April 21, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಳ್ಳನನ್ನು ಹಿಡಿದು ವಿಟ್ಲ ಪೊಲೀಸ್ ಠಾಣೆಗೆ ಒಪ್ಪಿಸಿದ ಅನಂತಾಡಿ ಗ್ರಾಮಸ್ಥರು

ಬಂಟ್ವಾಳ: ಜನವರಿ 30ರಂದು ರಾತ್ರಿ 11 ಗಂಟೆಗೆ ಬಂಟ್ಟಾಳ ತಾಲೂಕಿನ ಅನಂತಾಡಿ ಗ್ರಾಮದ ಡೊಡ್ಡಮನೆ ಎಂಬಲ್ಲಿಗೆ ಕಳ್ಳನೊಬ್ಬ ಪ್ರವೇಶಿಸಲು ಹೊಂಚುಹಾಕುತ್ತಿದ್ದ ಸಮಯದಲ್ಲಿ, ಆತನನ್ನು ಗ್ರಾಮಸ್ಥರು ಹಿಡಿದು ವಿಟ್ಲ ಪೋಲೀಸ್ ಠಾಣೆಗೆ ಒಪ್ಪಿಸಿದ್ದಾರೆ.

ಬಹು ಪುರಾತನವೂ ಕಾರಣಿಕ ಕ್ಷೇತ್ರವೂ ಆದ ಅನಂತಾಡಿ ಶ್ರೀ ಉಳ್ಳಾಲ್ತಿ ಅಮ್ಮನವರ ಬೆಳ್ಳಿಯ ಮುಖವಾಡ, ಬಂಗಾರದ ಮುಖವಾಡದಂತಹ ಆಭರಣ, ಹಲವಾರು ಬಂಗಾರ, ಬೆಳ್ಳಿಯ ಆಭರಣಗಳು ಅಲ್ಲಿದ್ದವು.

ಹಲವಾರು ದಿನಗಳಿಂದ ಅನಂತಾಡಿ ಹಾಗೂ ನೆಟ್ಲಮುಡ್ನೂರು ಗ್ರಾಮದಲ್ಲಿ ಕಳ್ಳರು ಸಂಚರಿಸುತ್ತಿದ್ದಾರೆ ಎಂಬ ಮಾಹಿತಿ ಇದ್ದು ಗ್ರಾಮಸ್ಥರು ಎಚ್ಚರಿಕೆಯಿಂದ ಇದ್ದರು. ವಿಟ್ಲ ಪೋಲೀಸರು ಮುಂದಿನ ತನಿಖೆಯನ್ನು ನಡೆಸುತ್ತಿದ್ದಾರೆ.

You may also like

News

MLC ಐವನ್ ಡಿಸೋಜ ಹಾಗೂ ಕಥೊಲಿಕ್ ಸಭಾ ಕೇಂದ್ರಿಯ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ರವರಿಂದ ಬಿಷಪ್ಸ್ ಹೌಸ್ ನಲ್ಲಿ ಪೋಪ್ ರವರಿಗೆ ಅಂತಿಮ ನಮನ

ಕ್ರಿಶ್ಚಿಯನ್ನರ ಪರಮೋಚ್ಚ ಜಗದ್ಗುರು ಪೋಪ್ ಫ್ರಾನ್ಸಿಸ್ ರವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಇಂದು ಎಪ್ರಿಲ್ 21ರಂದು ಸೋಮವಾರ ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ| ಪೀಟರ್
News

ಜಗದ್ಗುರು ಪೋಪ್ ಫ್ರಾನ್ಸಿಸ್ ಇನ್ನಿಲ್ಲ

ಲ್ಯಾಟಿನ್ ಅಮೆರಿಕದ ಮೊದಲ ಪೋಪ್ ಮತ್ತು ಆಧುನಿಕ ರೋಮನ್ ಕ್ಯಾಥೋಲಿಕ್ ಚರ್ಚ್‌ನಲ್ಲಿ ಪರಿವರ್ತನಾಶೀಲ ವ್ಯಕ್ತಿಯಾಗಿದ್ದ ಜಗದ್ಗುರು ಪೋಪ್ ಫ್ರಾನ್ಸಿಸ್ ಇಂದು ಏಪ್ರಿಲ್ 21ರಂದು ಸೋಮವಾರ ತಮ್ಮ 88

You cannot copy content of this page