September 3, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಲ್ಮಠ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಮಹಾತ್ಮ ಗಾಂಧಿ ಹುತಾತ್ಮ ದಿನ ಆಚರಣೆ

ಮಂಗಳೂರು ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ಮೈ ಭಾರತ್ ನೆಹರೂ ಯುವ ಕೇಂದ್ರ ಮಂಗಳೂರು, ಮಂಗಳೂರು ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ಚಿತ್ತಾರ ಮಹಿಳಾ ಮಂಡಳಿ ಆಳಪೆ ಪಡೀಲ್ ಇವರ ಸಂಯುಕ್ತ ಆಶ್ರಯದಲ್ಲಿ ಜನವರಿ 30ರಂದು ಮಹಾತ್ಮ ಗಾಂಧಿ ಹುತಾತ್ಮ ದಿನವನ್ನು ಬಲ್ಮಠ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಆಚರಿಸಲಾಯಿತು.

ಅಧ್ಯಕ್ಷತೆಯನ್ನು ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಜಗದೀಶ್ ಬಾಳರವರು ವಹಿಸಿದ್ದರು. ವೇದಿಕೆಯಲ್ಲಿ ಅತಿಥಿಗಳಾಗಿ ನೆಹರೂ ಯುವ ಕೇಂದ್ರದ ಅಧಿಕಾರಿ ಜಗದೀಶ್, ಕ್ರೀಡಾ ಸಚಿವಾಲಯದ ಅಧಿಕಾರಿ ಪ್ರದೀಪ್ ಡಿಸೋಜಾ, NSS ಅಧಿಕಾರಿ ಉದಯಕುಮಾರ್ ಹಾಗೂ Dr ಸುಮನಾರವರು, ಚಿತ್ತಾರ ಮಹಿಳಾ ಮಂಡಳಿ ಅಧ್ಯಕ್ಷೆ ಪ್ರೇಮಿ  ಫೆರ್ನಾಂಡಿಸ್ ಹಾಗೂ ಬಲ್ಮಠ ಮಹಿಳಾ ಕಾಲೇಜಿನ ಚಂದ್ರಿಕಾರವರು ಉಪಸ್ಥಿತರಿದ್ದರು.

NYK ಅಧಿಕಾರಿ ಜಗದೀಶರವರು ಸ್ವಾಗತಿಸಿದರು. ಮಂಗಳೂರು ವಿಶ್ವವಿದ್ಯಾನಿಲಯದ MSW ವಿದ್ಯಾರ್ಥಿನಿಯರು ಪ್ರಾರ್ಥನೆಗೈದರು. ಎಲ್ಲಾ ಅತಿಥಿಗಳು ಮಹಾತ್ಮ ಗಾಂಧಿ ಭಾವಚಿತ್ರಕ್ಕೆ ಪುಷ್ಪಾಂಜಲಿಗೈದರು ಹಾಗೂ ಹುತಾತ್ಮರಾದ ಎಲ್ಲರಿಗೆ ಗೌರವವನ್ನು ಸಲ್ಲಿಸಲಾಯಿತು. NYK ಯುವ ಕ್ರೀಡಾ ನಾಯಕಿಯಾದ ನಮಿತಾರವರು ಧನ್ಯವಾದ ನೀಡುವುದರೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.

You may also like

News

ಮಂಗಳೂರಿನಲ್ಲಿ ರಾಗಗಳ ರಸದೌತಣ: ಸೆಪ್ಟೆಂಬರ್ 6ರಂದು ‘ರಾಗ ಸುಧಾ’ ಸಂಗೀತ ಸಂಭ್ರಮ

ಖ್ಯಾತ ಹಿಂದೂಸ್ತಾನಿ ಗಾಯಕ ಆದಿತ್ಯ ಮೋದಕ್ ಸೇರಿದಂತೆ ರಾಷ್ಟ್ರೀಯ ಖ್ಯಾತಿಯ ಮೂವರು ಕಲಾವಿದರಿಂದ ಅಪರೂಪದ ಸಂಗೀತ ಪ್ರಸ್ತುತಿ; ಸಂಗೀತಾಸಕ್ತರಿಗೆ ಉಚಿತ ಪ್ರವೇಶ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸುಮಧುರ
News

ಮಂಗಳೂರು ಧರ್ಮಕ್ಷೇತ್ರದ ಕಥೊಲಿಕ ಶಿಕ್ಷಣ ಮಂಡಳಿಯಿಂದ ಅದ್ದೂರಿ 37ನೇ ಶಿಕ್ಷಕರ ದಿನಾಚರಣೆ

“ಶಿಕ್ಷಕರ ಮಾರ್ಗದರ್ಶನ ವಿದ್ಯಾರ್ಥಿ ಜೀವನಕ್ಕೆ ದಾರಿದೀಪ” – ಬಿಷಪ್ ಡಾ. ಪೀಟರ್ ಪಾವ್ಲ್ ವಿದ್ಯಾರ್ಥಿಯ ಜೀವನವನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಶಿಕ್ಷಕರ ಮಾರ್ಗದರ್ಶನ ಹಾಗೂ

You cannot copy content of this page