September 2, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ರಾಷ್ಟ್ರೀಯ ಹೆದ್ದಾರಿ 63ರಲ್ಲಿ ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರ್ ನಲ್ಲಿ ಒಂದು ಕೋಟಿ ರೂಪಾಯಿ ಪತ್ತೆ

ಕಾರವಾರ: ರಾಷ್ಟ್ರೀಯ ಹೆದ್ದಾರಿ 63ರಲ್ಲಿ ರಾಮನಗುಳಿ ಬಳಿ ನಿಲ್ಲಿಸಿದ್ದ ಕಾರ್ ನಲ್ಲಿ ಒಂದು ಕೋಟಿ ರೂಪಾಯಿ ಪತ್ತೆಯಾಗಿದೆ. ಕಾರ್ ನಲ್ಲಿ ಯಾರು ಇರಲಿಲ್ಲ ಎನ್ನಲಾಗಿದೆ. ಕಾರ್ ಗೆ ಹಾಕಿದ ನಂಬರ್ ಪ್ಲೇಟ್ ಫೇಕ್ ಎಂದು ಗೊತ್ತಾಗಿದೆ. ಕಾರ್ ಮಂಗಳೂರು ಮೂಲದವರದ್ದು ಎಂದು ಇದೀಗ ತನಿಖೆಯಿಂದ ಬೆಳಕಿಗೆ ಬಂದಿದೆ. ಅಂಕೋಲಾದಿಂದ ಬಂದ ಪೊಲೀಸರು ಕಾರ್ ವಶಕ್ಕೆ ಪಡೆದು ಅದರಲ್ಲಿನ ಒಂದು ಕೋಟಿ ವಶಪಡಿಸಿಕೊಂಡಿದ್ದಾರೆ.

ಅಂಕೋಲಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೆತ್ತಿಕೊಂಡಿದ್ದಾರೆ. ಯಲ್ಲಾಪುರ ಅಂಕೋಲಾ ನಡುವಿನ ಹೆದ್ದಾರಿಯಲ್ಲಿ ರಾಮನಗುಳಿ ಗ್ರಾಮ ಇದೆ. ಇಲ್ಲಿ ಜನವರಿ 28ರಂದು ಮಂಗಳವಾರ ಸಂಜೆ ನಿರ್ಜನ ಪ್ರದೇಶದಲ್ಲಿ ಯಾರು ಕಾರು ನಿಲ್ಲಿಸಿ ಹೋದರು ಎಂಬುದು ಬೆಳಕಿಗೆ ಬರಬೇಕಿದೆ.

 

You may also like

News

ಪುತ್ತೂರು ಪ್ರೆಸ್ ಕ್ಲಬ್ ಎದುರು ಸಾರ್ವಜನಿಕ ಶಾಂತಿಗೆ ಭಂಗ – ಮೂವರ ವಿರುದ್ಧ ಎಫ್‌ಐಆರ್ ದಾಖಲು

ಪುತ್ತೂರು: ಸಾರ್ವಜನಿಕ ಸ್ಥಳದಲ್ಲಿ ಗುಂಪು ಸೇರಿ ಗಲಾಟೆ ನಡೆಸಿ, ಸಾರ್ವಜನಿಕ ಶಾಂತಿಗೆ ಭಂಗ ತಂದಿರುವ ಘಟನೆಗೆ ಸಂಬಂಧಿಸಿದಂತೆ ಮೂವರು ವ್ಯಕ್ತಿಗಳು ಸೇರಿದಂತೆ ಇತರರ ವಿರುದ್ಧ ಪುತ್ತೂರು ನಗರ
News

 ‘ರಾಕ್ಣೊ’ ಸಾಹಿತ್ಯ ಪ್ರಶಸ್ತಿ–2026 ಘೋಷಣೆ

ಸಂಪಾದಕರಾದ ಫಾದರ್ ರೂಪೇಶ್ ಮಾಡ್ತಾ ಅವರಿಂದ ಪ್ರಕಟಣೆ ಮಂಗಳೂರಿನಿಂದ ಪ್ರಕಟವಾಗುತ್ತಿರುವ ಕೊಂಕಣಿ–ಇಂಗ್ಲಿಷ್ ದ್ವಿಭಾಷಾ ವಾರಪತ್ರಿಕೆ ‘ರಾಕ್ಣೊ’ ತನ್ನ ವಾರ್ಷಿಕ ‘ರಾಕ್ಣೊ ಸಾಹಿತ್ಯ ಪ್ರಶಸ್ತಿ–2026’ ಅನ್ನು ಸೆಪ್ಟೆಂಬರ್ 1ರಂದು

You cannot copy content of this page