September 20, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕೋಟೆಕಾರು ವ್ಯವಸಾಯ ಬ್ಯಾಂಕ್ ದರೋಡೆ ಪ್ರಕರಣ – ನಾಲ್ವರ ಬಂಧನ  

ಆರೋಪಿಗಳಿಂದ 18.314 ಕೆಜಿ ಚಿನ್ನ ವಶ

ಮಂಗಳೂರು: ತಲಪಾಡಿಯ ಕೋಟೇಕಾರ್ ವ್ಯವಸಾಯ ಸೇವಾ ಸಹಕಾರಿ ಸಂಘ (ಎನ್) ನಲ್ಲಿ ಜನವರಿ 17ರಂದು ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ತಮಿಳು ನಾಡಿನ ಕನ್ನನ್ ಮಣಿ (36), ಮುರುಗಂಡಿ ದೇವರ್ (36), ಯೋಸುವ ರಾಜೇಂದ್ರನ್ (35) ಮತ್ತು ಎಂ. ಶಣ್ಮುಗ ಸುಂದರಂ (65) ಎಂದು ಗುರುತಿಸಲಾಗಿದೆ.

ಬಂಧಿತರಿಂದ 18.314 ಕೆಜಿ ಚಿನ್ನ, ಎರಡು ಪಿಸ್ತೂಲ್‌ಗಳು, ಮೂರು ಸಜೀವ ಗುಂಡುಗಳು, ಎರಡು ಕೊಡಲಿಗಳು, ಪರಾರಿಯಾದ ಫಿಯೆಟ್ ಕಾರು ಮತ್ತು ನಕಲಿ ನಂಬರ್ ಪ್ಲೇಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ನಗರ‌‌ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ಇಂದು ಜನವರಿ 27ರಂದು ಸೋಮವಾರ ಕರೆದ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ. ನಾಲ್ವರು ಶಸ್ತ್ರಸಜ್ಜಿತ ಮತ್ತು ಮುಖವಾಡ ಧರಿಸಿದ ವ್ಯಕ್ತಿಗಳು ಬ್ಯಾಂಕಿಗೆ ನುಗ್ಗಿ, ಸಿಬ್ಬಂದಿಯನ್ನು ಭಯಭೀತಗೊಳಿಸಿ ದೊಡ್ಡ ಪ್ರಮಾಣದ ನಗದು ಮತ್ತು ಚಿನ್ನಾಭರಣಗಳನ್ನು ದೋಚಿದ್ದರು. ಜನವರಿ 17ರಂದು ಮಧ್ಯಾಹ್ನ 1:00 ರಿಂದ 1:20 ರ ನಡುವೆ ನಡೆದ ಈ ಘಟನೆಯು ಸ್ಥಳೀಯರಲ್ಲಿ‌ ಆತಂಕ ಉಂಟು ಮಾಡಿತ್ತು.

ಪತ್ರಿಕಾ ಗೋಷ್ಠಿಯಲ್ಲಿ ಡಿಸಿಪಿ ಸಿದ್ದಾರ್ಥ್ ಗೋಯಲ್, ರವಿಶಂಕರ್, ಎಸಿಪಿ ಧನ್ಯಾ ನಾಯಕ್, ಮನೋಜ್ ನಾಯ್ಕ್ ಉಪಸ್ಥಿತರಿದ್ದರು.

You may also like

News

ಸಾಣೂರು ಜಂಕ್ಷನ್‌ನಲ್ಲಿ ಮಾಜಿ ಸಚಿವ ರಮಾನಾಥ ರೈ ಕಾರಿಗೆ ಬಸ್ ಡಿಕ್ಕಿ – ಹಲವರಿಗೆ ಗಾಯ

ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಮುಖಂಡ ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಖಾಸಗಿ ಬಸ್‌ ಡಿಕ್ಕಿ ಹೊಡೆದ ಘಟನೆ ಇಂದು ಸೆಪ್ಟೆಂಬರ್ 20ರಂದು ಭಾನುವಾರ ಕಾರ್ಕಳ–ಮೂಡುಬಿದಿರೆ
News

ಬಂಟ್ವಾಳ ಲೋಕ ಅದಾಲತ್ – 12,400 ಪ್ರಕರಣ ಇತ್ಯರ್ಥ

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಬಂಟ್ವಾಳದ ಬಿ.ಸಿ. ರೋಡ್ ನ್ಯಾಯಾಲಯದಲ್ಲಿ ಸೆಪ್ಟೆಂಬರ್ 19ರಂದು ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 13,223 ಪ್ರಕರಣಗಳನ್ನು ಪರಿಗಣಿಸಿ,

You cannot copy content of this page