February 12, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವಿಶ್ವ ಕ್ಯಾನ್ಸರ್ ಜಾಗೃತಿ ದಿನದ ಅಂಗವಾಗಿ ಮಿಲಾಗ್ರಿಸ್ ಕಾಲೇಜ್ ಆಫ್ ನರ್ಸಿಂಗ್ ವಿದ್ಯಾರ್ಥಿಗಳಿಂದ ಬೀದಿ ನಾಟಕ ಪ್ರದರ್ಶನ

ವಿಶ್ವ ಕ್ಯಾನ್ಸರ್ ಜಾಗೃತಿ ದಿನದ ಅಂಗವಾಗಿ ಫೆಬ್ರವರಿ 4ರಂದು ಮಂಗಳವಾರ ಮಿಲಾಗ್ರಿಸ್ ಕಾಲೇಜು ಆಫ್  ನರ್ಸಿಂಗ್ ಇದರ  ಪ್ರಥಮ ವರ್ಷದ‌‌ 35 ವಿದ್ಯಾರ್ಥಿಗಳು ಬೀದಿ ನಾಟಕವನ್ನು ಪ್ರದರ್ಶಿಸಿದರು. ಪ್ರತಿ ವರ್ಷ ಫೆಬ್ರವರಿ 4ರಂದು ವಿಶ್ವ ಕ್ಯಾನ್ಸರ್‌ ದಿನವನ್ನು  ಮನುಷ್ಯನನ್ನು ಶತ್ರುವಾಗಿ ಕಾಡುವ ಕ್ಯಾನ್ಸರ್‌ ರೋಗದ ಬಗ್ಗೆ ಜನರಲ್ಲಿ ಸರಿಯಾಗಿ ಜಾಗೃತಿ ಮೂಡಿಸಲು  ಆಚರಿಸಲಾಗುತ್ತದೆ.

ವಿದ್ಯಾರ್ಥಿಗಳು ಕ್ಯಾನ್ಸರ್ ಎಂಬ ಮಾರಕ ರೋಗಕ್ಕೆ ಕಾರಣಗಳು, ಅದರ‌ ಎಚ್ಚರಿಕೆಯ ಚಿಹ್ನೆಗಳು ಹಾಗೂ ಅದನ್ನು ನಿಯಂತ್ರಿಸುವ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.  ಪ್ಲಾಸ್ಟಿಕ್ ಬಳಕೆ, ಧೂಮಪಾನ,  ಮದ್ಯಪಾನ , ತಂಬಾಕು ಸೇವನೆಯಿಂದ ಹೆಚ್ಚುತ್ತಿರುವ ಕ್ಯಾನ್ಸರ್ ರೋಗವನ್ನು ನಿಯಂತ್ರಿಸುವ ಕುರಿತು ಮಾಹಿತಿ ನೀಡಿದರು.

ಇದೇ ನಾಟಕವನ್ನು ಫೆಬ್ರವರಿ 8ರಂದು ಶನಿವಾರ ಸಂಜೆ 4 ಗಂಟೆಗೆ ಫಾರಂ ಮಾಲ್ ನಲ್ಲಿ
ಪ್ರದರ್ಶಿಸಲಾಗುತ್ತದೆ. ಕಾಲೇಜಿನ ನಿರ್ದೇಶಕ ವಂದನೀಯ ಫಾದರ್  ಬೊನವೆಂಚರ್ ನಜ್ರೆತ್ ಕಾಲೇಜಿನ ಪ್ರಾಂಶುಪಾಲೆ ಡಾ. ಡಯಾನ ಲೋಬೋ ಹಾಗೂ ಇತರ ಅಧ್ಯಾಪಕ  ವೃಂದದವರು ಉಪಸ್ಥಿತರಿದ್ದರು.

You may also like

News

ಪ್ರಸಿದ್ದ ಚಲನಚಿತ್ರ ನಟ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಚೇತನ್ ರೈ ಮಾಣಿ ಇವರ ಮಗಳು ವೆನ್ಯ ರೈ ನಾಯಕಿಯಾಗಿ ನಟಿಸಿದ ‘ಆರಾಟ’ ಕನ್ನಡ ಸಿನಿಮಾ 16ನೇ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಗೆ ಆಯ್ಕೆ

ಬೆಂಗಳೂರಿನಲ್ಲಿ ಮಾರ್ಚ್ 1ರಿಂದ 8ರ ತನಕ ನಡೆಯಲಿರುವ 16ನೇ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಗೆ ಪ್ರಸಿದ್ದ ಚಲನಚಿತ್ರ ನಟ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಚೇತನ್
News

 ಗೆಳೆಯರ ಬಳಗ ಕಲ್ಮಂಜ ಇದರ ರಜತ ಸಂಭ್ರಮ ಕಾರ್ಯಕ್ರಮ

ಗೆಳೆಯರ ಬಳಗ ಅಕ್ಷಯನಗರ (ರಿ.) ನಿಡಿಗಲ್ ಕಲ್ಮಂಜ ಇದರ ರಜತ ಸಂಭ್ರಮ ಕಾರ್ಯಕ್ರಮವು ಫೆಬ್ರವರಿ 9ರಂದು ಆದಿತ್ಯವಾರ ಕಲ್ಮಂಜ ಗ್ರಾಮದ ಅಕ್ಷಯನಗರದ ಕ್ರೀಡಾಂಗಣದಲ್ಲಿ ಅತ್ಯಂತ ವಿಜೃಂಭಣೆಯಿಂದ ಜರುಗಿತು.

You cannot copy content of this page