April 27, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಥೊಲಿಕ್ ಸಭಾ ಕೇಂದ್ರೀಯ ಮಾಜಿ ಅಧ್ಯಕ್ಷ ಕಾಶ್ಮೀರ್ ಮಿನೇಜಸ್ ಇನ್ನಿಲ್ಲ

ಕೇಂದ್ರೀಯ ಆಧ್ಯಾತ್ಮಿಕ ನಿರ್ದೇಶಕರಾದ ಡಾ. ಜೆ.ಬಿ. ಸಲ್ಡಾನ್ಹಾ ಹಾಗೂ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ಇವರಿಂದ ತೀವ್ರ ಸಂತಾಪ

ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಇದರ 1991-93 ಅವಧಿಯ ಕೇಂದ್ರೀಯ ಮಾಜಿ ಅಧ್ಯಕ್ಷ, ಸಮಾಜ ಸೇವಕ, ಸಂಘಟನಾ ಚತುರ ಹಾಗೂ ನಿವೃತ್ತ ಶಿಕ್ಷಕ ಬೆಳ್ತಂಗಡಿ ನಿವಾಸಿ 79 ವರ್ಷ ಪ್ರಾಯದ ಕಾಶ್ಮೀರ್ ಮಿನೇಜಸ್ ರವರು ಅಲ್ಪಕಾಲದ ಅಸೌಖ್ಯದಿಂದ ಫೆಬ್ರವರಿ 12ರಂದು ಬುಧವಾರ ನಿಧನ ಹೊಂದಿದರು.

ಉಜಿರೆಯ ರತ್ನಮಾನಸದ ಮುಖ್ಯ ಪಾಲಕರಾಗಿ 1972 ರಿಂದ 2012 ಕಾರ್ಯನಿರ್ವಹಿಸಿರುವ ಇವರು ಉಜಿರೆ ಶ್ರೀ ಧರ್ಮಸ್ಥಳ ಸೆಕೆಂಡರಿ ಶಾಲೆ, ಧರ್ಮಸ್ಥಳ ಎಸ್.ಡಿ.ಎಂ. ಹೈಸ್ಕೂಲ್ ನಲ್ಲಿ ಶಿಕ್ಷಕರಾಗಿ, ಎಸ್.ಡಿ.ಎಂ. ರೆಸಿಡೆನ್ಸಿಯಲ್ ಕಾಲೇಜಿನ ನಿರ್ದೇಶಕರಾಗಿ, ಕೃಷಿ ತಜ್ಞರಾಗಿಯೂ ಇವರು ಸೇವೆ ಸಲ್ಲಿಸಿದ್ದಾರೆ. ಮೃತರು ಪತ್ನಿ, ಇಬ್ಬರು ಮಕ್ಕಳು, ಮೊಮ್ಮಕ್ಕಳನ್ನು ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ.

ಮಂಗಳೂರು ಧರ್ಮಕ್ಷೇತ್ರದ ಕಥೊಲಿಕ್ ಸಭಾ ಸಂಘಟನೆಯಲ್ಲಿ ನಿಷ್ಟಾವಂತರಾಗಿ ಸೇವೆಯನ್ನು ಸಲ್ಲಿಸಿ ಸಂಘಟನೆ ಬಲಿಷ್ಠಗೊಳಿಸುವುದರೊಂದಿಗೆ ಅದರ ಅಭಿವೃದ್ಧಿಗೆ ಕಾರಣಕರ್ತರಾದ ಇವರ ನಿಧನಕ್ಕೆ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಇದರ ಕೇಂದ್ರೀಯ ಆಧ್ಯಾತ್ಮಿಕ ನಿರ್ದೇಶಕರಾದ ವಂದನೀಯ ಡಾ. ಜೆ.ಬಿ. ಸಲ್ಡಾನ್ಹಾ, ಕೇಂದ್ರೀಯ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್, ನಿಕಟ ಪೂರ್ವ ಅಧ್ಯಕ್ಷ ಸ್ಟ್ಯಾನಿ ಲೋಬೊ ಬಂಟ್ವಾಳ, ಎಲ್ಲಾ ಮಾಜಿ ಅಧ್ಯಕ್ಷರು, ಕೇಂದ್ರೀಯ ಕಾರ್ಯಕಾರಿ ಸಮಿತಿಯ ಸದಸ್ಯರು ತೀವ್ರ ಸಂತಾಪವನ್ನು ಸೂಚಿಸಿದ್ದಾರೆ.

You may also like

News

‘ಪಿದಾಯಿ’ ತುಳು ಚಿತ್ರ ಮೇ 9ಕ್ಕೆ ಬೆಳ್ಳಿತೆರೆಗೆ

ನಮ್ಮ ಕನಸು ಬ್ಯಾನರಿನಲ್ಲಿ ಕೆ. ಸುರೇಶ್ ರವರು ನಿರ್ಮಾಣ ಮಾಡಿದ, ರಮೇಶ್ ಶೆಟ್ಟಿಗಾರ್ ಬರೆದು ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸಂತೋಷ್ ಮಾಡ ನಿರ್ದೇಶನದಲ್ಲಿ ಮೂಡಿ ಬಂದ
News

ಪರಮಪೂಜ್ಯ ಪೋಪ್ ಫ್ರಾನ್ಸಿಸ್‌ರವರಿಗೆ MCC ಬ್ಯಾಂಕ್ ವತಿಯಿಂದ ಗೌರವ ನಮನ

ಮಂಗಳೂರಿನ ಹಂಪನಕಟ್ಟೆಯಲ್ಲಿರುವ MCC ಬ್ಯಾಂಕ್ ಇದರ ಆಡಳಿತ ಕಛೇರಿಯಲ್ಲಿ ಕಥೊಲಿಕ್ ಕ್ರೈಸ್ತರ ಪರಮೋಚ್ಚ ಧರ್ಮಗುರು ಪರಮಪೂಜ್ಯ ಪೋಪ್ ಫ್ರಾನ್ಸಿಸ್ ರವರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮವನ್ನು ಎಪ್ರಿಲ್ 24ರಂದು

You cannot copy content of this page