April 26, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಫೈನಾನ್ಸ್ ಕಂಪೆನಿಯಿಂದ ಕಿರುಕುಳ ಆರೋಪ – ನದಿಗೆ ಹಾರಿ ಪ್ರಾಣಬಿಟ್ಟ ಶಿಕ್ಷಕಿ

ಹೊನ್ನಾಳಿ: ಫೈನಾನ್ಸ್ ಕಂಪೆನಿಯ ಕಿರುಕುಳ ತಾಳಲಾರದೇ ಶಿಕ್ಷಕಿಯೋರ್ವರು ತುಂಗಭದ್ರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಶಿಕ್ಷಕಿಯ ಮೃತದೇಹ ಇಂದು ಜನವರಿ 28ರಂದು ಮಂಗಳವಾರ ಬೆಳಿಗ್ಗೆ ಪತ್ತೆಯಾಗಿದೆ. ಹೊನ್ನಾಳಿಯ ದುರ್ಗಿಗುಡಿ ಪ್ರದೇಶದಲ್ಲಿ ವಾಸವಾಗಿರುವ ಸರ್ಕಾರಿ ಶಾಲಾ ಶಿಕ್ಷಕಿ 46 ವರ್ಷ ಪ್ರಾಯದ ಪುಷ್ಪಲತಾರವರು ಭಾನುವಾರ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದರು. ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಡೈವಿಂಗ್ ತಜ್ಞರು ಜನವರಿ 27ರಂದು ಸೋಮವಾರ ಬೆಳಿಗ್ಗೆಯಿಂದ ಶೋಧ ಕಾರ್ಯಾಚರಣೆ ನಡೆಸುತ್ತಿದ್ದರು.

ಫೈನಾನ್ಸ್ ಕಂಪನಿಯ ಕಿರುಕುಳದಿಂದಾಗಿ ಪುಷ್ಪಲತಾ ತುಂಗಭದ್ರಾ ನದಿಗೆ ಹಾರಿ ತನ್ನ ಜೀವನವನ್ನು ಕೊನೆಗೊಳಿಸಿದ್ದಾಳೆ ಎಂದು ಕುಟುಂಬ ಆರೋಪಿಸಿದೆ. ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲ್ಲೂಕಿನ ತುಮಿನಕಟ್ಟಿ ಗ್ರಾಮದ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯಲ್ಲಿ ಪುಷ್ಪಲತಾ ಕೆಲಸ ಮಾಡುತ್ತಿದ್ದರು. ನದಿಗೆ ಜಿಗಿಯುವ ಮುನ್ನ ರಾಘವೇಂದ್ರ ಮಠದ ಬಳಿ ಆಕೆ ಕುಳಿತಿದ್ದ ಸಿಸಿಟಿವಿ ದೃಶ್ಯಾವಳಿ ಲಭ್ಯವಾಗಿದೆ. ಮನೆ ನಿರ್ಮಿಸಲು ನಾವು ಫೈನಾನ್ಸ್ ಕಂಪನಿಯಿಂದ 40 ಲಕ್ಷ ರೂಪಾಯಿ ಮತ್ತು ಖಾಸಗಿ ಸಾಲದಾತರಿಂದ 20 ಲಕ್ಷ ರೂಪಾಯಿ ಸಾಲ ಪಡೆದಿದ್ದೇವೆ.

ಆಗಾಗ್ಗೆ ಮನೆ ಮತ್ತು ಶಾಲೆಗೆ ಭೇಟಿ ನೀಡುವ ಮೂಲಕ ಸಾಲದ ಮರುಪಾವತಿಗಾಗಿ ಫೈನಾನ್ಸ್ ಕಂಪನಿ ನಮಗೆ ಒತ್ತಡ ಹೇರುತ್ತಿತ್ತು, ಇದು ಶಿಕ್ಷಕಿ ಆತ್ಮಹತ್ಯೆ ನಿರ್ಧಾರ ತೆಗೆದುಕೊಳ್ಳಲು ಕಾರಣವಾಯಿತು” ಎಂದು ಪುಷ್ಪಲತಾ ಅವರ ಪತಿ ಹಾಲೇಶ್ ತಿಳಿಸಿದರು. ಸಾಲ ವಸೂಲಿಗಾಗಿ ಮನೆಗೆ ಹೋದಾಗ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಫೈನಾನ್ಸ್ ಕಂಪನಿ 20 ದಿನಗಳ ಹಿಂದೆ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ದಂಪತಿ ವಿರುದ್ಧ ದೂರು ದಾಖಲಿಸಿತ್ತು. ಎರಡೂ ಕಡೆಯವರನ್ನು ಕರೆಸಿ ವಿಚಾರಣೆ ನಡೆಸಿದ ನಂತರ, ಹಣಕಾಸು ಕಂಪನಿ ದೂರನ್ನು ಹಿಂತೆಗೆದುಕೊಂಡಿತು. ಸಾಲದ ಹೊರೆಯಿಂದ ತಪ್ಪಿಸಿಕೊಳ್ಳಲು ತಮ್ಮ ಮನೆಯನ್ನು ಮಾರಾಟ ಮಾಡಲು ದಂಪತಿಗಳು ಯೋಚಿಸುತ್ತಿದ್ದರು. ಅಷ್ಟರಲ್ಲೇ ಶಿಕ್ಷಕಿ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ.

You may also like

News

ಕ್ರಿಶ್ಚಿಯನ್ ಜಗದ್ಗುರು ಪೋಪ್ ಫ್ರಾನ್ಸಿಸ್ ರವರಿಗೆ ಮಂಗಳೂರಿನಲ್ಲಿ ಅರ್ಪಿಸಿದ ಸರ್ವಧರ್ಮ ಶ್ರದ್ಧಾಂಜಲಿ

ಮಂಗಳೂರು ಧರ್ಮಕ್ಷೇತ್ರದ ವತಿಯಿಂದ ಕಥೊಲಿಕರ ಪರಮೋಚ್ಛ ಜಗದ್ಗುರು ಪೋಪ್ ಫ್ರಾನ್ಸಿಸ್ ಅವರಿಗೆ ಶ್ರದ್ಧಾಂಜಲಿ ಸಭೆ ಇಂದು ಎಪ್ರಿಲ್ 25ರಂದು ಶುಕ್ರವಾರ ನಗರದ ಮಿಲಾಗ್ರಿಸ್ ಚರ್ಚ್ ವಠಾರದಲ್ಲಿ ನಡೆಸಲಾಯಿತು.
News

ಕ್ರಿಮಿನಲ್ ಆರೋಪ ಹೊತ್ತ ಸರ್ಕಾರಿ ನೌಕರರ ಉದ್ಯೋಗಕ್ಕೆ ಕಂಟಕ – ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು

ಸರಕಾರಿ ನೌಕರರಾಗಿ ನೇಮಕಗೊಳ್ಳಲು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿರಬಾರದು ಎಂಬ ನಿಯಮವಿದೆ. ಅದೇ ರೀತಿಯ ಆರೋಪ ಹೊತ್ತ ಸರಕಾರಿ ನೌಕರರನ್ನು ವಜಗೊಳಿಸಲು ಯಾವುದೇ ಅಡ್ಡಿ ಇಲ್ಲ ಎಂದು ಕರ್ನಾಟಕ

You cannot copy content of this page