February 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಶಾಲಾ ಆವರಣದಲ್ಲಿ ನಡೆಯುವ ಕಲಿಕಾ ಪೂರಕ ಚಟುವಟಿಕೆಗಳು ಶೈಕ್ಷಣಿಕವಾಗಿ ಬಹು ಮುಖ್ಯ ಪಾತ್ರವನ್ನು ಹೊಂದುತ್ತವೆ – ಕೆ. ಸಂಜೀವ ಪೂಜಾರಿ

ಬಂಟ್ವಾಳ : ಶಾಲಾ ಆವರಣದಲ್ಲಿ ನಡೆಯುವ ಕಲಿಕಾ ಪೂರಕ ಚಟುವಟಿಕೆಗಳು ಶೈಕ್ಷಣಿಕವಾಗಿ ಬಹು ಮುಖ್ಯ ಪಾತ್ರವನ್ನು ವಹಿಸುತ್ತದೆ. ವಿದ್ಯಾರ್ಥಿಗಳು ತಮ್ಮ ನಿತ್ಯ ಜೀವನದಲ್ಲಿ ಪರಿಸರದ ಕಾಳಜಿಯನ್ನು ವಹಿಸಿಕೊಂಡು ರೂಢಿಗೊಳಿಸಿದಾಗ ಮುಂದಿನ ದಿನಗಳಲ್ಲಿ ಪರಿಸರದ ಪ್ರಜ್ಞೆಯನ್ನು ಮೂಡಿಸುತ್ತದೆ. ಆದುದರಿಂದ ಶಾಲೆಗಳಲ್ಲಿ ಪರಿಸರ ಸಂರಕ್ಷಣೆ ಕುರಿತು ವಿದ್ಯಾರ್ಥಿಗಳನ್ನು ಜಾಗೃತಗೊಳಿಸಬೇಕು ಎಂದು 2024ರ ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ನಿ. ಸಜೀಪ ಮೂಡ ಇದರ ಅಧ್ಯಕ್ಷ ಕೆ. ಸಂಜೀವ ಪೂಜಾರಿ ಹೇಳಿದರು.

ಅವರು ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಜಿ ಇಲ್ಲಿ ಶಾಲಾ ಆವರಣದಲ್ಲಿ ಹಣ್ಣಿನ ಗಿಡವನ್ನು ನೆಟ್ಟು ಪರಿಸರ ಪ್ರಜ್ಞೆಯನ್ನು ಮೂಡಿಸಿ ತಾಂತ್ರಿಕತೆ ಮೂಲಕ ಶಿಕ್ಷಣವನ್ನು ಪಡೆಯಲು ಸಹಾಯವಾಗುವಂತೆ ಶಾಲೆಗೆ ಸ್ಮಾರ್ಟ್ ಟಿವಿಯನ್ನು ಕೊಡುಗೆಯಾಗಿ ನೀಡಿ ಮಾತನಾಡಿದರು.

ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಪಿ.ಡಬ್ಲ್ಯೂ.ಡಿ. ಗುತ್ತಿಗೆದಾರ ಸಂಘದ ಅಧ್ಯಕ್ಷ ಶೈಲೇಶ್ ಪೂಜಾರಿ ಕುರ್ಚಿಗುಡ್ಡೆ, ಜಯಶಂಕರ್ ಕಾನ್ಸ್ ಲೆ ನಿರ್ದೇಶಕರು ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ನಿ. ಸಜೀಪ ಮೂಡ, ಕಿಶೋರ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಕ್ಷಿಣ ಕನ್ನಡ ಜಿಲ್ಲಾ ಮೂರ್ತೆದಾರರ ಮಹಾಮಂಡಳ ಸಹಕಾರಿ ಸಂಘ ನಿ. ಬಿ.ಸಿ. ರೋಡ್, ಇಕ್ಬಾಲ್  ನಂದಾವರ ಮೊದಲಾದವರು ಉಪಸ್ಥಿತರಿದ್ದರು.

ಶಿಕ್ಷಕಿ ಸಂಗೀತ ಶರ್ಮ ಪಿ.ಜಿ. ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕ ಇಂದುಶೇಖರ್ ವಂದಿಸಿದರು. ಶಾಲಾ ಶಿಕ್ಷಕಿಯರು ಉಪಸ್ಥಿತರಿದ್ದರು.

You may also like

News

ದಾಯ್ಜಿವರ್ಲ್ಡ್@25: ಮಾನವೀಯ ಮೌಲ್ಯಗಳ ಮಾಧ್ಯಮ ಕ್ರಾಂತಿ – ಅನಿವಾಸಿ ಉದ್ಯಮಿ ಡಾ. ರೊನಾಲ್ಡ್ ಕೊಲಾಸೊ ಶ್ಲಾಘನೆ

ಮಂಗಳೂರು: “ಕೇವಲ ಸುದ್ದಿ ಪ್ರಸಾರ ಮಾಡುವುದಷ್ಟೇ ಅಲ್ಲದೆ, ಸಂಕಷ್ಟದಲ್ಲಿರುವವರಿಗೆ ನೆರವಾಗುವ ಮೂಲಕ ‘ ದಾಯ್ಜಿವರ್ಲ್ಡ್ ‘ ಮಾಧ್ಯಮ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಮಾಡಿದೆ,” ಎಂದು ಅನಿವಾಸಿ ಭಾರತೀಯ
News

ಮಂಗಳೂರಿನಲ್ಲಿ ಸಂತ ಆಂತೋನಿ ಪುಣ್ಯ ಅವಶೇಷಗಳ ಹಬ್ಬದ ಭವ್ಯ ಆಚರಣೆ

ನಮ್ಮ ಮಾತುಗಳು ಇತರರಿಗೆ ನೋವು ನೀಡುವ ಬದಲು ಭರವಸೆ ಮತ್ತು ಸಾಂತ್ವನ ನೀಡುವಂತಿರಲಿ – ನಿವೃತ್ತ ಆರ್ಚ್ ಬಿಷಪ್ ಡಾ| ಬರ್ನಾರ್ಡ್ ಮೊರಾಸ್ ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ

You cannot copy content of this page