November 12, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದಲ್ಲಿ ಮಕ್ಕಳ ಗ್ರಾಮ ಸಭೆ

ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದಲ್ಲಿ ಮಕ್ಕಳ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಫೆಬ್ರವರಿ 4ರಂದು ಮಂಗಳವಾರ ಜರಗಿತು. ಸಭೆಯ ಅಧ್ಯಕ್ಷತೆಯನ್ನು ಸರಕಾರಿ ಪ್ರಾಥಮಿಕ ಶಾಲೆ, ಮಜಿಯ ವಿದ್ಯಾರ್ಥಿ ನಾಯಕಿ ಧನ್ವಿತಾ ವಹಿಸಿದ್ದರು. ಸುಗ್ರಾಮ ಸಂಯೋಜಕರಾದ ಚೇತನ್ ಮಕ್ಕಳ ಗ್ರಾಮಸಭೆಯ ಮಹತ್ವದ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಿದರು.

ಮಹಿಳಾ ಹಾಗೂ ಮಕ್ಕಳ ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ರೂಪಕಲಾ ಮಕ್ಕಳಿಗೆ ಹಾಗೂ ಮಹಿಳೆಯರಿಗೆ ಇಲಾಖೆಯಲ್ಲಿ ಸಿಗುವಂತ ಸೌಲಭ್ಯ, ರಕ್ಷಣೆಗಳ ಬಗ್ಗೆ ಮಾಹಿತಿ ನೀಡಿದರು.

ಗ್ರಾಮ ಸಮುದಾಯ ಆರೋಗ್ಯ ಅಧಿಕಾರಿ ಹರ್ಷಿತ ಮಕ್ಕಳ ಆರೋಗ್ಯ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ವೀರಕಂಭ ಗ್ರಾಮ ವ್ಯಾಪ್ತಿಯ ಶಾಲೆಗಳಾದ ಮಜಿ, ಕೆಲಿಂಜ ಬಾಯಿಲ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಮಕ್ಕಳ ಗ್ರಾಮ ಸಭೆಯಲ್ಲಿ ಮಕ್ಕಳ ವಿಷಯಗಳಲ್ಲಿ ಸಂಬಂಧಪಟ್ಟ ಎಲ್ಲ ಇಲಾಖೆಗಳು ಭಾಗವಹಿಸಬೇಕೆಂದು ಮಕ್ಕಳು ಬೇಡಿಕೆ ಇಟ್ಟರು.

ಮಜಿ ಶಾಲೆಯ ಮಕ್ಕಳು ತಮ್ಮ ಶಾಲೆಗೆ ಸ್ಯಾನಿಟರಿ ಪ್ಯಾಡ್ ಬರ್ನರ್, ಶಾಲಾ ಆವರಣ ಗೋಡೆ, ಮಕ್ಕಳ ಸುರಕ್ಷಾ ದೃಷ್ಟಿಯಿಂದ ಸಿಸಿ ಕ್ಯಾಮರ, ಶೌಚಾಲಯಕ್ಕೆ ನೀರಿನ ಟ್ಯಾಂಕಿ, ಕ್ರೀಡಾ ಸಾಮಗ್ರಿಗಳು, ವಾಚನಾಲಯ, ಕಂಪ್ಯೂಟರ್, ರಸ್ತೆಗೆ ಸೂಚನಾ ಫಲಕ ಮೊದಲಾದ ಬೇಡಿಕೆಗಳನ್ನು ನೀಡಿದರು.

ಕೆಲಿಂಜ ಶಾಲಾ ಮಕ್ಕಳು ಶಾಲಾ ಆವರಣ ಎದುರು ಬಲ್ಲೆಯಿಂದ ಕೂಡಿದ್ದು ರಸ್ತೆ ದಾಟುವಾಗ ವಾಹನಗಳು ಗಮನಕ್ಕೆ ಬರೋದಿಲ್ಲ ಹಾಗೂ ಪರೀಕ್ಷೆಗಳು ಹತ್ತಿರ ಬರುವ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು ತೆರವಾದ ಕಾರಣ ಶಿಕ್ಷಕರ ಕೊರತೆ ಯಾಗಿದೆ ಅಂದರು.

ಗ್ರಾಮ ಸಭಾ ವೇದಿಕೆಯಲ್ಲಿ ವೀರಕಂಭ ಗ್ರಾಮ ಪಂಚಾಯತ್ ಅಧ್ಯಕ್ಷೆ ಲಲಿತ, ಉಪಾಧ್ಯಕ್ಷರಾದ ಜನಾರ್ಧನ ಪೂಜಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುಷ್ಪ, ಕಾರ್ಯದರ್ಶಿ ಸವಿತಾ ಮೊದಲಾದವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರುಗಳು, ಗ್ರಾಮ ಆರೋಗ್ಯ ಸುರಕ್ಷ ಆಧಿಕಾರಿ ಜ್ಯೋತಿ, ಮಜಿ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಇಂದು ಶೇಖರ್, ಕೆಲಿಂಜ ಶಾಲಾ ಶಿಕ್ಷಕಿ ಶ್ವೇತಾ, ಬಾಯಿಲ ಶಾಲಾ ಶಿಕ್ಷಕಿ ವಾರಿಜಾಕ್ಷಿ, ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಗನವಾಡಿ ಶಿಕ್ಷಕಿಯರು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

You may also like

News

ದಿಲ್ಲಿ ಸ್ಪೋಟ ಘಟನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮ

ದಿಲ್ಲಿಯಲ್ಲಿ ನಡೆದ ಸ್ಪೋಟ ಘಟನೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಲ್ಲಾದ್ಯಂತ ರಾತ್ರಿ ವೇಳೆ ಪೊಲೀಸ್ ಅಧಿಕಾರಿಗಳು ಕಟ್ಟುನಿಟ್ಟಾದ ಗಸ್ತು
News

ಮಹಿಳಾ ವೈಭವ – 2026: ಮಂಗಳೂರಿನಲ್ಲಿ ರಾಜ್ಯ ಮಟ್ಟದ ಮಹಿಳಾ ಸಮ್ಮೇಳನ

ಮಹಿಳಾ ಸಬಲೀಕರಣಕ್ಕೆ ಸುವರ್ಣ ಅಧ್ಯಾಯ – ಚಂಚಲ ತೇಜೋಮಯ ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟವು 2026ರ ಜನವರಿ 31 ಮತ್ತು ಫೆಬ್ರವರಿ 1ರಂದು ಮಂಗಳೂರಿನ ಪುರಭವನದಲ್ಲಿ

You cannot copy content of this page