September 2, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬೆಂಗಳೂರು-ಮಂಗಳೂರು ಮಧ್ಯೆ ನೂತನ ಎಕ್ಸ್‌ಪ್ರೆಸ್‌ವೇ ನಿರ್ಮಾಣ- ಪ್ರಯಾಣ ಸಮಯ ಅರ್ಧಕರ್ಧ ಇಳಿಕೆ

ಬೆಂಗಳೂರು ಮತ್ತು ಮಂಗಳೂರು ಮಧ್ಯೆ ನೂತನ ಎಕ್ಸ್‌ಪ್ರೆಸ್‌ವೇ ನಿರ್ಮಾಣಕ್ಕೆ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಮುಂದಾಗಿದೆ. ಹಾಸನದ ಮೂಲಕ ಈ ಎಕ್ಸ್‌ಪ್ರೆಸ್‌ವೇ ಹಾದು ಹೋಗಲಿದೆ. ಸದ್ಯ ಈಗ 350 ಕಿ.ಮೀ ದೂರ ಕ್ರಮಿಸಲು ಸುಮಾರು 7-8 ಗಂಟೆ ಸಮಯ ತೆಗೆದುಕೊಳ್ಳುತ್ತದೆ. ನಾಲ್ಕು ಅಥವಾ ಆರು ಪಥಗಳನ್ನು ಒಳಗೊಂಡಿರುವ ಈ ಎಕ್ಸ್‌ಪ್ರೆಸ್‌ವೇ ನಿರ್ಮಾಣವಾದರೆ ಸಮಯ ಅರ್ಧಕ್ಕರ್ಧ ಕಡಿಮೆಯಾಗಲಿದೆ.

ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ NHAI ಮತ್ತು ಕರ್ನಾಟಕ ಲೋಕೋಪಯೋಗಿ ಇಲಾಖೆ ಕೈಗೆತ್ತಿಕೊಂಡಿವೆ. ಎಲ್ಲವೂ ನಿಗದಿಯಂತೆ ನಡೆದರೆ 2028 ರಿಂದ ನಿರ್ಮಾಣ ಕಾಮಗಾರಿ ಆರಂಭವಾಗಲಿದೆ.  ರಾಜಧಾನಿ ಬೆಂಗಳೂರಿನಿಂದ ಮಂಗಳೂರು ಸಂಪರ್ಕಕ್ಕೆ ಮೂರು ಪ್ರಮುಖ ಮಾರ್ಗಗಳಿವೆ. ಶಿರಾಡಿ, ಚಾರ್ಮಾಡಿ, ಸಂಪಾಜೆ ಘಾಟಿ ಮೂಲಕ ಇಳಿಯಬೇಕಾಗುತ್ತದೆ. ಈ ಪೈಕಿ ಹಾಸನ ಶಿರಾಡಿ ಘಾಟಿ ಬಹಳ ಹತ್ತಿರದ ಮಾರ್ಗವಾಗಿದೆ. ಆದರೆ ಮಳೆಗಾಲದಲ್ಲಿ ಅಲ್ಲಲ್ಲಿ ಭೂಕುಸಿತ ಸಂಭವಿಸಿದರೆ ರಸ್ತೆ ಸಂಚಾರ ದುಸ್ತರವಾಗುತ್ತದೆ. ಈ ಕಾರಣಕ್ಕೆ ಎಕ್ಸ್‌ಪ್ರೆಸ್‌ವೇ ನಿರ್ಮಾಣ ಮಾಡಲು ಸರ್ಕಾರಗಳು ಮುಂದಾಗಿವೆ.

ಸಮಗ್ರ ಯೋಜನಾ ವರದಿಗಾಗಿ ಸರ್ಕಾರ ಜುಲೈನಲ್ಲಿ ಟೆಂಡರ್‌ ಆಹ್ವಾನಿಸಿತ್ತು. ನವೆಂಬರ್‌ ವೇಳೆಗೆ ಒಟ್ಟು 9 ಕಂಪನಿಗಳು ಬಿಡ್‌ ಸಲ್ಲಿಸಿದ್ದು ಈ ಪೈಕಿ ಒಂದು ಕಂಪನಿಯನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಕಂಪನಿಗೆ ಡಿಪಿಆರ್‌ ಪೂರ್ಣಗೊಳಿಸಲು 540 ದಿನಗಳ ಸಮಯವನ್ನು ನೀಡಲಾಗುತ್ತದೆ. ಡಿಪಿಆರ್‌ ಪೂರ್ಣಗೊಂಡ ಬಳಿಕ ಎಕ್ಸ್‌ಪ್ರೆಸ್‌ವೇ ನಿರ್ಮಾಣದ ಕೆಲಸ ಆರಂಭವಾಗಲಿದೆ.

You may also like

News

 ‘ರಾಕ್ಣೊ’ ಸಾಹಿತ್ಯ ಪ್ರಶಸ್ತಿ–2026 ಘೋಷಣೆ

ಸಂಪಾದಕರಾದ ಫಾದರ್ ರೂಪೇಶ್ ಮಾಡ್ತಾ ಅವರಿಂದ ಪ್ರಕಟಣೆ ಮಂಗಳೂರಿನಿಂದ ಪ್ರಕಟವಾಗುತ್ತಿರುವ ಕೊಂಕಣಿ–ಇಂಗ್ಲಿಷ್ ದ್ವಿಭಾಷಾ ವಾರಪತ್ರಿಕೆ ‘ರಾಕ್ಣೊ’ ತನ್ನ ವಾರ್ಷಿಕ ‘ರಾಕ್ಣೊ ಸಾಹಿತ್ಯ ಪ್ರಶಸ್ತಿ–2026’ ಅನ್ನು ಸೆಪ್ಟೆಂಬರ್ 1ರಂದು
News

ರಾಷ್ಟ್ರೀಯ ತನಿಖಾಧಿಕಾರಿ ಸೋಗಿನಲ್ಲಿ ಸುಲಿಗೆ – 11 ಹೆಸರುಗಳಿದ್ದ ಖತರ್ನಾಕ್ ವಂಚಕ ಸ್ಯಾಮ್ ಪೀಟರ್ ಮಂಗಳೂರು ಸಿಸಿಬಿ ವಶಕ್ಕೆ!

ರಾಷ್ಟ್ರೀಯ ಅಪರಾಧ ತನಿಖಾ ದಳದ (NCIB) ಹಿರಿಯ ನಿರ್ದೇಶಕ ಅಥವಾ ಅಧಿಕಾರಿಯೆಂದು ಸುಳ್ಳು ಗುರುತು ಹೇಳಿಕೊಂಡು ಕೋಟಿ ಕೋಟಿ ರೂಪಾಯಿ ವಂಚನೆ ಹಾಗೂ ಸುಲಿಗೆ ನಡೆಸುತ್ತಿದ್ದ ಖತರ್ನಾಕ್

You cannot copy content of this page