September 2, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಆಟದ ಗನ್ ಎಂದು ಅಸಲಿ ಗನ್‌ನಿಂದ ಫೈರಿಂಗ್ – 3 ವರ್ಷದ ಬಾಲಕ ದುರ್ಮರಣ

ಎದೆ ಝಲ್ಲೆನೆಸುವಂತಹ ಘಟನೆ

ಪೋಷಕರು ಎಚ್ಚೆತ್ತುಕೊಳ್ಳಲೇಬೇಕಾದ ವಿಚಾರ

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನಲ್ಲಿ 13 ವರ್ಷದ ಬಾಲಕನೊಬ್ಬ ಆಟವಾಡುವಾಗ ಆಕಸ್ಮಿಕವಾಗಿ ತನ್ನ 3 ವರ್ಷದ ತಮ್ಮನ ಮೇಲೆ ಗುಂಡು ಹಾರಿಸಿದ್ದಾನೆ. ಗುಂಡು ತಗುಲಿದ ಪರಿಣಾಮ ಮಗುವಿನ ಹೊಟ್ಟೆ ಛಿದ್ರವಾಗಿದ್ದು ಪ್ರಾಣಬಿಟ್ಟಿದೆ. ನಾಗಮಂಗಲದ ದೊಂದೇಮಾದಿಹಳ್ಳಿಯಲ್ಲಿ ಕಾಂಗ್ರೆಸ್ ಮುಖಂಡ ನರಸಿಂಹಮೂರ್ತಿ ಎಂಬುವರಿಗೆ ಸೇರಿದ ಕೋಳಿ ಫಾರಂನಲ್ಲಿ ಈ ಘಟನೆ ನಡೆದಿದೆ.

ಕಳ್ಳ ಪೊಲೀಸ್ ಆಟ ಆಡೋಣ ಎಂದು ಶೂಟ್ ಮಾಡಿದ ಬಾಲಕ

ಕೋಳಿ ಫಾರಂನಲ್ಲಿ ಭದ್ರತೆಗಾಗಿ ಒಂದು ಅಸಲಿ ಗನ್‌ ಇಡಲಾಗಿತ್ತು. ಅದು ಸಜೀವ ಗುಂಡುಗಳಿಂದ ಲೋಡೆಡ್ ಆಗಿತ್ತು. ಪಶ್ಚಿಮ ಬಂಗಾಳ ಮೂಲದ ಶಶಾಂಕ್ ಹಾಗೂ ಲಿಪಿಕ ದಂಪತಿ ಇಲ್ಲೇ ಕೂಲಿ ಕಾರ್ಮಿಕರಾಗಿದ್ದು, 13 ವರ್ಷದ ಬಾಲಕ ಸುದೀಪ್‌ ದಾಸ್‌ನೊಂದಿಗೆ 3 ವರ್ಷದ ಮಗುವನ್ನು ಆಟವಾಡಲು ಬಿಟ್ಟು ಕೆಲಸಕ್ಕೆ ಹೋಗಿದ್ದರು.

ಈ ವೇಳೆ ಬಾಲಕ ಸುದೀಪ್, ಮೇಲೆ ಇದ್ದ ಗನ್ ತೆಗೆದುಕೊಂಡು ಕಳ್ಳ-ಪೊಲೀಸ್ ಆಟ ಆಡೋಣ ಎನ್ನುತ್ತಾ 3 ವರ್ಷದ ಮಗುವಿನ ಮೇಲೆ ಶೂಟ್ ಮಾಡಿದ್ದಾನೆ. ಈ ಆಕಸ್ಮಿಕ ಫೈರಿಂಗ್‌ ಮಗುವಿನ ಹೊಟ್ಟೆ ಸೀಳಿದೆ. ಅಲ್ಲೇ ಅಭಿಷೇಕ್ ತಾಯಿ ಲಿಪಿಕಾ ಇದ್ದು ಅವರಿಗೂ ಗಾಯವಾಗಿದೆ.

ಗಂಭೀರವಾಗಿ ಗಾಯಗೊಂಡಿದ್ದ ಮಗುವನ್ನು ನಾಗಮಂಗಲ ಆಸ್ಪತ್ರೆಗೆ ದಾಖಲಿಸಲಾಯಿತು. ಗನ್‌ನಿಂದ ಫೈರ್ ಆದ ಗುಂಡು ಮಗುವಿನ ಹೊಟ್ಟೆ ಸೀಳಿದ್ದರಿಂದ ಹೊಟ್ಟೆಯಲ್ಲಿದ್ದ ಕರಳು ಹೊರಗೆ ಬಂದಿತ್ತು. ಆದರೂ, ಉಸಿರಾಡುತ್ತಿದ್ದ ಮಗುವಿನ ಕರಳುಗಳನ್ನು ಹೊಟ್ಟೆಯ ಮೇಲೆ ಟವೆಲ್‌ನಿಂದ ಕಟ್ಟಿಕೊಂಡು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ತೀವ್ರ ರಕ್ತಸ್ರಾವ ಉಂಟಾಗಿದ್ದರಿಂದ ಮಗು ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದೆ.

ಸ್ಥಳಕ್ಕೆ ಮಂಡ್ಯ ಜಿಲ್ಲಾ SP ಭೇಟಿ: ಗನ್ ವಶಕ್ಕೆ ಪಡೆದು ತನಿಖೆ

ಆಕಸ್ಮಿಕ ಫೈರಿಂಗ್​ನಿಂದ ಮಗು ಸಾವನಪ್ಪಿದ ಘಟನಾ ಸ್ಥಳಕ್ಕೆ ಮಂಡ್ಯ ಜಿಲ್ಲಾ SP ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಗನ್ ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ.

You may also like

News

 ‘ರಾಕ್ಣೊ’ ಸಾಹಿತ್ಯ ಪ್ರಶಸ್ತಿ–2026 ಘೋಷಣೆ

ಸಂಪಾದಕರಾದ ಫಾದರ್ ರೂಪೇಶ್ ಮಾಡ್ತಾ ಅವರಿಂದ ಪ್ರಕಟಣೆ ಮಂಗಳೂರಿನಿಂದ ಪ್ರಕಟವಾಗುತ್ತಿರುವ ಕೊಂಕಣಿ–ಇಂಗ್ಲಿಷ್ ದ್ವಿಭಾಷಾ ವಾರಪತ್ರಿಕೆ ‘ರಾಕ್ಣೊ’ ತನ್ನ ವಾರ್ಷಿಕ ‘ರಾಕ್ಣೊ ಸಾಹಿತ್ಯ ಪ್ರಶಸ್ತಿ–2026’ ಅನ್ನು ಸೆಪ್ಟೆಂಬರ್ 1ರಂದು
News

ರಾಷ್ಟ್ರೀಯ ತನಿಖಾಧಿಕಾರಿ ಸೋಗಿನಲ್ಲಿ ಸುಲಿಗೆ – 11 ಹೆಸರುಗಳಿದ್ದ ಖತರ್ನಾಕ್ ವಂಚಕ ಸ್ಯಾಮ್ ಪೀಟರ್ ಮಂಗಳೂರು ಸಿಸಿಬಿ ವಶಕ್ಕೆ!

ರಾಷ್ಟ್ರೀಯ ಅಪರಾಧ ತನಿಖಾ ದಳದ (NCIB) ಹಿರಿಯ ನಿರ್ದೇಶಕ ಅಥವಾ ಅಧಿಕಾರಿಯೆಂದು ಸುಳ್ಳು ಗುರುತು ಹೇಳಿಕೊಂಡು ಕೋಟಿ ಕೋಟಿ ರೂಪಾಯಿ ವಂಚನೆ ಹಾಗೂ ಸುಲಿಗೆ ನಡೆಸುತ್ತಿದ್ದ ಖತರ್ನಾಕ್

You cannot copy content of this page