November 7, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕೇಂದ್ರೀಯ ವಿಶ್ವ ವಿದ್ಯಾಲಯ ಸ್ನಾತಕೋತ್ತರ ಪದವಿಗೆ ಅರ್ಜಿ ಆಹ್ವಾನ

ಕಾಸರಗೋಡಿನಲ್ಲಿರುವ ಕೇರಳ ಕೇಂದ್ರೀಯ ವಿಶ್ವವಿದ್ಯಾಲಯವು 2025ನೇ ಸಾಲಿನ ಸ್ನಾತಕೋತ್ತರ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದೆ.

ವಿಶ್ವವಿದ್ಯಾಲಯದ ಜಾಲತಾಣದ ಮೂಲಕ ಆನ್ ಲೈನ್ ನಲ್ಲಿ ಇದೇ ಫೆಬ್ರವರಿ 01 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಕನ್ನಡ ಎಂ.ಎ., ಇತರ ಭಾಷಾ ವಿಷಯಗಳು ಸೇರಿದಂತೆ ಮಾನವಿಕ ಶಾಸ್ತ್ರಗಳು, ವಿಜ್ಞಾನ, ವಾಣಿಜ್ಯ, ಸಮಾಜಕಾರ್ಯ, ಹೀಗೆ ಅನೇಕ ಕೋರ್ಸ್ ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

Online ಮೂಲಕ ಸಲ್ಲಿಸಲಾದ ಅರ್ಜಿಗಳನ್ನು ಮಾತ್ರ ಪರಿಗಣಿಸಲಾಗುತ್ತದೆ. ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಆಧಾರದಲ್ಲಿ ಆಯ್ಕೆ ಪ್ರಕ್ರೀಯೆ ನಡೆಯಲಿದೆ. ಭಾಷಾ ಪ್ರಶ್ನೆಪತ್ರಿಕೆಗಳು ಹೊರತುಪಡಿಸಿ ಉಳಿದ ಎಲ್ಲ ಪ್ರವೇಶ ಪರೀಕ್ಷೆಯ ಪ್ರಶ್ನೆಪತ್ರಿಕೆಗಳು ಇಂಗ್ಲಿಷ್ ಮತ್ತು ಹಿಂದಿ ಭಾಷೆಯಲ್ಲಿ ಮಾತ್ರ ಇರಲಿದೆ. ಕೋರ್ಸ್ ಗಳು, ಪ್ರವೇಶ ಪರೀಕ್ಷೆ ಮತ್ತಿತರ ವಿವರಗಳಿಗಾಗಿ www.Cukerala.ac.inwww.nta.ac.in  ಜಾಲತಾಣಗಳಿಗೆ ಭೇಟಿ ನೀಡಬಹುದು.

You may also like

News

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ – ಧರ್ಮಸ್ಥಳದಲ್ಲಿ ದ್ವಿ ಸಹಸ್ರ ಮದ್ಯವರ್ಜನ ಶಿಬಿರದ ಸಾವಿರಾರು ಮದ್ಯವರ್ಜಿತರ ಸಮಾವೇಶ

ಬರೆ ಬಾಯಿಮಾತಿನಿಂದ ಪರಿವರ್ತನೆ ಸಾಧ್ಯವಿಲ್ಲ. ಆದುದರಿಂದ ಕಾಯಕದ ಬಗ್ಗೆ ಮಾತು, ಉಪನ್ಯಾಸ ಅಗತ್ಯವಿಲ್ಲ. ಮಾತಿನಲ್ಲಿ ಹೇಳುವುದನ್ನು ಕಾಯಕದಲ್ಲಿ ಮಾಡಿ ತೋರಿಸಬೇಕು ಎಂದು ಬೆಳಗಾವಿ ಜಿಲ್ಲೆ ಹುಕ್ಕೇರಿಯ ಹಿರೇಮಠದ
News

ಶಿರಾಲಿಯ ತೆಗ್ಗಿನಗದ್ದೆ ಗ್ರಾಮದಲ್ಲಿ ಕಾನೂನು ಬಾಹಿರ ಜೂಜಾಟ ದಾಳಿ — 10 ಮಂದಿಯ ಬಂಧನ

ನವೆಂಬರ್ 05ರಂದು ಶಿರಾಲಿಯ ತೆಗ್ಗಿನಗದ್ದೆ ಗ್ರಾಮದಲ್ಲಿ ಕಾನೂನು ಬಾಹಿರವಾಗಿ ಜೂಜಾಟ ನಡೆಸುತ್ತಿದ್ದವರ ಮೇಲೆ ಭಟ್ಕಳ ಗ್ರಾಮಾಂತರ ಪೊಲೀಸ್ ಠಾಣೆಯವರು ದಾಳಿ ನಡೆಸಿ, 10 ಮಂದಿಯ ವಿರುದ್ಧ ಪ್ರಕರಣ

You cannot copy content of this page