April 27, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮುಂಡೂರು ಜಾತ್ರೋತ್ಸವ ಸಂಪನ್ನ

ಬೆಳ್ತಂಗಡಿ : ಮುಂಡೂರು ಶ್ರೀ ಮಂಗಳಗಿರಿ ಕ್ಷೇತ್ರ ಶ್ರೀ ನಾಗಕಲ್ಲುರ್ಟಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಕ್ಷೇತ್ರದಲ್ಲಿ ವಿಶೇಷ ಪೂಜೆ ಮತ್ತು ರಂಗಪೂಜೆ ಫ್ರೆಬ್ರವರಿ 13ರಂದು ಗುರುವಾರ ನಡೆಯಿತು.

ಬೆಳಗ್ಗೆ ನಾಗತಂಬಿಲ, ನಾಗಬ್ರಹ್ಮ ದೇವರಿಗೆ ತನುತಂಬಿಲ, ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ ಉದ್ಭವ ಗಣಪತಿಗೆ ಮತ್ತು ಶ್ರೀ ನಾಗಾಂಬಿಕೆ ಅಮ್ಮನವರಿಗೆ ಜೋಡು ರಂಗಪೂಜೆ ನಡೆಯಿತು. ಕಾರ್ಕಳ ಡೆನ್ನಾನ ಕಲಾವಿದರಿಂದ ಡೆನ್ನಾನ ತುಳುನಾಟಕ ನಡೆಯಿತು.

ಕ್ಷೇತ್ರದ ವತಿಯಿಂದ ಕ್ಷೇತ್ರದ ಅರ್ಚಕ ವೆಂಕಟೇಶ ಶಾಂತಿ, ನಾಟಕ ಕಲಾವಿದೆ ಅನುಷಾ ಆಚಾರ್ಯ, ಅಭಯ ಹಸ್ತ ತಂಡದ ಉಮನಾಥ್ ಕೋಟ್ಯಾನ್ ಮತ್ತು ತಂಡದವರಿಗೆ, ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರಾಯೋಜಕ ಜಯರಾಜ್ ಬಂಗೇರ, ಪುಷ್ಪಾಲಂಕಾರ ಸೇವಾಕರ್ತರಾದ ಸುಧಾಮಣಿ, ಗೋಪಾಲ ಶೆಟ್ಟಿ ಅವರನ್ನು ಗೌರವಿಸಲಾಯಿತು. ಕ್ಷೇತ್ರದಲ್ಲಿ ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಿದ 200 ಮಂದಿಗೆ ವಸ್ತ್ರ ವಿತರಿಸಲಾಯಿತು.

ಕ್ಷೇತ್ರದ ಆಡಳಿತ ಮೊಕ್ತೇಸರ ರಾಜೀವ, ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್, ಕಾರ್ಯದರ್ಶಿ ಜಯರಾಜ್ ಬಂಗೇರ, ಉಪಾಧ್ಯಕ್ಷ ಪ್ರಶಾಂತ್ ಆಚಾರ್ಯ, ಜೊತೆ ಕಾರ್ಯದರ್ಶಿ ಪ್ರಶಾಂತ್ ಶೆಟ್ಟಿ ಮತ್ತು ಭಕ್ತರು ಉಪಸ್ಥಿತರಿದ್ದರು.

You may also like

News

‘ಪಿದಾಯಿ’ ತುಳು ಚಿತ್ರ ಮೇ 9ಕ್ಕೆ ಬೆಳ್ಳಿತೆರೆಗೆ

ನಮ್ಮ ಕನಸು ಬ್ಯಾನರಿನಲ್ಲಿ ಕೆ. ಸುರೇಶ್ ರವರು ನಿರ್ಮಾಣ ಮಾಡಿದ, ರಮೇಶ್ ಶೆಟ್ಟಿಗಾರ್ ಬರೆದು ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸಂತೋಷ್ ಮಾಡ ನಿರ್ದೇಶನದಲ್ಲಿ ಮೂಡಿ ಬಂದ
News

ಪರಮಪೂಜ್ಯ ಪೋಪ್ ಫ್ರಾನ್ಸಿಸ್‌ರವರಿಗೆ MCC ಬ್ಯಾಂಕ್ ವತಿಯಿಂದ ಗೌರವ ನಮನ

ಮಂಗಳೂರಿನ ಹಂಪನಕಟ್ಟೆಯಲ್ಲಿರುವ MCC ಬ್ಯಾಂಕ್ ಇದರ ಆಡಳಿತ ಕಛೇರಿಯಲ್ಲಿ ಕಥೊಲಿಕ್ ಕ್ರೈಸ್ತರ ಪರಮೋಚ್ಚ ಧರ್ಮಗುರು ಪರಮಪೂಜ್ಯ ಪೋಪ್ ಫ್ರಾನ್ಸಿಸ್ ರವರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮವನ್ನು ಎಪ್ರಿಲ್ 24ರಂದು

You cannot copy content of this page