ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹದ ನೋಂದಣಿ ಕಛೇರಿ ಉದ್ಘಾಟನೆ

ಬೆಳ್ತಂಗಡಿ : ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಮೇ 3ರಂದು ಶನಿವಾರ ಸಂಜೆ ಗಂಟೆ 6.48 ಕ್ಕೆ ಗೋಧೋಳಿ ಲಗ್ನ ಸುಮೂಹೂರ್ತದಲ್ಲಿ 53ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದ್ದು, ವಿವಾಹ ನೋಂದಣಿ ಕಛೇರಿಯನ್ನು ದೇವಸ್ಥಾನದ ಎದುರು ಇರುವ ಪ್ರವಚನ ಮಂಟಪದಲ್ಲಿ ಫೆಬ್ರವರಿ 16ರಂದು ಎಸ್.ಡಿ. ಎಂ. ಧರ್ಮೋತ್ಥಾನ ಟ್ರಸ್ಟ್ ನ ಕಾರ್ಯದರ್ಶಿ ಎ.ವಿ. ಶೆಟ್ಟಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ದೇವಳ ಪಾರುಪತ್ಯಗಾರ್ ಶ್ರೀ ಲಕ್ಷ್ಮೀ ನಾರಾಯಣ ರಾವ್, ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ ರಾವ್, ಅನ್ನಪೂರ್ಣ ಛತ್ರದ ಮ್ಯಾನೇಜರ್ ಸುಬ್ರಹ್ಮಣ್ಯ ಪ್ರಸಾದ್, ನಿವೃತ್ತ ಮುಖ್ಯೋಪಾಧ್ಯಾಯ ಧರ್ಣಪ್ಪ, ಸಂತೋಷ್ ಗೌಡ, ಶಿವರಾಮ್, ಪವಿತ್ರ, ಭವಾನಿ, ಮಂಜುಳಾ ಉಪಸ್ಥಿತರಿದ್ದರು.
ಸಾಮೂಹಿಕ ವಿವಾಹದ ಎಲ್ಲಾ ವೆಚ್ಚವನ್ನು ಧರ್ಮೋತ್ಥಾನ ಟ್ರಸ್ಟ್ ವತಿಯಿಂದ ನಿರ್ವಹಿಸಲಿದ್ದು, ಈ ಸಮಾರಂಭದಲ್ಲಿ ಮದುವೆಯಾಗಲಿಚ್ಚಿಸುವವರು ಏಪ್ರಿಲ್ 25ರೊಳಗೆ ಹೆಸರು ನೋಂದಾಯಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 0825626644, 9663464648, 8147263422