April 15, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮುಡಿಪು ಸೈಂಟ್ ಜೋಸೆಫ್ ವಾಜ್ ಚರ್ಚ್ ನಲ್ಲಿ ಕಳ್ಳತನ

ಕೋಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಉಳ್ಳಾಲ ತಾಲೂಕಿನ ಮುಡಿಪುವಿನಲ್ಲಿರುವ ಸಂತ ಜೋಸೆಫ್ ವಾಜ್ ಚರ್ಚ್ ಗೆ ಜನವರಿ 24ರಂದು ರಾತ್ರಿ ಕಳ್ಳನೋರ್ವ ಚರ್ಚ್ ಬಾಗಿಲನ್ನು ಮುರಿದು ಒಳ ನುಗ್ಗಿ ಬಲಿಪೀಠದಲ್ಲಿರುವ ಪರಮ ಪ್ರಸಾದ ಇಡುವ ಪೆಟ್ಟಿಗೆಯನ್ನು ಒಡೆದು ಪರಮ ಪ್ರಸಾದ ಹಂಚುವ ವಸ್ತುಗಳನ್ನು ಕಳವು ಗೈದಿದ್ದು ಮಾತ್ರವಲ್ಲದೆ ಕಾಣಿಕೆಗೆ ಹಾಕಿರುವ ಹಣವನ್ನು ಕಳ್ಳತನ ಮಾಡಿ ಪರಾರಿಯಾಗಿದ್ದಾನೆ.

ಕಳ್ಳತನ ಮಾಡುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಚರ್ಚ್ ಉಪಾಧ್ಯಕ್ಷ ನವೀನ್ ಡಿಸೋಜ, ಕಾರ್ಯದರ್ಶಿ ಸಂತೋಷ್ ಡಿಸೋಜ, ಪಾಲನಾ ಸಮಿತಿ ಸದಸ್ಯರು, ಕಥೊಲಿಕ್ ಸಭಾ ಮುಡಿಪು ಘಟಕದ ಅಧ್ಯಕ್ಷ ರಜತ್ ವೇಗಸ್, ರಾಜಕೀಯ ಮುಂದಾಳು ಅರುಣ್ ಡಿಸೋಜ ಸ್ಥಳಕ್ಕೆ ಭೇಟಿ ನೀಡಿ ಪೊಲೀಸರಿಗೆ ಕಳ್ಳತನದ ಬಗ್ಗೆ ವಿವರಿಸಿದ್ದಾರೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ದೌಡಾಯಿಸಿ ಸಿಸಿ ಕ್ಯಾಮೆರಾವನ್ನು ಪರಿಶೀಲಿಸಿ ಪ್ರಕರಣವನ್ನು ದಾಖಲಿಸಿ ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ. ಈ ಘಟನೆ ಬಗ್ಗೆ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಇದರ ಕೇಂದ್ರೀಯ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿ ಕಳ್ಳನನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿದ್ದಾರೆ.

You may also like

News

ಜಗದ್ಗುರು ಪೋಪ್ 14ನೇ ಲಿಯೋ ಅವರ ವಿರುದ್ಧ ಟ್ರಂಪ್ ಅವಹೇಳನಕಾರಿ ಹೇಳಿಕೆ – ಮಂಗಳೂರು ಧರ್ಮಕ್ಷೇತ್ರದಿಂದ ತೀವ್ರ ಖಂಡನೆ

ಸಾರ್ವಜನಿಕ ಸಂಪರ್ಕ ಅಧಿಕಾರಿಗಳಾದ ಫಾದರ್ ಜೆ.ಬಿ. ಸಲ್ಡಾನ್ಹಾ ಹಾಗೂ ರೋಯ್ ಕ್ಯಾಸ್ತೆಲಿನೊ ಜಂಟಿ ಪತ್ರಿಕಾ ಪ್ರಕಟನೆ ವಿಶ್ವದ ಕೋಟ್ಯಂತರ ಕ್ರೈಸ್ತ ವಿಶ್ವಾಸಿಗಳ ಪರಮೋಚ್ಛ ಗುರುಗಳಾದ ಪೋಪ್ 14ನೇ
News

ಮಂಗಳೂರು SSVP ಇತಿಹಾಸದಲ್ಲಿ ಹೊಸ ಅಧ್ಯಾಯ – ಮೊದಲ ಮಹಿಳಾ ಅಧ್ಯಕ್ಷೆಯಾಗಿ ಪ್ರೀತಾ ಲೋಬೊ ಅಧಿಕಾರ ಸ್ವೀಕಾರ

ಸೈಂಟ್ ವಿನ್ಸೆಂಟ್ ಡಿ ಪೌಲ್ ಸೊಸೈಟಿ (SSVP) ಮಂಗಳೂರು ಸೆಂಟ್ರಲ್ ಕೌನ್ಸಿಲ್‌ನ 66 ವರ್ಷಗಳ ಸುದೀರ್ಘ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡುವಂತಹ ಘಟನೆ ನಡೆದಿದೆ. ಸಂಸ್ಥೆಯ ಪ್ರಥಮ ಮಹಿಳಾ

You cannot copy content of this page