March 26, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವಾಮಂಜೂರಿನಲ್ಲಿ ಪೌಷ್ಠಿಕ ಆಹಾರದ ಮಹತ್ವದ ಬಗ್ಗೆ ಕಾರ್ಯಾಗಾರ

ಮಂಗಳೂರು : ಧರ್ಮಜ್ಯೋತಿ ಸೇವಾ ಸಂಸ್ಥೆ, ವಾಮಂಜೂರು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ, ಕೊಣಾಜೆ (MSW) ಇದರ ಜಂಟಿ ಆಶ್ರಯದಲ್ಲಿ ಜನವರಿ 23ರಂದು ಗುರುವಾರ ಶ್ರಮಿಕ ಸಂತ ಜೋಸೆಫ್ ಹಿರಿಯ ಪ್ರಾಥಮಿಕ ಶಾಲೆ ವಾಮಂಜೂರಿನಲ್ಲಿ ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ನಡೆಸಲಾಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮಂಗಳೂರು ವಿಶ್ವವಿದ್ಯಾನಿಲಯದ ಪ್ರಾದ್ಯಾಪಕರಾದ ಉಷಾರಾಣಿಯವರು ಚಟುವಟಿಕೆಗಳ ಮೂಲಕ ಪೌಷ್ಟಿಕತೆಯ ಮಹತ್ವದ ಬಗ್ಗೆ ವಿವರವಾಗಿ ಮಕ್ಕಳಿಗೆ ತಿಳಿಸಿದರು.  ಧರ್ಮಜ್ಯೋತಿ ಸೇವಾ ಸಂಸ್ಥೆಯ ರೆನಿಟಾ ಲೂವಿಸ್ ಪ್ರಾಸ್ತಾವಿಕ ನುಡಿಗಳನ್ನಾಡಿದರು.  ಶಾಲೆಯ ಸಹಶಿಕ್ಷಕಿಯರಾದ ಭಗಿನಿ ಫಿಲೋಮಿನಾ ಚಾಕೊ (SRA) ರವರು ಉಪಸ್ಥಿತರಿದ್ದರು.  ಶಾಲೆಯ 58 ಮಕ್ಕಳು ಹಾಗೂ ಓರ್ವ ಶಿಕ್ಷಕಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.  MSW ವಿದ್ಯಾರ್ಥಿಗಳಾದ ಮೇಘನಾ ಕಾರ್ಯಕ್ರಮವನ್ನು ನಿರೂಪಿಸಿದರು.  ರಕ್ಷಾ ಸ್ವಾಗತ ಹಾಗೂ ಆರ್. ಸೂರ್ಯರವರು ವಂದನಾರ್ಪಣೆಯನ್ನು ಮಾಡಿದರು.

You may also like

News

ದಲಿತ ಅಪ್ರಾಪ್ತ ವಿದ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಬಿಜೆಪಿ ಮುಖಂಡ ಮಹೇಶ್ ಭಟ್ ಬಂಧನಕ್ಕೆ ಡಿಎಚ್ಎಸ್ ಒತ್ತಾಯ – ಕಠಿಣ ಕ್ರಮಕ್ಕೆ ಆಗ್ರಹ

ಬಂಟ್ವಾಳ ತಾಲೂಕಿನ ವಿಟ್ಲದ ಮುರುವ ಎಂಬಲ್ಲಿ ದಲಿತ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳಿಗೆ ಸ್ಥಳೀಯ ಬಿಜೆಪಿ ಮುಖಂಡ ಮಹೇಶ್ ಭಟ್ ಎಂಬವನು ನಿರಂತರ ಲೈಂಗಿಕ ಕಿರುಕುಳ ನೀಡುವ ಮೂಲಕ ಮಾನಸಿಕ
News

ನೇತ್ರದಾನದಿಂದ ಇನ್ನೊಬ್ಬರ ಬಾಳಿಗೆ ಬೆಳಕು – ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ

ಮಂಗಳೂರು : ಇನ್ನೊಬ್ಬರ ಬಾಳಿಗೆ ಬೆಳಕಾಗುವ ನೇತ್ರದಾನ ಶ್ರೇಷ್ಠ ದಾನವಾಗಿದ್ದು, ನೇತ್ರದಾನಿಗಳ ಬದ್ಧತೆ ಸಮಾಜಕ್ಕೆ ಮಾದರಿಯಾಗಿದೆ ಎಂದು ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ ಹೇಳಿದರು. ದಕ್ಷಿಣ ಕನ್ನಡ

You cannot copy content of this page