಿತ್ತರಾಗಬೇಕೆಂದು ಕನ್ನಡ ಭವನದ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಸಂಚಾಲಕಿಯಾದ ಸಂದ್ಯಾ ರಾಣಿ ಟೀಚರ್ ಜಂಟಿಯಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.