May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಾಣಿ ಬದಿಗುಡ್ಡೆ ನಿವಾಸಿ ಸುಶ್ಮಿತಾ ಶೆಟ್ಟಿ SI ಹುದ್ದೆಗೆ ನೇಮಕ

ಕೃಷಿಕರಾದ ರಾಧಾಕೃಷ್ಣ ಮತ್ತು ಶಾಂತ ಶೆಟ್ಟಿ ದಂಪತಿಯ ಕಿರಿಯ ಪುತ್ರಿ

ಬಂಟ್ವಾಳ: ಮಾಣಿ ಗ್ರಾಮದ ಬದಿಗುಡ್ಡೆ ನಿವಾಸಿ ಕೃಷಿಕರಾದ ರಾಧಾಕೃಷ್ಣ ಮತ್ತು ಶಾಂತ ಶೆಟ್ಟಿಯವರ ಮೂವರು ಮಕ್ಕಳಲ್ಲಿ ಕಿರಿಯವರಾದ ಸುಶ್ಮಿತಾ ಶೆಟ್ಟಿ ಸಬ್ ಇನ್ಸ್ ಪೆಕ್ಟರ್ ನೇಮಕಾತಿಯ ಪರೀಕ್ಷೆ ಬರೆದು ಉತ್ತೀರ್ಣರಾಗಿ ಸಬ್ ಇನ್ಸ್ ಪೆಕ್ಟರ್ ಆಗಿ ನೇಮಕಗೊಂಡಿದ್ದಾರೆ.

ಮೈಸೂರಿನಲ್ಲಿ ತರಬೇತಿಯನ್ನು ಪಡೆಯುವ ಇವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಕಲ್ಕಡ್ಕದಲ್ಲಿನ ಶ್ರೀರಾಮ ಶಾಲೆಯಲ್ಲಿ ಮುಗಿಸಿ, ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ಬಿ.ಕಾಂ. ಪದವಿಯನ್ನು ಪಡೆದು, ಮಂಗಳೂರಿನಲ್ಲಿರುವ ರೋಷನಿ ನಿಲಯ ಕಾಲೇಜಿನಲ್ಲಿ ಎಂ.ಎಸ್.ಡಬ್ಲ್ಯೂ. ಹಾಗೂ ಕೋಲಾರದ ಬಂಗಾರ ಪೇಟೆಯಲ್ಲಿ ಬಿ.ಎಡ್. ಶಿಕ್ಷಣವನ್ನು ಪಡೆಯುತ್ತಿರುವಾಗಲೇ ಸಬ್ ಇನ್ಸ್ ಪೆಕ್ಟರ್ ಪರೀಕ್ಷೆಯನ್ನು ಬರೆದ ಇವರು ಉತ್ತೀರ್ಣಗೊಂಡು ನೇಮಕಗೊಂಡಿದ್ದಾರೆ. ಇವರ ಸಹೋದರ ರಾಜೇಶ್ ಶೆಟ್ಟಿ ಮಾಣಿಯಲ್ಲಿ ಸ್ವ ಉದ್ಯಮ ನಡೆಸುತ್ತಿದ್ದು, ಸಹೋದರಿ ರಶ್ಮಿತಾ ಶೆಟ್ಟಿ ಇಂಜಿನೀಯರ್ ಆಗಿರುತ್ತಾರೆ.

ಸುಶ್ಮಿತ ರೈ ಇವರ ಸಾಧನೆಗೆ ಮಾಣಿ ಗ್ರಾಮಸ್ಥರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ ಹಾಗೂ ಮುಂದಿನ ಪೊಲೀಸ್ ಇಲಾಖೆಯ ಸೇವೆಗೆ ಶುಭವನ್ನು ಕೋರಿದ್ದಾರೆ.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page