September 2, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕುಲಶೇಖರದ ಕೊರ್ಡೆಲ್ ಪವಿತ್ರ ಶಿಲುಬೆ ಚರ್ಚ್‌ನಲ್ಲಿ ಫೆಬ್ರವರಿ 8 ಮತ್ತು 9ರಂದು ‘ಕೊರ್ಡೆಲ್‌ ಖೇಳ್-ಮೇಳ್’ ಕಾರ್ಯಕ್ರಮ

ಮಂಗಳೂರಿನ ಕುಲಶೇಖರದ ಕೊರ್ಡೆಲ್ ಪವಿತ್ರ ಶಿಲುಬೆ ಚರ್ಚ್‌ನಲ್ಲಿ ಫೆಬ್ರವರಿ 8 ಮತ್ತು 9ರಂದು ‘ಕೊರ್ಡೆಲ್‌ ಖೇಳ್-ಮೇಳ್’ ಆಯೋಜಿಸಲಾಗಿದೆ ಎಂದು ಚರ್ಚ್‌ನ ಪ್ರಧಾನ ಧರ್ಮಗುರು ವಂದನೀಯ ಫಾದರ್ ಕ್ಲಿಫರ್ಡ್ ಫೆರ್ನಾಂಡಿಸ್ ಇಂದು ಫೆಬ್ರವರಿ 3ರಂದು ಸೋಮವಾರ ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ.

ಎರಡು ದಿನಗಳ ಕಾಲ ನಡೆಯುವ ಕಾರ್ಯಕ್ರಮದಲ್ಲಿ ವಿವಿಧ ಮನೋರಂಜನಾ ಕಾರ್ಯಕ್ರಮಗಳು ಮತ್ತು ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ವಿವಿಧ ರೀತಿಯ ಆಹಾರ ಮಳಿಗೆಗಳು ಹಾಗೂ ಮನೋರಂಜನಾ ಆಟಗಳ ಸ್ಟಾಲ್‌ಗಳು ಒಳಗೊಂಡಿವೆ ಎಂದರು.

ಫೆಬ್ರವರಿ 8ರಂದು ಶನಿವಾರ ಸಂಜೆ 8 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಮಂಗಳೂರು ಮಹಾನಗರ ಪಾಲಿಕೆ ಸದಸ್ಯರಾದ ಭಾಸ್ಕರ್ ಮೊಯ್ಲಿ, ಕಿಶೋರ್ ಕೊಟ್ಟಾರಿ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ. ಎರಡು ದಿನಗಳ ಕಾಲ ನಡೆಯುವ ಕಾರ್ಯಕ್ರಮದಲ್ಲಿ ಸುಮಾರು 20 ಸಾವಿರ ಜನ ಭಾಗವಹಿಸುವ ನಿರೀಕ್ಷೆ ಇದೆ ಎಂದರು.

ಕಾರ್ಯಕ್ರಮದ ಸಂಯೋಜಕ ರೋಯ್ ಕ್ಯಾಸ್ತೆಲಿನೋ, ಚರ್ಚ್‌ ಪಾಲನಾ ಸಮಿತಿ ಉಪಾಧ್ಯಕ್ಷೆ ರೂತ್ ಕ್ಯಾಸ್ತೆಲಿನೋ, ಕಾರ್ಯದರ್ಶಿ ಅನಿಲ್ ಡೇಸಾ, ಮಾಧ್ಯಮ ಸಂಯೋಜಕ ಎಲಿಯಾಸ್ ಫೆರ್ನಾಂಡಿಸ್ ಪತ್ರಿಕಾ ಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

You may also like

News

ಪುತ್ತೂರು ಪ್ರೆಸ್ ಕ್ಲಬ್ ಎದುರು ಸಾರ್ವಜನಿಕ ಶಾಂತಿಗೆ ಭಂಗ – ಮೂವರ ವಿರುದ್ಧ ಎಫ್‌ಐಆರ್ ದಾಖಲು

ಪುತ್ತೂರು: ಸಾರ್ವಜನಿಕ ಸ್ಥಳದಲ್ಲಿ ಗುಂಪು ಸೇರಿ ಗಲಾಟೆ ನಡೆಸಿ, ಸಾರ್ವಜನಿಕ ಶಾಂತಿಗೆ ಭಂಗ ತಂದಿರುವ ಘಟನೆಗೆ ಸಂಬಂಧಿಸಿದಂತೆ ಮೂವರು ವ್ಯಕ್ತಿಗಳು ಸೇರಿದಂತೆ ಇತರರ ವಿರುದ್ಧ ಪುತ್ತೂರು ನಗರ
News

 ‘ರಾಕ್ಣೊ’ ಸಾಹಿತ್ಯ ಪ್ರಶಸ್ತಿ–2026 ಘೋಷಣೆ

ಸಂಪಾದಕರಾದ ಫಾದರ್ ರೂಪೇಶ್ ಮಾಡ್ತಾ ಅವರಿಂದ ಪ್ರಕಟಣೆ ಮಂಗಳೂರಿನಿಂದ ಪ್ರಕಟವಾಗುತ್ತಿರುವ ಕೊಂಕಣಿ–ಇಂಗ್ಲಿಷ್ ದ್ವಿಭಾಷಾ ವಾರಪತ್ರಿಕೆ ‘ರಾಕ್ಣೊ’ ತನ್ನ ವಾರ್ಷಿಕ ‘ರಾಕ್ಣೊ ಸಾಹಿತ್ಯ ಪ್ರಶಸ್ತಿ–2026’ ಅನ್ನು ಸೆಪ್ಟೆಂಬರ್ 1ರಂದು

You cannot copy content of this page