December 12, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬೆಂಗಳೂರು-ಮಂಗಳೂರು ಮಧ್ಯೆ ನೂತನ ಎಕ್ಸ್‌ಪ್ರೆಸ್‌ವೇ ನಿರ್ಮಾಣ- ಪ್ರಯಾಣ ಸಮಯ ಅರ್ಧಕರ್ಧ ಇಳಿಕೆ

ಬೆಂಗಳೂರು ಮತ್ತು ಮಂಗಳೂರು ಮಧ್ಯೆ ನೂತನ ಎಕ್ಸ್‌ಪ್ರೆಸ್‌ವೇ ನಿರ್ಮಾಣಕ್ಕೆ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಮುಂದಾಗಿದೆ. ಹಾಸನದ ಮೂಲಕ ಈ ಎಕ್ಸ್‌ಪ್ರೆಸ್‌ವೇ ಹಾದು ಹೋಗಲಿದೆ. ಸದ್ಯ ಈಗ 350 ಕಿ.ಮೀ ದೂರ ಕ್ರಮಿಸಲು ಸುಮಾರು 7-8 ಗಂಟೆ ಸಮಯ ತೆಗೆದುಕೊಳ್ಳುತ್ತದೆ. ನಾಲ್ಕು ಅಥವಾ ಆರು ಪಥಗಳನ್ನು ಒಳಗೊಂಡಿರುವ ಈ ಎಕ್ಸ್‌ಪ್ರೆಸ್‌ವೇ ನಿರ್ಮಾಣವಾದರೆ ಸಮಯ ಅರ್ಧಕ್ಕರ್ಧ ಕಡಿಮೆಯಾಗಲಿದೆ.

ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ NHAI ಮತ್ತು ಕರ್ನಾಟಕ ಲೋಕೋಪಯೋಗಿ ಇಲಾಖೆ ಕೈಗೆತ್ತಿಕೊಂಡಿವೆ. ಎಲ್ಲವೂ ನಿಗದಿಯಂತೆ ನಡೆದರೆ 2028 ರಿಂದ ನಿರ್ಮಾಣ ಕಾಮಗಾರಿ ಆರಂಭವಾಗಲಿದೆ.  ರಾಜಧಾನಿ ಬೆಂಗಳೂರಿನಿಂದ ಮಂಗಳೂರು ಸಂಪರ್ಕಕ್ಕೆ ಮೂರು ಪ್ರಮುಖ ಮಾರ್ಗಗಳಿವೆ. ಶಿರಾಡಿ, ಚಾರ್ಮಾಡಿ, ಸಂಪಾಜೆ ಘಾಟಿ ಮೂಲಕ ಇಳಿಯಬೇಕಾಗುತ್ತದೆ. ಈ ಪೈಕಿ ಹಾಸನ ಶಿರಾಡಿ ಘಾಟಿ ಬಹಳ ಹತ್ತಿರದ ಮಾರ್ಗವಾಗಿದೆ. ಆದರೆ ಮಳೆಗಾಲದಲ್ಲಿ ಅಲ್ಲಲ್ಲಿ ಭೂಕುಸಿತ ಸಂಭವಿಸಿದರೆ ರಸ್ತೆ ಸಂಚಾರ ದುಸ್ತರವಾಗುತ್ತದೆ. ಈ ಕಾರಣಕ್ಕೆ ಎಕ್ಸ್‌ಪ್ರೆಸ್‌ವೇ ನಿರ್ಮಾಣ ಮಾಡಲು ಸರ್ಕಾರಗಳು ಮುಂದಾಗಿವೆ.

ಸಮಗ್ರ ಯೋಜನಾ ವರದಿಗಾಗಿ ಸರ್ಕಾರ ಜುಲೈನಲ್ಲಿ ಟೆಂಡರ್‌ ಆಹ್ವಾನಿಸಿತ್ತು. ನವೆಂಬರ್‌ ವೇಳೆಗೆ ಒಟ್ಟು 9 ಕಂಪನಿಗಳು ಬಿಡ್‌ ಸಲ್ಲಿಸಿದ್ದು ಈ ಪೈಕಿ ಒಂದು ಕಂಪನಿಯನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಕಂಪನಿಗೆ ಡಿಪಿಆರ್‌ ಪೂರ್ಣಗೊಳಿಸಲು 540 ದಿನಗಳ ಸಮಯವನ್ನು ನೀಡಲಾಗುತ್ತದೆ. ಡಿಪಿಆರ್‌ ಪೂರ್ಣಗೊಂಡ ಬಳಿಕ ಎಕ್ಸ್‌ಪ್ರೆಸ್‌ವೇ ನಿರ್ಮಾಣದ ಕೆಲಸ ಆರಂಭವಾಗಲಿದೆ.

You may also like

News

ಮಂಗಳೂರಿನ ಆಯುಷ್ ಇಲಾಖೆಯ ಅವಧಿ ಮೀರಿದ ಔಷಧ ಅಕ್ರಮ—ಸರ್ಕಾರದ ನಿರ್ಲಕ್ಷ್ಯಕ್ಕೆ ಶಾಸಕ ವೇದವ್ಯಾಸ ಕಾಮತ್ ತೀವ್ರ ಆಕ್ರೋಶ

ಮಂಗಳೂರಿನ ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧಿಗಳನ್ನು ಪೂರೈಕೆ ಮಾಡಿ ರೋಗಿಗಳ ಜೀವದೊಂದಿಗೆ ಆಟವಾಡಿದ ಗಂಭೀರ ಅಕ್ರಮದ ಕುರಿತಾಗಿ ಯಾವುದೇ ಕ್ರಮ ಕೈಗೊಳ್ಳದಿರುವುದನ್ನು ಶಾಸಕ ವೇದವ್ಯಾಸ ಕಾಮತ್
News

ಪುತ್ತೂರಿಗೆ ಶಾಸಕ ಅಶೋಕ್ ರೈ ಕನಸು ನನಸಾದಂತೆ — ರೂಪಾಯಿ 5 ಕೋಟಿ ವೆಚ್ಚದ ಹೊಸ ತಾಲೂಕು ಪಂಚಾಯತ್ ಕಟ್ಟಡಕ್ಕೆ ನಾಳೆ ಡಿಸೆಂಬರ್ 13ರಂದು ಶಿಲಾನ್ಯಾಸ

ಪುತ್ತೂರಿನ ಅಭಿವೃದ್ಧಿ ಕನಸುಗಳು ಒಂದೊಂದಾಗಿ ಸಫಲವಾಗುತ್ತಿವೆ. ಹಳೆಯ ಮತ್ತು ಅಪರಿಹಾರ್ಯವಾಗಿರುವ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪುತ್ತೂರು ತಾಲೂಕು ಪಂಚಾಯತ್ ಕಚೇರಿಗೆ ಹೊಸ ಕಟ್ಟಡದ ಅಗತ್ಯವನ್ನು ಆಗಲೇ ಗುರುತಿಸಿದ್ದ ಶಾಸಕರಾದ

You cannot copy content of this page