May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಶಾಲಾ ಆವರಣದಲ್ಲಿ ನಡೆಯುವ ಕಲಿಕಾ ಪೂರಕ ಚಟುವಟಿಕೆಗಳು ಶೈಕ್ಷಣಿಕವಾಗಿ ಬಹು ಮುಖ್ಯ ಪಾತ್ರವನ್ನು ಹೊಂದುತ್ತವೆ – ಕೆ. ಸಂಜೀವ ಪೂಜಾರಿ

ಬಂಟ್ವಾಳ : ಶಾಲಾ ಆವರಣದಲ್ಲಿ ನಡೆಯುವ ಕಲಿಕಾ ಪೂರಕ ಚಟುವಟಿಕೆಗಳು ಶೈಕ್ಷಣಿಕವಾಗಿ ಬಹು ಮುಖ್ಯ ಪಾತ್ರವನ್ನು ವಹಿಸುತ್ತದೆ. ವಿದ್ಯಾರ್ಥಿಗಳು ತಮ್ಮ ನಿತ್ಯ ಜೀವನದಲ್ಲಿ ಪರಿಸರದ ಕಾಳಜಿಯನ್ನು ವಹಿಸಿಕೊಂಡು ರೂಢಿಗೊಳಿಸಿದಾಗ ಮುಂದಿನ ದಿನಗಳಲ್ಲಿ ಪರಿಸರದ ಪ್ರಜ್ಞೆಯನ್ನು ಮೂಡಿಸುತ್ತದೆ. ಆದುದರಿಂದ ಶಾಲೆಗಳಲ್ಲಿ ಪರಿಸರ ಸಂರಕ್ಷಣೆ ಕುರಿತು ವಿದ್ಯಾರ್ಥಿಗಳನ್ನು ಜಾಗೃತಗೊಳಿಸಬೇಕು ಎಂದು 2024ರ ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ನಿ. ಸಜೀಪ ಮೂಡ ಇದರ ಅಧ್ಯಕ್ಷ ಕೆ. ಸಂಜೀವ ಪೂಜಾರಿ ಹೇಳಿದರು.

ಅವರು ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಜಿ ಇಲ್ಲಿ ಶಾಲಾ ಆವರಣದಲ್ಲಿ ಹಣ್ಣಿನ ಗಿಡವನ್ನು ನೆಟ್ಟು ಪರಿಸರ ಪ್ರಜ್ಞೆಯನ್ನು ಮೂಡಿಸಿ ತಾಂತ್ರಿಕತೆ ಮೂಲಕ ಶಿಕ್ಷಣವನ್ನು ಪಡೆಯಲು ಸಹಾಯವಾಗುವಂತೆ ಶಾಲೆಗೆ ಸ್ಮಾರ್ಟ್ ಟಿವಿಯನ್ನು ಕೊಡುಗೆಯಾಗಿ ನೀಡಿ ಮಾತನಾಡಿದರು.

ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಪಿ.ಡಬ್ಲ್ಯೂ.ಡಿ. ಗುತ್ತಿಗೆದಾರ ಸಂಘದ ಅಧ್ಯಕ್ಷ ಶೈಲೇಶ್ ಪೂಜಾರಿ ಕುರ್ಚಿಗುಡ್ಡೆ, ಜಯಶಂಕರ್ ಕಾನ್ಸ್ ಲೆ ನಿರ್ದೇಶಕರು ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ನಿ. ಸಜೀಪ ಮೂಡ, ಕಿಶೋರ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಕ್ಷಿಣ ಕನ್ನಡ ಜಿಲ್ಲಾ ಮೂರ್ತೆದಾರರ ಮಹಾಮಂಡಳ ಸಹಕಾರಿ ಸಂಘ ನಿ. ಬಿ.ಸಿ. ರೋಡ್, ಇಕ್ಬಾಲ್  ನಂದಾವರ ಮೊದಲಾದವರು ಉಪಸ್ಥಿತರಿದ್ದರು.

ಶಿಕ್ಷಕಿ ಸಂಗೀತ ಶರ್ಮ ಪಿ.ಜಿ. ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕ ಇಂದುಶೇಖರ್ ವಂದಿಸಿದರು. ಶಾಲಾ ಶಿಕ್ಷಕಿಯರು ಉಪಸ್ಥಿತರಿದ್ದರು.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page