May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪ್ರಸಿದ್ದ ಚಲನಚಿತ್ರ ನಟ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಚೇತನ್ ರೈ ಮಾಣಿ ಇವರ ಮಗಳು ವೆನ್ಯ ರೈ ನಾಯಕಿಯಾಗಿ ನಟಿಸಿದ ‘ಆರಾಟ’ ಕನ್ನಡ ಸಿನಿಮಾ 16ನೇ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಗೆ ಆಯ್ಕೆ

ಬೆಂಗಳೂರಿನಲ್ಲಿ ಮಾರ್ಚ್ 1ರಿಂದ 8ರ ತನಕ ನಡೆಯಲಿರುವ 16ನೇ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಗೆ ಪ್ರಸಿದ್ದ ಚಲನಚಿತ್ರ ನಟ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಚೇತನ್ ರೈ ಮಾಣಿ ಇವರ ಮಗಳು ವೆನ್ಯ ರೈ ನಾಯಕಿಯಾಗಿ ನಟಿಸಿದ ಆರಾಟ ಕನ್ನಡ ಸಿನಿಮಾ ಆಯ್ಕೆಯಾಗಿದೆ. ಅದರಂತೆಯೇ ಪಿದಾಯಿ ಹಾಗೂ ದಸ್ಕತ್ ಎನ್ನುವ ತುಳು ಸಿನಿಮಾಗಳೂ ಆಯ್ಕೆಯಾಗಿವೆ.

ಈ ಮೂರೂ ಚಲನಚಿತ್ರಗಳ ನಿರ್ದೇಶಕರು, ನಿರ್ಮಾಪಕರು, ಕಲಾವಿದರು ಹಾಗೂ ತಂತ್ರಜ್ಞರು ತುಳುನಾಡಿನವರಾಗಿರುವುದು ನಮ್ಮ ಮಂಗಳೂರು ಜನರಿಗೆ ಹೆಮ್ಮೆಯ ವಿಚಾರ. ಈ ಮೂರೂ ಚಲನಚಿತ್ರದ ನಿರ್ದೇಶಕರಿಗೆ, ನಿರ್ಮಾಪಕರಿಗೆ, ತಂತ್ರಜ್ಞರಿಗೆ ಹಾಗೂ ಎಲ್ಲಾ ಕಲಾವಿದರಿಗೂ ಕರಾವಳಿ ಸುದ್ದಿ ಪತ್ರಿಕೆಯು ಅಭಿನಂದನೆಯನ್ನು ಸಲ್ಲಿಸುತ್ತದೆ.

ಆರಾಟ ಕನ್ನಡ ಸಿನಿಮಾದ ನಿರ್ದೇಶಕರು ಪುಷ್ಪರಾಜ್ ರೈ ಮಲಾರಬೀಡು, ಪಿದಾಯಿ ತುಳು ಸಿನಿಮಾದ ನಿರ್ದೇಶಕರು ಸಂತೋಷ್ ಮಾಡ ಹಾಗೂ ದಸ್ಕತ್ ತುಳು ಸಿನಿಮಾದ ನಿರ್ದೇಶಕರು ಅನೀಶ್ ಪೂಜಾರಿ ವೇಣೂರು ಆಗಿರುತ್ತಾರೆ.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page