March 26, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಾಡಬೆಟ್ಟು ವಗ್ಗ ವತಿಯಿಂದ ಮನೆ ದುರಸ್ತಿ ಶ್ರಮದಾನ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ  ಘಟಕ ಕಾಡಬೆಟ್ಟು ವಗ್ಗ ವತಿಯಿಂದ ಆರ್ಥಿಕವಾಗಿ ಹಿಂದುಳಿದ ಬಂಟ್ವಾಳ ತಾಲೂಕಿನ ಮಿತ್ತಟ್ಟು ಕಂದಾಡಿ ಮನೆ ಕಾಡಬೆಟ್ಟು ವಗ್ಗ  ಸುಂದರಿಯವರ  ತೀರಾ ದುರಸ್ತಿಯಲ್ಲಿದ್ದ ಮನೆಯನ್ನು ಶ್ರಮದಾನ ಕಾರ್ಯದ ಮೂಲಕ ರಿಪೇರಿ ಮಾಡಿದರು.

ಕಾರ್ಯಕ್ರಮದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಜಯನಂದ ಪಿ., ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ತುಂಗಪ್ಪ ಬಂಗೇರ, ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರು ಆದ ಚಂದಪ್ಪ ಕುಲಾಲ್, ಭೇಟಿ ನೀಡಿ ಶ್ರಮದಾನಕ್ಕೆ ಪ್ರೋತ್ಸಾಹಿಸಿದರು.

ಮನೆ ರಿಪೇರಿಗೆ ಬೇಕಾದ ಸಹಕಾರವನ್ನು ಪ್ರಮೋದ್ ಕುಮಾರ್ ರೈ ಕಾಡಬೆಟ್ಟು, ಸಂಪತ್ ಶೆಟ್ಟಿ, ಮಹಾಬಲ ರೈ, ಪ್ರವೀಣ್, ನಾರಾಯಣ್ ಶೆಟ್ಟಿ ಒದಗಿಸಿದ್ದು ಶೌರ್ಯ ತಂಡದ ಸಂಯೋಜಕಿ ರೇಖಾ ಪಿ., ಘಟಕ ಪ್ರತಿನಿಧಿ ಪ್ರವೀಣ್, ಸದಸ್ಯರಾದ ಸಂಪತ್ ಶೆಟ್ಟಿ, ರಮೇಶ, ಪವಿತ್ರ ಮದ್ವ, ಶಶಿಕಲಾ, ಪವಿತ್ರ, ಲಕ್ಷ್ಮಣ್, ಅಶೋಕ್ ಬೋಲ್ಮಾರು, ಅಶೋಕ ಹಾರದ್ದು, ನಾರಾಯಣ್ ಶೆಟ್ಟಿ, ರಮೇಶ್, ವಿನೋದ್, ಪ್ರಿಯಾಂಕ, ಮೋಹನಂದ, ಆನಂದ, ರೋಹಿತ್, ಪ್ರಮೀಳ, ಸ್ಥಳೀಯರಾದ ಸುಂದರ ಮೂಲ್ಯ, ಸುನೀತಾ, ಮೊದಲಾದವರು ಭಾಗವಹಿಸಿದ್ದರು.

You may also like

News

ದಲಿತ ಅಪ್ರಾಪ್ತ ವಿದ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಬಿಜೆಪಿ ಮುಖಂಡ ಮಹೇಶ್ ಭಟ್ ಬಂಧನಕ್ಕೆ ಡಿಎಚ್ಎಸ್ ಒತ್ತಾಯ – ಕಠಿಣ ಕ್ರಮಕ್ಕೆ ಆಗ್ರಹ

ಬಂಟ್ವಾಳ ತಾಲೂಕಿನ ವಿಟ್ಲದ ಮುರುವ ಎಂಬಲ್ಲಿ ದಲಿತ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳಿಗೆ ಸ್ಥಳೀಯ ಬಿಜೆಪಿ ಮುಖಂಡ ಮಹೇಶ್ ಭಟ್ ಎಂಬವನು ನಿರಂತರ ಲೈಂಗಿಕ ಕಿರುಕುಳ ನೀಡುವ ಮೂಲಕ ಮಾನಸಿಕ
News

ನೇತ್ರದಾನದಿಂದ ಇನ್ನೊಬ್ಬರ ಬಾಳಿಗೆ ಬೆಳಕು – ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ

ಮಂಗಳೂರು : ಇನ್ನೊಬ್ಬರ ಬಾಳಿಗೆ ಬೆಳಕಾಗುವ ನೇತ್ರದಾನ ಶ್ರೇಷ್ಠ ದಾನವಾಗಿದ್ದು, ನೇತ್ರದಾನಿಗಳ ಬದ್ಧತೆ ಸಮಾಜಕ್ಕೆ ಮಾದರಿಯಾಗಿದೆ ಎಂದು ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ ಹೇಳಿದರು. ದಕ್ಷಿಣ ಕನ್ನಡ

You cannot copy content of this page