May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವಾಮಂಜೂರಿನಲ್ಲಿ ಪೌಷ್ಠಿಕ ಆಹಾರದ ಮಹತ್ವದ ಬಗ್ಗೆ ಕಾರ್ಯಾಗಾರ

ಮಂಗಳೂರು : ಧರ್ಮಜ್ಯೋತಿ ಸೇವಾ ಸಂಸ್ಥೆ, ವಾಮಂಜೂರು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ, ಕೊಣಾಜೆ (MSW) ಇದರ ಜಂಟಿ ಆಶ್ರಯದಲ್ಲಿ ಜನವರಿ 23ರಂದು ಗುರುವಾರ ಶ್ರಮಿಕ ಸಂತ ಜೋಸೆಫ್ ಹಿರಿಯ ಪ್ರಾಥಮಿಕ ಶಾಲೆ ವಾಮಂಜೂರಿನಲ್ಲಿ ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ನಡೆಸಲಾಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮಂಗಳೂರು ವಿಶ್ವವಿದ್ಯಾನಿಲಯದ ಪ್ರಾದ್ಯಾಪಕರಾದ ಉಷಾರಾಣಿಯವರು ಚಟುವಟಿಕೆಗಳ ಮೂಲಕ ಪೌಷ್ಟಿಕತೆಯ ಮಹತ್ವದ ಬಗ್ಗೆ ವಿವರವಾಗಿ ಮಕ್ಕಳಿಗೆ ತಿಳಿಸಿದರು.  ಧರ್ಮಜ್ಯೋತಿ ಸೇವಾ ಸಂಸ್ಥೆಯ ರೆನಿಟಾ ಲೂವಿಸ್ ಪ್ರಾಸ್ತಾವಿಕ ನುಡಿಗಳನ್ನಾಡಿದರು.  ಶಾಲೆಯ ಸಹಶಿಕ್ಷಕಿಯರಾದ ಭಗಿನಿ ಫಿಲೋಮಿನಾ ಚಾಕೊ (SRA) ರವರು ಉಪಸ್ಥಿತರಿದ್ದರು.  ಶಾಲೆಯ 58 ಮಕ್ಕಳು ಹಾಗೂ ಓರ್ವ ಶಿಕ್ಷಕಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.  MSW ವಿದ್ಯಾರ್ಥಿಗಳಾದ ಮೇಘನಾ ಕಾರ್ಯಕ್ರಮವನ್ನು ನಿರೂಪಿಸಿದರು.  ರಕ್ಷಾ ಸ್ವಾಗತ ಹಾಗೂ ಆರ್. ಸೂರ್ಯರವರು ವಂದನಾರ್ಪಣೆಯನ್ನು ಮಾಡಿದರು.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page