May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಡಾ। ರಾಘವೇಂದ್ರ ಭಟ್ಟ, ಉಪ ಮಹಾ ನಿರ್ದೇಶಕ (ಪಶು ವಿಜ್ಞಾನ) ಅವರಿಗೆ ಪ್ರತಿಷ್ಠಿತ ಡಾ| ಪಿ. ಭಟ್ಟಾಚಾರ್ಯ ಪ್ರಶಸ್ತಿ ಪ್ರದಾನ

ರಾಷ್ಟೀಯ ಕೃಷಿ ವಿಜ್ಞಾನ ಅಕಾಡೆಮಿಯ ವತಿಯಿಂದ ನೀಡಲಾಗುವ ಪ್ರಸಿದ್ಧ ವಿಜ್ಞಾನಿ ಡಾ। ಪಿ. ಭಟ್ಟಾಚಾರ್ಯ ಮೆಮೋರಿಯಲ್ ಪ್ರಶಸ್ತಿಯನ್ನು ಭಾರತೀಯ ಕೃಷಿ ಸಂಶೋಧನೆ ಸಂಸ್ಥೆ, ದೆಹಲಿಯಲ್ಲಿ ಉಪ ಮಹಾ ನಿರ್ದೇಶಕ (ಪಶು ವಿಜ್ಞಾನ) ರಾಗಿ ಕಾರ್ಯನಿರತರಾಗಿರುವ ಡಾ| ರಾಘವೇಂದ್ರ ಭಟ್ಟ ಅವರಿಗೆ ಪ್ರದಾನ ಮಾಡಲಾಯಿತು.  ಡಾ| ಭಟ್ಟ ಅವರು ಈ ಪ್ರಶಸ್ತಿಯನ್ನು ಫೆಬ್ರವರಿ 20ರಂದು ಉತ್ತರಾಖಂಡ್ ನ ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ ಗುರ್ಮಿತ್ ಸಿಂಗ್ ಅವರಿಂದ , ಜಿ.ಬಿ. ಪಂತ್ ಕೃಷಿ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯ, ಪಂತ್ ನಗರ್ ನಲ್ಲಿ ಆಯೋಜಿತವಾದ 12ನೇ ರಾಷ್ಟೀಯ ಕೃಷಿ ವಿಜ್ಞಾನ ಕಾಂಗ್ರೆಸ್ ನಲ್ಲಿ ಸ್ವೀಕರಿಸಿದರು.

ಡಾ| ಭಟ್ಟ ಅವರು ಪಶು ವಿಜ್ಞಾನ ಕ್ಷೇತ್ರದಲ್ಲಿ ಒಬ್ಬ ಪ್ರಮುಖ ವಿಜ್ಞಾನಿಯಾಗಿದ್ದು, ಬೆಂಗಳೂರಿನ ರಾಷ್ಟೀಯ ಪಶು ಪೋಷಣೆ ಮತ್ತು ಶರೀರ ಕ್ರಿಯಾ ವಿಜ್ಞಾನ ಸಂಸ್ಥೆಗೆ ಒಂದು ದಶಕದ ಕಾಲ ನಿರ್ದೇಶಕರಾಗಿದ್ದು, ಸಂಸ್ಥೆಯು ಜಾಗತಿಕ ಮಟ್ಟದಲ್ಲಿ ಹೆಸರು ಗಳಿಸಲು ಕಾರಣರಾಗಿದ್ದಾರೆ.  ಡಾ| ಭಟ್ಟ ಅವರ ಮುಂಚೂಣಿಯಲ್ಲಿ ಸಂಸ್ಥೆಯು ಜರ್ಮನಿ, ಜಪಾನ್, ಫ್ರಾನ್ಸ್, ಆಸ್ಟ್ರೇಲಿಯಾ ಮುಂತಾದ ದೇಶಗಳ ಹಲವಾರು ಅಂತರ ರಾಷ್ಟೀಯ ವೈಜ್ಞಾನಿಕ ಸಂಸ್ಥೆಗಳೊಡನೆ ಸಹಯೋಗ ಹೊಂದಿ ಅನೇಕ ಪ್ರಮುಖ ಯೋಜನೆಗಳನ್ನು ಸಫಲಪೂರ್ವಕವಾಗಿ ನಿರ್ವಹಿಸಿ ಸಂಸ್ಥೆಯು ವಿಶ್ವ ಮಟ್ಟದಲ್ಲಿ ಹೆಸರು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.  ಡಾ| ಭಟ್ಟ ಅವರು  ಇದಕ್ಕೆ ಮುಂಚೆ  ತಮ್ಮ ಉತ್ಕೃಷ್ಟ ಸೇವೆಗಾಗಿ ರಾಷ್ಟ್ರ ಮಟ್ಟದಲ್ಲಿ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಪ್ರಸ್ತುತ, ಡಾ| ಭಟ್ಟ ಅವರು ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ, ದೆಹಲಿಯಲ್ಲಿ ಉಪ ಮಹಾ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page