May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ಇಂದಾಜೆಯವರಿಗೆ ಯುನಿವರ್ಸಲ್‌ ಮೀಡಿಯಾ ಅವಾರ್ಡ್

ಮಂಗಳೂರು : ಇಂಟರ್ ನ್ಯಾಷನಲ್ ಕಲ್ಚರಲ್ ಫೆಸ್ಟ್ ಕೌನ್ಸಿಲ್ ಆಫ್ ಇಂಡಿಯಾ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಯುನಿವರ್ಸಲ್ ಮೀಡಿಯಾ ಅವಾರ್ಡ್ 2025 ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅವರು ಭಾಜನರಾಗಿದ್ದಾರೆ.

ಮಾಧ್ಯಮ ಕ್ಷೇತ್ರ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಅವರು ಮಾಡಿದ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ. ದುಬೈನಲ್ಲಿ ಫೆಬ್ರವರಿ 24ರಂದು ನಡೆಯುವ 47ನೇ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಹಾಗೂ ಸಾಂಸ್ಕೃತಿಕ ವಿನಿಮಯ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ದುಬೈ ಆಲ್ ಹಜ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ. ಮೊಹಮ್ಮದ್ ಇಬ್ರಾಹಿಂ ಅಲ್ ಹಜ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಶ್ರೀನಿವಾಸ ನಾಯಕ್ ಇಂದಾಜೆ ಅವರು ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ, ಚಾಣಕ್ಯ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಬಳಿಕ ಪತ್ರಕರ್ತರ ಗ್ರಾಮ ವಾಸ್ತವ್ಯ, ಬ್ರ್ಯಾಂಡ್ ಮಂಗಳೂರು ಸೇರಿದಂತೆ ಹಲವಾರು ಸಮಾಜಮುಖಿ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಕುತ್ಲುರು ಸರಕಾರಿ ಶಾಲೆ, ಬಿಜೈ ಕಾಪಿಕಾಡ್ ಅಂಗನವಾಡಿ ಕೇಂದ್ರದ ಅಭಿವೃದ್ಧಿಗೆ ಶ್ರಮಿಸಿದ್ದರು.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page