May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಜೆರಾರ್ಡ್ ಟವರ್ಸ್ ರವರ ಏಕಾಂಗಿ ಪ್ರತಿಭಟನೆಗೆ ಕಣ್ಣುಗಳನ್ನು ತೆರೆದ ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು

ಧರೆಗುರುಳಿಸಿದ ಕದ್ರಿ ಶಿವಭಾಗ್ ನಲ್ಲಿರುವ ಒಣ ಮರ

ಸಾರ್ವಜನಿಕರಿಂದ ವ್ಯಾಪಕ ಪ್ರಶಂಸೆ ಗಿಟ್ಟಿಸಿಕೊಂಡ ಸಾಮಾಜಿಕ ಕಾರ್ಯಕರ್ತ

ಮಂಗಳೂರು ಮಹಾ ನಗರ ಪಾಲಿಕೆ ವ್ಯಾಪ್ತಿಯ ಕದ್ರಿ ಶಿವಭಾಗ್ ಬಸ್ ಸ್ಟ್ಯಾಂಡ್ ಬಳಿ ಇದ್ದ ಒಣ ಮರವನ್ನು ತೆಗೆಯಲು ಹಲವು ರೀತಿಯಿಂದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನ ಆಗದೇ ಇರುವುದನ್ನು ಗಮನಿಸಿ, ಸಾರ್ವಜನಿಕರಿಗೆ ಈ ಒಣ ಮರದಿಂದ ಆಗುವ ಅನಾಹುತಗಳನ್ನು ತಪ್ಪಿಸಲು ಸಾಮಾಜಿಕ ಕಾರ್ಯಕರ್ತ ಜೆರಾರ್ಡ್ ಟವರ್ಸ್ ಇದೇ ಜನವರಿ 28ರಂದು ವಿನೂತನ ರೀತಿಯಲ್ಲಿ ಏಕಾಂಗಿಯಾಗಿ ಪ್ರತಿಭಟನೆಯನ್ನು ಮಾಡಿ ‘ಒಣಗಿದ ಮರ ಕಡಿಯಿರಿ ಜನರ ಪ್ರಾಣ ರಕ್ಷಿಸಿ’ ಎಂದು ಮಾಧ್ಯಮಗಳ ಮುಖಾಂತರ ಬೀಸಿದ ಚಾಟಿಗೆ ಇಂದು ಫೆಬ್ರವರಿ 6ರಂದು ಗುರುವಾರ ಒಣಗಿದ ಮರವನ್ನು ಕಡಿದು ಧರೆಗುರುಳಿಸುವ ಮುಖಾಂತರ ಯಶಸ್ವಿಯನ್ನು ಕಂಡಿದ್ದಾರೆ.

ಜೆರಾರ್ಡ್ ಟವರ್ಸ್ ರವರ ಈ ಏಕಾಂಗಿ ಪ್ರತಿಭಟನೆಗೆ ಮತ್ತು ಸಿಕ್ಕ ಯಶಸ್ಸಿಗೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕರಿಂದ ಸೋಶಿಯಲ್ ಮೀಡಿಯಾ ಮುಖಾಂತರ ವ್ಯಾಪಕ ಪ್ರಶಂಸೆಗಳು ಹರಿದು ಬರುತ್ತಿವೆ.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page