March 26, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಆರೋಪಿಗಳಿಗೆ ನೋಟಿಸ್ ನೀಡಲು ಪೊಲೀಸರು ವಾಟ್ಸ್ಆ್ಯಪ್ ಅಥವಾ ಇತರ ಎಲೆಕ್ಟ್ರಾನಿಕ್ ಸಾಧನ ಬಳಸುವಂತಿಲ್ಲ – ಸುಪ್ರೀಂ ಕೋರ್ಟ್

ಪೊಲೀಸರು ಆರೋಪಿಗಳಿಗೆ ನೋಟಿಸ್ ನೀಡಲು ವಾಟ್ಸ್ಆ್ಯಪ್ ಅಥವಾ ಇತರ ಎಲೆಕ್ಟ್ರಾನಿಕ್ ಸಾಧನ ಬಳಸುವಂತಿಲ್ಲ. ಈ ರೀತಿ ನೀಡಿದ ನೋಟಿಸ್ ಸೇವೆಯನ್ನು ಕ್ರಿಮಿನಲ್ ಪ್ರೊಸೀಜರ್ ಕೋಡ್ ಅಥವಾ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಅಡಿಯಲ್ಲಿ ಪರಿಗಣಿಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

ನ್ಯಾಯಮೂರ್ತಿಗಳಾದ ಎಂ.ಎಂ. ಸುಂದ್ರೇಶ್ ಮತ್ತು ರಾಜೇಶ್ ಬಿಂದಾಲ್ ಅವರ ಪೀಠ ಈ ಆದೇಶ ಹೊರಡಿಸಿದ್ದು, ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 1973ರ ಸಿಆರ್‌ಪಿಸಿ ಸೆಕ್ಷನ್ 41-ಎ ಅಥವಾ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ (ಬಿಎನ್‌ಎಸ್‌ಎಸ್) ಸೆಕ್ಷನ್ 35ರ ಅಡಿಯಲ್ಲಿ ಸೂಚಿಸಲಾದ ಸೇವಾ ವಿಧಾನದ ಮೂಲಕ ಮಾತ್ರ ನೋಟಿಸ್‌ಗಳನ್ನು ಹೊರಡಿಸುವಂತೆ ಪೊಲೀಸರಿಗೆ ನಿರ್ದೇಶಿಸಿದೆ. ಈ ವಿಚಾರವಾಗಿ ಅಮಿಕಸ್ ಕ್ಯೂರಿಯಾಗಿ ಕಾರ್ಯನಿರ್ವಹಿಸಿದ ಹಿರಿಯ ವಕೀಲ ಸಿದ್ದಾರ್ಥ್ ಲೂಡ್ರಾ ಅವರ ಸಲಹೆಯನ್ನು ನ್ಯಾಯಪೀಠ ಪರಿಗಣಿಸಿದೆ ಎನ್ನಲಾಗಿದೆ. ಸಾಮಾನ್ಯ ಸೇವಾ ವಿಧಾನವನ್ನು ಅನುಸರಿಸುವ ಬದಲು ವಾಟ್ಸ್ಆ್ಯಪ್ ಅಥವಾ ಇತರ ಎಲೆಕ್ಟ್ರಾನಿಕ್ ಸಾಧನಗಳ ಮೂಲಕ ನೋಟಿಸ್‌ಗಳನ್ನು ನೀಡುವ ಮೂಲಕ ಪೊಲೀಸರು ಕಾನೂನಿನ ಆದೇಶವನ್ನು ತಪ್ಪಿಸಬಾರದು ಎಂದು ಅವರು ತಿಳಿಸಿದ್ದಾರೆ.

ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಸೆಕ್ಷನ್ 532ರ ಅಡಿಯಲ್ಲಿ ಪ್ರಕರಣವೊಂದರ ವಿಚಾರಣೆ ಮತ್ತು ಪ್ರಕ್ರಿಯೆಗಳನ್ನು ಎಲೆಕ್ಟ್ರಾನಿಕ್ ಸಂವಹನ ಅಥವಾ ಆಡಿಯೊ-ವಿಡಿಯೊ ಮೂಲಕವು ನಡೆಸಬಹುದು. ಆದರೆ, ಬಿಎನ್‌ಎಸ್‌ಎಸ್ ಸೆಕ್ಷನ್ 35ರ ಅಡಿಯಲ್ಲಿ ನೋಟಿಸ್ ಅನ್ನು ವಾಟ್ಸ್ಆ್ಯಪ್ ಅಥವಾ ಇತರ ಎಲೆಕ್ಟ್ರಾನಿಕ್ ಸಾಧನಗಳ ಮೂಲಕ ನೀಡಲು ಅನುಮತಿಯಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟನೆ ನೀಡಿದೆ.

You may also like

News

ದಲಿತ ಅಪ್ರಾಪ್ತ ವಿದ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಬಿಜೆಪಿ ಮುಖಂಡ ಮಹೇಶ್ ಭಟ್ ಬಂಧನಕ್ಕೆ ಡಿಎಚ್ಎಸ್ ಒತ್ತಾಯ – ಕಠಿಣ ಕ್ರಮಕ್ಕೆ ಆಗ್ರಹ

ಬಂಟ್ವಾಳ ತಾಲೂಕಿನ ವಿಟ್ಲದ ಮುರುವ ಎಂಬಲ್ಲಿ ದಲಿತ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳಿಗೆ ಸ್ಥಳೀಯ ಬಿಜೆಪಿ ಮುಖಂಡ ಮಹೇಶ್ ಭಟ್ ಎಂಬವನು ನಿರಂತರ ಲೈಂಗಿಕ ಕಿರುಕುಳ ನೀಡುವ ಮೂಲಕ ಮಾನಸಿಕ
News

ನೇತ್ರದಾನದಿಂದ ಇನ್ನೊಬ್ಬರ ಬಾಳಿಗೆ ಬೆಳಕು – ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ

ಮಂಗಳೂರು : ಇನ್ನೊಬ್ಬರ ಬಾಳಿಗೆ ಬೆಳಕಾಗುವ ನೇತ್ರದಾನ ಶ್ರೇಷ್ಠ ದಾನವಾಗಿದ್ದು, ನೇತ್ರದಾನಿಗಳ ಬದ್ಧತೆ ಸಮಾಜಕ್ಕೆ ಮಾದರಿಯಾಗಿದೆ ಎಂದು ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ ಹೇಳಿದರು. ದಕ್ಷಿಣ ಕನ್ನಡ

You cannot copy content of this page