March 25, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಅಳದಂಗಡಿ ಸತ್ಯದೇವತೆ ದೈವದ ಕಾರ್ಣಿಕ – ಕಳೆದುಹೋದ ಚಿನ್ನದ ಬ್ರೆಸ್ ಲೆಟ್ ಪತ್ತೆ

ಬೆಳ್ತಂಗಡಿ : ಅಳದಂಗಡಿಯ ಸಮೀಪ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಫೆಬ್ರವರಿ 7ರಂದು ಮುಂಡೂರು ನಿವಾಸಿ ರಮಣಿ ಯವರ ಚಿನ್ನದ ಬ್ರೆಸ್ ಲೆಟ್ ಕಳೆದು ಹೋಗಿದ್ದು ಫೆ.9 ರಂದು  ಅಳದಂಗಡಿ ಸತ್ಯದೇವತೆ ದೈವದ ಕಾರ್ಣಿಕದಿಂದ ಮೇಲಂತಬೆಟ್ಟು ಬಳಿ ಪತ್ತೆಯಾಗಿದೆ.

ರಮಣಿಯವರು ಅಳದಂಗಡಿ ಬಳಿ ತನ್ನ ದ್ವಿಚಕ್ರ ವಾಹನದಲ್ಲಿ ಹೋಗುತ್ತಿರುವಾಗ ತನ್ನ ಚಿನ್ನವನ್ನು ಕಳೆದುಕೊಂಡಿದ್ದರು. ಅದು ಎಷ್ಟು ಹುಡುಕಾಡಿದರೂ ಪತ್ತೆಯಾಗಲಿಲ್ಲ. ಈ ವೇಳೆ ಚಿನ್ನದ ಬ್ರೆಸ್ ಲೆಟ್ ಸಿಕ್ಕಿದರೆ ಅಳದಂಗಡಿ ಸತ್ಯದೇವತೆ ದೈವಸ್ಥಾನಕ್ಕೆ ಹೋಗಿ ಅಗೇಲು ಕೊಡುವುದಾಗಿ ಹರಕೆ ಹೊತ್ತುಕೊಂಡಿದ್ದರು. ಹರಕೆ ಹೊತ್ತ ಫಲದಿಂದ ಫೆಬ್ರವರಿ 9ರಂದು ಚಿನ್ನದ ಬ್ರೆಸ್ ಲೆಟ್ ಪತ್ತೆಯಾಗಿವೆ ಎಂದು ರಮಣಿಯವರು ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೇಸರ ಶಿವಪ್ರಸಾದ್ ಅಜಿಲರವರಿಗೆ ತಿಳಿಸಿದ್ದಾರೆ.

You may also like

News

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ರಾಜ್ಯಕ್ಕೆ ಮಾದರಿ – ಕೆ.ವಿ. ಪ್ರಭಾಕರ್

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಕೇವಲ ಸಭೆ, ಸಮಾರಂಭಗಳಿಗೆ ಮಾತ್ರವೇ ಸೀಮಿತವಾಗದೆ ಸಮಾಜಮುಖಿ ಚಟುವಟಿಕೆಗಳ ಮೂಲಕ ರಾಜ್ಯಕ್ಕೆ ಮಾದರಿಯಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ
News

MLC ಐವನ್‌ ಡಿಸೋಜಾರವರ ನೇತೃತ್ವದಲ್ಲಿ ಮಂಗಳೂರಿನಲ್ಲಿ ಸೌಹಾರ್ದ ಇಫ್ತಾರ್‌ ಕೂಟ

ಮಂಗಳೂರು ಪಂಪ್ ವೆಲ್ ಬಳಿಯ ಫಾದರ್‌ ಮುಲ್ಲರ್‌ ಕನ್ವೆನ್ಷನ್ ಹಾಲ್‌ನಲ್ಲಿ ಕರ್ನಾಟಕ ವಿಧಾನ ಪರಿಷತ್‌ ಶಾಸಕ ಐವನ್‌ ಡಿಸೋಜಾರವರ ನೇತೃತ್ವದಲ್ಲಿ 10ನೇ ವರ್ಷದ ಸೌಹಾರ್ಧ ಇಪ್ತಾರ್‌ ಕೂಟವನ್ನು

You cannot copy content of this page