May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

“ಮನೆಗೊಂದು ಗ್ರಂಥಾಲಯ” ಕಾರ್ಯಕ್ರಮದ ಕರಪತ್ರ ಬಿಡುಗಡೆ

ಕಾಸರಗೋಡು : ಕಾಸರಗೋಡು ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯದಲ್ಲಿ ಫೆಬ್ರವರಿ 2ರಂದು ಅಪರಾಹ್ನ 1 ಗಂಟೆಗೆ ಕನ್ನಡ ಪುಸ್ತಕ ಪ್ರಾಧಿಕಾರದ ಬಹುನಿರೀಕ್ಷಿತ “ಮನೆಗೊಂದು ಗ್ರಂಥಾಲಯ” ಲಕ್ಷ ಗ್ರಂಥಾಲಯಗಳ ಯೋಜನೆಯ ಪ್ರಚಾರ ಹಾಗೂ ಕರಪತ್ರ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ.

ಗಡಿನಾಡು ಕಾಸರಗೋಡಿನಲ್ಲಿ ಈ ಕಾರ್ಯಕ್ರಮವನ್ನು ಕನ್ನಡ ಪುಸ್ತಕ ಪ್ರಾಧಿಕಾರ, ಕರ್ನಾಟಕ ಸರಕಾರದ ಅಧ್ಯಕ್ಷರಾದ ಡಾ. ಮಾನಸ ಇವರು ಕನ್ನಡ ಭವನ ಮತ್ತು ಕಾಸರಗೋಡಿನ ವಿವಿಧ ಸಂಸ್ಥೆಗಳನ್ನು ಸಂಪರ್ಕಿಸುವ ಉದ್ದೇಶವನ್ನು ಇಟ್ಟುಕೊಂಡು ಹಮ್ಮಿಕೊಂಡಿದ್ದಾರೆ.

ಪ್ರಾಧಿಕಾರ ಅಧ್ಯಕ್ಷರಾದ ಡಾ. ಮಾನಸ ಲಕ್ಷ ಗ್ರಂಥಾಲಯ ಯೋಜನೆ, ಮನೆಗೊಂದು ಗ್ರಂಥಾಲಯ ರೂಪು ರೇಷೆ ವಿವರಿಸಲಿದ್ದಾರೆ. ಕನ್ನಡ ಭವನ ರೂವಾರಿಗಳಾದ ಡಾ. ವಾಮನ್ ರಾವ್ ಬೇಕಲ್ -ಸಂದ್ಯಾ ರಾಣಿ ದಂಪತಿಗೆ ಪುಸ್ತಕ ನೀಡಿ ಗಡಿನಾಡು ಕಾಸರಗೋಡಿನಲ್ಲಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಡಾ. ವಾಮನ್ ರಾವ್ ಬೇಕಲ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅಥಿತಿಯಾಗಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಸದಸ್ಯ ಎ.ಆರ್. ಸುಬ್ಬಯ್ಯಕಟ್ಟೆ, ಭಾಗವಹಿಸಲಿದ್ದಾರೆ.

ಡಾ. ಕೆ.ಏನ್. ವೆಂಕಟ್ರಮಣ ಹೊಳ್ಳ, ರವಿ ನಾಯ್ಕಪು, ಪ್ರದೀಪ್ ಬೇಕಲ್, ಅರಿಬೈಲ್ ಗೋಪಾಲ್ ಶೆಟ್ಟಿ, ರಾಜೇಶ್ ಚಂದ್ರ ಕೆ. ಪಿ. ಜಯಾನಂದ ಕುಮಾರ್ ಹೊಸದುರ್ಗ, ಪ್ರಕಾಶ್ ಚಂದ್ರ ಕಾಸರಗೋಡು ಶುಭಾಶಂಸನೆ ಗೈಯ್ಯಲಿದ್ದಾರೆ. ವಸಂತ ಕೆರೆಮನೆ ಸ್ವಾಗತಿಸಿ, ಅಖಿಲೇಶ್ ನಗುಮುಗಮ್ ನಿರೂಪಿಸಿ ಸಂಧ್ಯಾರಾಣಿ ಟೀಚರ್ ಧನ್ಯವಾದವೀಯಲಿದ್ದಾರೆ.

 

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page