August 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಂಟ್ವಾಳ ಕ್ಯಾಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ (ನಿ.) ಇದರ ಆಡಳಿತ ಮಂಡಳಿಗೆ ಆಯ್ಕೆ

ಬಂಟ್ವಾಳ ಕ್ಯಾಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ (ನಿ.) ಇದರ ಆಡಳಿತ ಮಂಡಳಿಗೆ ಮುಂದಿನ ಐದು (2025-30) ವರ್ಷಗಳ ಅವಧಿಗೆ ಜನವರಿ 18ರಂದು ಶನಿವಾರ ಸಾಮಾನ್ಯ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 14 ಅಭ್ಯರ್ಥಿಗಳಲ್ಲಿ 11 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ಬಿ.ಸಿ. ರೋಡ್ ನಲ್ಲಿರುವ ಲಯನ್ಸ್ ಕ್ಲಬ್ ನಲ್ಲಿ ಮತದಾನ ನಡೆದಿದ್ದು, ಮಂಗಳೂರು ಸಹಕಾರಿ ಸಂಘಗಳ ಉಪ ನಿಬಂಧಕರ ಕಚೇರಿಯ ಬಂಟ್ವಾಳ ಸಹಕಾರಿ ಅಭಿವೃದ್ದಿ ಅಧಿಕಾರಿ ಡಾ. ಜ್ಯೋತಿ ಡಿ. ಚುನಾವಣಾಧಿಕಾರಿಯಾಗಿದ್ದು, ಚುನಾವಣಾ ಪ್ರಕ್ರಿಯೆ ನಡೆಸಿದರು. ಬಂಟ್ವಾಳ ಕ್ಯಾಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ (ನಿ.) ಇದರ CEO ಸೆಲಿನ್ ಗ್ರೇಸಿ ಡಿಸೋಜ ಹಾಗೂ ಸಿಬ್ಬಂದಿಗಳು ಸಹಕರಿಸಿದರು.

ಸಾಮಾನ್ಯ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸಂಘದ ಹಾಲಿ ಅಧ್ಯಕ್ಷ ಜೀವನ್ ಲೋಯ್ಡ್ ಪಿಂಟೋ, ಉಪಾಧ್ಯಕ್ಷ ವಲೇರಿಯನ್ ಬರೆಟ್ಟೊ, ಅನಿಲ್ ಹೆರಾಲ್ಡ್ ಫ್ರಾಂಕ್, ಲಾದ್ರು ಮಿನೇಜಸ್, ರೊನಾಲ್ಡ್ ವಿಜಯ್ ಫೆರ್ನಾಂಡಿಸ್, ಗ್ಲೋರಿಯಾ ಪ್ರೀಮಾ ಕುಟಿನ್ಹೊ, ವಿನ್ಸೆಂಟ್ ಕ್ಲಾಡಿ ಕಾರ್ಲೋ, ಲಾರೆನ್ಸ್ ಕ್ಲಿಫರ್ಡ್ ಡಿಸೋಜ, ಫ್ರಾನ್ಸಿಸ್ ಮೆಂಡೋನ್ಸಾ, ಹಿಲಾರಿ ಕ್ರಾಸ್ತ, ಹ್ಯೂಬರ್ಟ್ ಲೋಬೊ ಜಯಗಳಿಸಿದ್ದಾರೆ.

ಅನಿತಾ ನೊರೊನ್ಹಾ ಮತ್ತು ಬೆನೆಡಿಕ್ಟಾ ಸಲ್ದಾನ್ಹಾ ಇವರು ಮಹಿಳಾ ಕ್ಷೇತ್ರಕ್ಕೆ ಇಬ್ಬರು ಅಭ್ಯರ್ಥಿಗಳು ಮಾತ್ರ ನಾಮಪತ್ರ ಸಲ್ಲಿಸಿದ್ದು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಹಿಂದುಳಿದ ಪ್ರವರ್ಗ ಬಿ ಕ್ಷೇತ್ರದಿಂದ ವಿಶಾಲ್ ಡಿಸೋಜರವರು ಒಬ್ಬರು ಮಾತ್ರ ನಾಮಪತ್ರ ಸಲ್ಲಿಸಿದ್ದು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.

You may also like

News

ತ್ರಿಷಾ ಸಂಸ್ಥೆಯ 28ನೇ ಸಂಸ್ಥಾಪನಾ ದಿನಾಚರಣೆ ಸಂಭ್ರಮ

ತ್ರಿಷಾ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್‌ನ 28ನೇ ಸಂಸ್ಥಾಪನಾ ದಿನಾಚರಣೆ ಬಲ್ಮಠದ ಡಾನ್ ಬಾಸ್ಕೊ ಸಭಾಂಗಣದಲ್ಲಿ ಸಂಭ್ರಮ ಹಾಗೂ ವೈಭವದಿಂದ ನಡೆಯಿತು. ಪ್ರಾರ್ಥನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸ್ವಾಗತ
News

ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ‘ನರ್ಚರ್ 2026’ – ಮಕ್ಕಳ ರಾಷ್ಟ್ರೀಯ ವೈದ್ಯಕೀಯ ವಿಚಾರ ಸಂಕಿರಣ

ಫಾದರ್ ಮುಲ್ಲರ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಮಕ್ಕಳ ಚಿಕಿತ್ಸಾ ವಿಭಾಗದ ವತಿಯಿಂದ ನರ್ಚರ್ 2026 – ಮಕ್ಕಳ ರಾಷ್ಟ್ರೀಯ ವಿಚಾರ ಸಂಕಿರಣ ಹಾಗೂ ಕಾರ್ಯಾಗಾರವನ್ನು

You cannot copy content of this page