April 26, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ರಾಷ್ಟ್ರೀಯ ಹೆದ್ದಾರಿ 63ರಲ್ಲಿ ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರ್ ನಲ್ಲಿ ಒಂದು ಕೋಟಿ ರೂಪಾಯಿ ಪತ್ತೆ

ಕಾರವಾರ: ರಾಷ್ಟ್ರೀಯ ಹೆದ್ದಾರಿ 63ರಲ್ಲಿ ರಾಮನಗುಳಿ ಬಳಿ ನಿಲ್ಲಿಸಿದ್ದ ಕಾರ್ ನಲ್ಲಿ ಒಂದು ಕೋಟಿ ರೂಪಾಯಿ ಪತ್ತೆಯಾಗಿದೆ. ಕಾರ್ ನಲ್ಲಿ ಯಾರು ಇರಲಿಲ್ಲ ಎನ್ನಲಾಗಿದೆ. ಕಾರ್ ಗೆ ಹಾಕಿದ ನಂಬರ್ ಪ್ಲೇಟ್ ಫೇಕ್ ಎಂದು ಗೊತ್ತಾಗಿದೆ. ಕಾರ್ ಮಂಗಳೂರು ಮೂಲದವರದ್ದು ಎಂದು ಇದೀಗ ತನಿಖೆಯಿಂದ ಬೆಳಕಿಗೆ ಬಂದಿದೆ. ಅಂಕೋಲಾದಿಂದ ಬಂದ ಪೊಲೀಸರು ಕಾರ್ ವಶಕ್ಕೆ ಪಡೆದು ಅದರಲ್ಲಿನ ಒಂದು ಕೋಟಿ ವಶಪಡಿಸಿಕೊಂಡಿದ್ದಾರೆ.

ಅಂಕೋಲಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೆತ್ತಿಕೊಂಡಿದ್ದಾರೆ. ಯಲ್ಲಾಪುರ ಅಂಕೋಲಾ ನಡುವಿನ ಹೆದ್ದಾರಿಯಲ್ಲಿ ರಾಮನಗುಳಿ ಗ್ರಾಮ ಇದೆ. ಇಲ್ಲಿ ಜನವರಿ 28ರಂದು ಮಂಗಳವಾರ ಸಂಜೆ ನಿರ್ಜನ ಪ್ರದೇಶದಲ್ಲಿ ಯಾರು ಕಾರು ನಿಲ್ಲಿಸಿ ಹೋದರು ಎಂಬುದು ಬೆಳಕಿಗೆ ಬರಬೇಕಿದೆ.

 

You may also like

News

ಕ್ರಿಶ್ಚಿಯನ್ ಜಗದ್ಗುರು ಪೋಪ್ ಫ್ರಾನ್ಸಿಸ್ ರವರಿಗೆ ಮಂಗಳೂರಿನಲ್ಲಿ ಅರ್ಪಿಸಿದ ಸರ್ವಧರ್ಮ ಶ್ರದ್ಧಾಂಜಲಿ

ಮಂಗಳೂರು ಧರ್ಮಕ್ಷೇತ್ರದ ವತಿಯಿಂದ ಕಥೊಲಿಕರ ಪರಮೋಚ್ಛ ಜಗದ್ಗುರು ಪೋಪ್ ಫ್ರಾನ್ಸಿಸ್ ಅವರಿಗೆ ಶ್ರದ್ಧಾಂಜಲಿ ಸಭೆ ಇಂದು ಎಪ್ರಿಲ್ 25ರಂದು ಶುಕ್ರವಾರ ನಗರದ ಮಿಲಾಗ್ರಿಸ್ ಚರ್ಚ್ ವಠಾರದಲ್ಲಿ ನಡೆಸಲಾಯಿತು.
News

ಕ್ರಿಮಿನಲ್ ಆರೋಪ ಹೊತ್ತ ಸರ್ಕಾರಿ ನೌಕರರ ಉದ್ಯೋಗಕ್ಕೆ ಕಂಟಕ – ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು

ಸರಕಾರಿ ನೌಕರರಾಗಿ ನೇಮಕಗೊಳ್ಳಲು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿರಬಾರದು ಎಂಬ ನಿಯಮವಿದೆ. ಅದೇ ರೀತಿಯ ಆರೋಪ ಹೊತ್ತ ಸರಕಾರಿ ನೌಕರರನ್ನು ವಜಗೊಳಿಸಲು ಯಾವುದೇ ಅಡ್ಡಿ ಇಲ್ಲ ಎಂದು ಕರ್ನಾಟಕ

You cannot copy content of this page