May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಂಟ್ವಾಳ ಕ್ಯಾಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ (ನಿ.) ಇದರ ಆಡಳಿತ ಮಂಡಳಿಗೆ ಆಯ್ಕೆ

ಬಂಟ್ವಾಳ ಕ್ಯಾಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ (ನಿ.) ಇದರ ಆಡಳಿತ ಮಂಡಳಿಗೆ ಮುಂದಿನ ಐದು (2025-30) ವರ್ಷಗಳ ಅವಧಿಗೆ ಜನವರಿ 18ರಂದು ಶನಿವಾರ ಸಾಮಾನ್ಯ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 14 ಅಭ್ಯರ್ಥಿಗಳಲ್ಲಿ 11 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ಬಿ.ಸಿ. ರೋಡ್ ನಲ್ಲಿರುವ ಲಯನ್ಸ್ ಕ್ಲಬ್ ನಲ್ಲಿ ಮತದಾನ ನಡೆದಿದ್ದು, ಮಂಗಳೂರು ಸಹಕಾರಿ ಸಂಘಗಳ ಉಪ ನಿಬಂಧಕರ ಕಚೇರಿಯ ಬಂಟ್ವಾಳ ಸಹಕಾರಿ ಅಭಿವೃದ್ದಿ ಅಧಿಕಾರಿ ಡಾ. ಜ್ಯೋತಿ ಡಿ. ಚುನಾವಣಾಧಿಕಾರಿಯಾಗಿದ್ದು, ಚುನಾವಣಾ ಪ್ರಕ್ರಿಯೆ ನಡೆಸಿದರು. ಬಂಟ್ವಾಳ ಕ್ಯಾಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ (ನಿ.) ಇದರ CEO ಸೆಲಿನ್ ಗ್ರೇಸಿ ಡಿಸೋಜ ಹಾಗೂ ಸಿಬ್ಬಂದಿಗಳು ಸಹಕರಿಸಿದರು.

ಸಾಮಾನ್ಯ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸಂಘದ ಹಾಲಿ ಅಧ್ಯಕ್ಷ ಜೀವನ್ ಲೋಯ್ಡ್ ಪಿಂಟೋ, ಉಪಾಧ್ಯಕ್ಷ ವಲೇರಿಯನ್ ಬರೆಟ್ಟೊ, ಅನಿಲ್ ಹೆರಾಲ್ಡ್ ಫ್ರಾಂಕ್, ಲಾದ್ರು ಮಿನೇಜಸ್, ರೊನಾಲ್ಡ್ ವಿಜಯ್ ಫೆರ್ನಾಂಡಿಸ್, ಗ್ಲೋರಿಯಾ ಪ್ರೀಮಾ ಕುಟಿನ್ಹೊ, ವಿನ್ಸೆಂಟ್ ಕ್ಲಾಡಿ ಕಾರ್ಲೋ, ಲಾರೆನ್ಸ್ ಕ್ಲಿಫರ್ಡ್ ಡಿಸೋಜ, ಫ್ರಾನ್ಸಿಸ್ ಮೆಂಡೋನ್ಸಾ, ಹಿಲಾರಿ ಕ್ರಾಸ್ತ, ಹ್ಯೂಬರ್ಟ್ ಲೋಬೊ ಜಯಗಳಿಸಿದ್ದಾರೆ.

ಅನಿತಾ ನೊರೊನ್ಹಾ ಮತ್ತು ಬೆನೆಡಿಕ್ಟಾ ಸಲ್ದಾನ್ಹಾ ಇವರು ಮಹಿಳಾ ಕ್ಷೇತ್ರಕ್ಕೆ ಇಬ್ಬರು ಅಭ್ಯರ್ಥಿಗಳು ಮಾತ್ರ ನಾಮಪತ್ರ ಸಲ್ಲಿಸಿದ್ದು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಹಿಂದುಳಿದ ಪ್ರವರ್ಗ ಬಿ ಕ್ಷೇತ್ರದಿಂದ ವಿಶಾಲ್ ಡಿಸೋಜರವರು ಒಬ್ಬರು ಮಾತ್ರ ನಾಮಪತ್ರ ಸಲ್ಲಿಸಿದ್ದು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page