September 2, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಳ್ಳನನ್ನು ಹಿಡಿದು ವಿಟ್ಲ ಪೊಲೀಸ್ ಠಾಣೆಗೆ ಒಪ್ಪಿಸಿದ ಅನಂತಾಡಿ ಗ್ರಾಮಸ್ಥರು

ಬಂಟ್ವಾಳ: ಜನವರಿ 30ರಂದು ರಾತ್ರಿ 11 ಗಂಟೆಗೆ ಬಂಟ್ಟಾಳ ತಾಲೂಕಿನ ಅನಂತಾಡಿ ಗ್ರಾಮದ ಡೊಡ್ಡಮನೆ ಎಂಬಲ್ಲಿಗೆ ಕಳ್ಳನೊಬ್ಬ ಪ್ರವೇಶಿಸಲು ಹೊಂಚುಹಾಕುತ್ತಿದ್ದ ಸಮಯದಲ್ಲಿ, ಆತನನ್ನು ಗ್ರಾಮಸ್ಥರು ಹಿಡಿದು ವಿಟ್ಲ ಪೋಲೀಸ್ ಠಾಣೆಗೆ ಒಪ್ಪಿಸಿದ್ದಾರೆ.

ಬಹು ಪುರಾತನವೂ ಕಾರಣಿಕ ಕ್ಷೇತ್ರವೂ ಆದ ಅನಂತಾಡಿ ಶ್ರೀ ಉಳ್ಳಾಲ್ತಿ ಅಮ್ಮನವರ ಬೆಳ್ಳಿಯ ಮುಖವಾಡ, ಬಂಗಾರದ ಮುಖವಾಡದಂತಹ ಆಭರಣ, ಹಲವಾರು ಬಂಗಾರ, ಬೆಳ್ಳಿಯ ಆಭರಣಗಳು ಅಲ್ಲಿದ್ದವು.

ಹಲವಾರು ದಿನಗಳಿಂದ ಅನಂತಾಡಿ ಹಾಗೂ ನೆಟ್ಲಮುಡ್ನೂರು ಗ್ರಾಮದಲ್ಲಿ ಕಳ್ಳರು ಸಂಚರಿಸುತ್ತಿದ್ದಾರೆ ಎಂಬ ಮಾಹಿತಿ ಇದ್ದು ಗ್ರಾಮಸ್ಥರು ಎಚ್ಚರಿಕೆಯಿಂದ ಇದ್ದರು. ವಿಟ್ಲ ಪೋಲೀಸರು ಮುಂದಿನ ತನಿಖೆಯನ್ನು ನಡೆಸುತ್ತಿದ್ದಾರೆ.

You may also like

News

ಪುತ್ತೂರು ಪ್ರೆಸ್ ಕ್ಲಬ್ ಎದುರು ಸಾರ್ವಜನಿಕ ಶಾಂತಿಗೆ ಭಂಗ – ಮೂವರ ವಿರುದ್ಧ ಎಫ್‌ಐಆರ್ ದಾಖಲು

ಪುತ್ತೂರು: ಸಾರ್ವಜನಿಕ ಸ್ಥಳದಲ್ಲಿ ಗುಂಪು ಸೇರಿ ಗಲಾಟೆ ನಡೆಸಿ, ಸಾರ್ವಜನಿಕ ಶಾಂತಿಗೆ ಭಂಗ ತಂದಿರುವ ಘಟನೆಗೆ ಸಂಬಂಧಿಸಿದಂತೆ ಮೂವರು ವ್ಯಕ್ತಿಗಳು ಸೇರಿದಂತೆ ಇತರರ ವಿರುದ್ಧ ಪುತ್ತೂರು ನಗರ
News

 ‘ರಾಕ್ಣೊ’ ಸಾಹಿತ್ಯ ಪ್ರಶಸ್ತಿ–2026 ಘೋಷಣೆ

ಸಂಪಾದಕರಾದ ಫಾದರ್ ರೂಪೇಶ್ ಮಾಡ್ತಾ ಅವರಿಂದ ಪ್ರಕಟಣೆ ಮಂಗಳೂರಿನಿಂದ ಪ್ರಕಟವಾಗುತ್ತಿರುವ ಕೊಂಕಣಿ–ಇಂಗ್ಲಿಷ್ ದ್ವಿಭಾಷಾ ವಾರಪತ್ರಿಕೆ ‘ರಾಕ್ಣೊ’ ತನ್ನ ವಾರ್ಷಿಕ ‘ರಾಕ್ಣೊ ಸಾಹಿತ್ಯ ಪ್ರಶಸ್ತಿ–2026’ ಅನ್ನು ಸೆಪ್ಟೆಂಬರ್ 1ರಂದು

You cannot copy content of this page