April 21, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ರಸ್ತೆ ಬದಿಯಲ್ಲಿರುವ ಅಪಾಯಕಾರಿ ಒಣ ಮರ ತೆರವುಗೊಳಿಸುವಂತೆ ಜೆರಾರ್ಡ್ ಟವರ್ಸ್ ರವರಿಂದ ವಿನೂತನ ಪ್ರತಿಭಟನೆ

ಮರ ಬಿದ್ದು ಸಾರ್ವಜನಿಕರಿಗೆ ಆಗುವ ಅನಾಹುತಗಳ ಮೊದಲು ತೆರವು ಮಾಡುವಂತೆ ಅಧಿಕಾರಿಗಳಿಗೆ ಆಗ್ರಹ

ಏಕಾಂಕಿಯಾಗಿ ಪ್ರತಿಭಟನೆ ನಡೆಸಿ ಸಾರ್ವಜನಿಕರ ಗಮನ ಸೆಳೆದ ಸಾಮಾಜಿಕ ಕಾರ್ಯಕರ್ತ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಕದ್ರಿ ಶಿವಭಾಗ್ ಬಸ್ ಸ್ಟ್ಯಾಂಡ್ ಬಳಿ ಅಪಾಯಕಾರಿ ಸ್ಥಿತಿಯಲ್ಲಿರುವ ಒಣ ಮರ ತೆರವುಗೊಳಿಸುವಂತೆ ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತರಾದ ಜೆರಾರ್ಡ್ ಟವರ್ಸ್ ರವರು ವಿನೂನತ ರೀತಿಯಲ್ಲಿ ಏಕಾಂಗಿಯಾಗಿ ಪ್ರತಿಭಟನೆ ನಡೆಸಿ ಸಾರ್ವಜನಿಕರ ಗಮನ ಸೆಳೆದಿದ್ದಾರೆ ಹಾಗೂ ವ್ಯಾಪಕ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ಹಲವು ಬಾರಿ ಈ ಮರವನ್ನು ತೆರವುಗೊಳಿಸಿ ಸಾರ್ವಜನಿಕರಿಗೆ ಆಗುವ ಅನಾಹುತಗಳಿಂದ ರಕ್ಷಿಸುವಂತೆ ಲಿಖಿತವಾಗಿ ದೂರನ್ನು ನೀಡಿದರೂ, ವಿನಂತಿಸಿದರೂ ಯಾವುದೇ ಪ್ರತಿಕ್ರಿಯೆ ಬಾರದ ಕಾರಣ ಇಂದು ಜನವರಿ 28ರಂದು ಮಂಗಳವಾರ ವಿನೂತನ ಪ್ರತಿಭಟನೆಯನ್ನು ಮಾಡಿ ಮಂಗಳೂರ್ ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ಎಚ್ಚರಿಕೆಯ ಗಂಟೆ ಬಾರಿಸಿದ್ದಾರೆ.

ಒಣ ಮರ ಬಿದ್ದು ಜನರಿಗಾಗಲೀ, ಯಾವುದೇ ವಾಹನಗಳಿಗಾಗಲೀ ನಷ್ಟವುಂಟಾದಲ್ಲಿ ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ಹೊಣೆ ಮಾಡಬೇಕೆಂದು ಪ್ರತಿಭಟನೆಯ ಸಂದಭದಲ್ಲಿ ಆಗ್ರಹಿಸಿದ್ದಾರೆ. ಬೇರೆ ಬೇರೆ ಸ್ಥಳಗಳಲ್ಲಿ ಅನೇಕ ಅನಾಹುತಗಳು ಸಂಭವಿಸಿ ನಷ್ಟ ಅನುಭವಿಸಿದರೂ ಈ ಒಣ ಮರವನ್ನು ತೆಗೆಯದೇ ದಿನ ನಿತ್ಯ ಇದೇ ಮಾರ್ಗದಲ್ಲಿ ಸಂಚರಿಸುವ ಕಾರ್ಪೊರೇಟರ್, ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಣ್ಣು ಕಾಣುವುದಿಲ್ಲವೇ? ಎಂಬ ಪ್ರಶ್ನೆಯನ್ನು ಮಾಧ್ಯಮದ ಮುಖಾಂತರ ಕೇಳಿದರು.

ಈ ಒಣ ಮರವನ್ನು ಕೂಡಲೇ ತೆಗೆಯದಿದ್ದಲ್ಲಿ ಮುಂದಿನ ದಿನಗಳಲ್ಲಿ ಇನ್ನೂ ಬೇರೆ ಬೇರೆ ರೀತಿಯಲ್ಲಿ ಪ್ರತಿಭಟನೆಯನ್ನು ಮಾಡಿ ಎಚ್ಚರಿಸುತ್ತೇನೆ ಎಂದು ಖಡ್ಡಕ್ಕಾಗಿ ಹೇಳಿದರು.

You may also like

News

MLC ಐವನ್ ಡಿಸೋಜ ಹಾಗೂ ಕಥೊಲಿಕ್ ಸಭಾ ಕೇಂದ್ರಿಯ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ರವರಿಂದ ಬಿಷಪ್ಸ್ ಹೌಸ್ ನಲ್ಲಿ ಪೋಪ್ ರವರಿಗೆ ಅಂತಿಮ ನಮನ

ಕ್ರಿಶ್ಚಿಯನ್ನರ ಪರಮೋಚ್ಚ ಜಗದ್ಗುರು ಪೋಪ್ ಫ್ರಾನ್ಸಿಸ್ ರವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಇಂದು ಎಪ್ರಿಲ್ 21ರಂದು ಸೋಮವಾರ ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ| ಪೀಟರ್
News

ಜಗದ್ಗುರು ಪೋಪ್ ಫ್ರಾನ್ಸಿಸ್ ಇನ್ನಿಲ್ಲ

ಲ್ಯಾಟಿನ್ ಅಮೆರಿಕದ ಮೊದಲ ಪೋಪ್ ಮತ್ತು ಆಧುನಿಕ ರೋಮನ್ ಕ್ಯಾಥೋಲಿಕ್ ಚರ್ಚ್‌ನಲ್ಲಿ ಪರಿವರ್ತನಾಶೀಲ ವ್ಯಕ್ತಿಯಾಗಿದ್ದ ಜಗದ್ಗುರು ಪೋಪ್ ಫ್ರಾನ್ಸಿಸ್ ಇಂದು ಏಪ್ರಿಲ್ 21ರಂದು ಸೋಮವಾರ ತಮ್ಮ 88

You cannot copy content of this page