October 31, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬೆಳ್ತಂಗಡಿಯ ನವ ವಿವಾಹಿತ ಮೈಸೂರಿನಲ್ಲಿ ಆತ್ಮಹತ್ಯೆ

ಮೈಸೂರಿನ ಕಂಪೆನಿಯೊಂದರಲ್ಲಿ ಟೆಕ್ನಿಕಲ್ ಆಫೀಸರ್ ಆಗಿ ಕೆಲಸ ನಿರ್ವಹಿಸುತ್ತಿದ್ದ 35 ವರ್ಷ ಪ್ರಾಯದ ನವ ವಿವಾಹಿತ ಕಿರಣ್ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆಬ್ರವರಿ 13ರಂದು ಗುರುವಾರ ಮೈಸೂರಿನಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಲ್ಕೂರು ಗ್ರಾಮದ ಮಜಲಡ್ಡ ನಿವಾಸಿಯಾಗಿರುವ ಕರಿಯ ಪೂಜಾರಿಯವರ ಪುತ್ರ ಕಿರಣ್ ಅವರು ಕಳೆದ 12 ವರ್ಷಗಳಿಂದ ಮೈಸೂರಿನ ಖಾಸಗಿ ಕಂಪನಿಯೊಂದರಲ್ಲಿ ಟೆಕ್ನಿಕಲ್ ಆಫೀಸರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಇವರಿಗೆ ಉತ್ತಮ ಸಂಬಳವು ಇತ್ತು, ಕಳೆದ ಮೂರೂವರೆ ತಿಂಗಳ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮೃತರು ತಂದೆ, ತಾಯಿ, ಪತ್ನಿ, ಓರ್ವ ಸಹೋದರ, ಸಹೋದರಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಾಗಿದೆ. ಈ ಸಂಬಂಧ ಮೈಸೂರು ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

You may also like

News

ಬಂಟ್ವಾಳದ ನೇತ್ರಾವತಿ ನದಿಗೆ ಹಾರಿ ಮೊಗರ್ನಾಡ್ ನಿವಾಸಿ ಪೀಟರ್ ಲೋಬೊ ಆತ್ಮಹತ್ಯೆ

ಬಂಟ್ವಾಳ ತಾಲೂಕಿನ ಮೊಗರ್ನಾಡ್ ಮಾರ್ನಬೈಲ್ ನಿವಾಸಿ 60 ವರ್ಷ ಪ್ರಾಯದ ಪೀಟರ್ ಲೋಬೊ ಎಂಬುವವರು ಪಾರ್ಶ್ವವಾಯು ರೋಗದಿಂದ ಬಳಲುತ್ತಿದ್ದು, ತಾನು ಯಾರಿಗೂ ಅವಲಂಬನೆಯಾಗಬಾರದೆಂಬ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿರುವ
News

ಶೀಘ್ರದಲ್ಲೇ ಅಧಿಕೃತ Caller ID ಸೇವೆ ಆರಂಭ – ಸ್ಕ್ಯಾಮ್ ಕರೆಗಳಿಗೆ ಬೀಳಲಿದೆ ಕಡಿವಾಣ

ಇತ್ತೀಚಿನ ದಿನಗಳಲ್ಲಿ ಅಪರಿಚಿತ ನಂಬರ್‌ಗಳಿಂದ ಕರೆ ಮಾಡಿ ವಂಚಿಸುವ ಘಟನೆಗಳು ಭಾರೀ ಪ್ರಮಾಣದಲ್ಲಿ ಹೆಚ್ಚಾಗುತ್ತಿವೆ. ಆದರೆ ಇದೀಗ, ಈ ರೀತಿಯ ವಂಚನೆಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ದೂರಸಂಪರ್ಕ

You cannot copy content of this page