December 12, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವಿಶ್ವ ಕ್ಯಾನ್ಸರ್ ಜಾಗೃತಿ ದಿನದ ಅಂಗವಾಗಿ ಮಿಲಾಗ್ರಿಸ್ ಕಾಲೇಜ್ ಆಫ್ ನರ್ಸಿಂಗ್ ವಿದ್ಯಾರ್ಥಿಗಳಿಂದ ಬೀದಿ ನಾಟಕ ಪ್ರದರ್ಶನ

ವಿಶ್ವ ಕ್ಯಾನ್ಸರ್ ಜಾಗೃತಿ ದಿನದ ಅಂಗವಾಗಿ ಫೆಬ್ರವರಿ 4ರಂದು ಮಂಗಳವಾರ ಮಿಲಾಗ್ರಿಸ್ ಕಾಲೇಜು ಆಫ್  ನರ್ಸಿಂಗ್ ಇದರ  ಪ್ರಥಮ ವರ್ಷದ‌‌ 35 ವಿದ್ಯಾರ್ಥಿಗಳು ಬೀದಿ ನಾಟಕವನ್ನು ಪ್ರದರ್ಶಿಸಿದರು. ಪ್ರತಿ ವರ್ಷ ಫೆಬ್ರವರಿ 4ರಂದು ವಿಶ್ವ ಕ್ಯಾನ್ಸರ್‌ ದಿನವನ್ನು  ಮನುಷ್ಯನನ್ನು ಶತ್ರುವಾಗಿ ಕಾಡುವ ಕ್ಯಾನ್ಸರ್‌ ರೋಗದ ಬಗ್ಗೆ ಜನರಲ್ಲಿ ಸರಿಯಾಗಿ ಜಾಗೃತಿ ಮೂಡಿಸಲು  ಆಚರಿಸಲಾಗುತ್ತದೆ.

ವಿದ್ಯಾರ್ಥಿಗಳು ಕ್ಯಾನ್ಸರ್ ಎಂಬ ಮಾರಕ ರೋಗಕ್ಕೆ ಕಾರಣಗಳು, ಅದರ‌ ಎಚ್ಚರಿಕೆಯ ಚಿಹ್ನೆಗಳು ಹಾಗೂ ಅದನ್ನು ನಿಯಂತ್ರಿಸುವ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.  ಪ್ಲಾಸ್ಟಿಕ್ ಬಳಕೆ, ಧೂಮಪಾನ,  ಮದ್ಯಪಾನ , ತಂಬಾಕು ಸೇವನೆಯಿಂದ ಹೆಚ್ಚುತ್ತಿರುವ ಕ್ಯಾನ್ಸರ್ ರೋಗವನ್ನು ನಿಯಂತ್ರಿಸುವ ಕುರಿತು ಮಾಹಿತಿ ನೀಡಿದರು.

ಇದೇ ನಾಟಕವನ್ನು ಫೆಬ್ರವರಿ 8ರಂದು ಶನಿವಾರ ಸಂಜೆ 4 ಗಂಟೆಗೆ ಫಾರಂ ಮಾಲ್ ನಲ್ಲಿ
ಪ್ರದರ್ಶಿಸಲಾಗುತ್ತದೆ. ಕಾಲೇಜಿನ ನಿರ್ದೇಶಕ ವಂದನೀಯ ಫಾದರ್  ಬೊನವೆಂಚರ್ ನಜ್ರೆತ್ ಕಾಲೇಜಿನ ಪ್ರಾಂಶುಪಾಲೆ ಡಾ. ಡಯಾನ ಲೋಬೋ ಹಾಗೂ ಇತರ ಅಧ್ಯಾಪಕ  ವೃಂದದವರು ಉಪಸ್ಥಿತರಿದ್ದರು.

You may also like

News

ಪುತ್ತೂರಿಗೆ ಶಾಸಕ ಅಶೋಕ್ ರೈ ಕನಸು ನನಸಾದಂತೆ — ರೂಪಾಯಿ 5 ಕೋಟಿ ವೆಚ್ಚದ ಹೊಸ ತಾಲೂಕು ಪಂಚಾಯತ್ ಕಟ್ಟಡಕ್ಕೆ ನಾಳೆ ಡಿಸೆಂಬರ್ 13ರಂದು ಶಿಲಾನ್ಯಾಸ

ಪುತ್ತೂರಿನ ಅಭಿವೃದ್ಧಿ ಕನಸುಗಳು ಒಂದೊಂದಾಗಿ ಸಫಲವಾಗುತ್ತಿವೆ. ಹಳೆಯ ಮತ್ತು ಅಪರಿಹಾರ್ಯವಾಗಿರುವ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪುತ್ತೂರು ತಾಲೂಕು ಪಂಚಾಯತ್ ಕಚೇರಿಗೆ ಹೊಸ ಕಟ್ಟಡದ ಅಗತ್ಯವನ್ನು ಆಗಲೇ ಗುರುತಿಸಿದ್ದ ಶಾಸಕರಾದ
News

ಲೋಕಸಭೆಯಲ್ಲಿ ಮಾಜಿ ಸೈನಿಕರ ಪರ ಧ್ವನಿಯೆತ್ತಿದ ಸಂಸದ ಕ್ಯಾಪ್ಟನ್ ಬ್ರಿಜೇಶ್‌ ಚೌಟ

ಯೋಧರ ಚಿಕಿತ್ಸಾ ತೊಂದರೆ ಗಂಭೀರ – ಖಾಸಗಿ ಆಸ್ಪತ್ರೆಗಳು ಹಿಂದೆ ಸರಿಯುತ್ತಿರುವುದೇ ಆತಂಕ ಕೊಡಗಿನಲ್ಲಿ ECHS ಆಸ್ಪತ್ರೆಗಳ ಕೊರತೆ – ನಿವೃತ್ತ ಯೋಧರು 100–150 ಕಿ.ಮೀ ಪ್ರಯಾಣಿಸುವ

You cannot copy content of this page