April 21, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪಂಚ ಗ್ಯಾರಂಟಿಗಳು ಜನಸಾಮಾನ್ಯರ  ಬದುಕಿನ ಜೀವಾಳ – MLC ಐವನ್‌ ಡಿಸೋಜಾ

ಪಂಚ ಗ್ಯಾರಂಟಿಗಳನ್ನು ಜಾರಿಗೆ ತಂದ  ರಾಜ್ಯ ಸರ್ಕಾರವು ಜನ ಸಾಮಾನ್ಯರ ಬದುಕಿನಲ್ಲಿ ಹಾಗೂ ಅರ್ಥಿಕ ಸ್ಸಿತಿಗತಿಗಳಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಪಂಚ ಗ್ಯಾರಂಟಿಗಳ ಮೂಲಕ ಅನೇಕ ಕುಟುಂಬಗಳು ನೆಮ್ಮದಿಯ ಜೀವನ ನಡೆಸುತ್ತಿವೆ. ಯಾರಿಗೆ ಪಂಚ ಗ್ಯಾರಂಟಿಗಳು ಸಿಗಲಿಲ್ಲವೋ ಅವರನ್ನು ಹುಡುಕಿ ರಾಜ್ಯದ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಯ ನೇತೃತ್ವದಲ್ಲಿ ಪಂಚ ಗ್ಯಾರಂಟಿಗಳ ಯೋಜನೆಯ ಅನುಷ್ಠಾನದ ವಿಲೇವಾರಿ ಶಿಬಿರವನ್ನು ಆಯೋಜಿಸಿ ಆ ಮೂಲಕ ಯೋಜನೆಗಳನ್ನು ಪಡೆಯಲು ಅಸಾಧ್ಯವಾಗಿರುವವರ ಮನೆ ಬಾಗಿಲಿಗೆ ತೆರಳಿ ಈ ಯೋಜನೆಯ ಸದುಪಯೋಗವನ್ನು ಪಡೆಯುವಂತೆ ಮಾಡಬೇಕು ಎಂದು ಮಂಗಳೂರಿನ ಬೋಳಾರದ ಸರಕಾರಿ ಶಾಲೆಯಲ್ಲಿ ನಡೆದ ಪಂಚ ಗ್ಯಾರಂಟಿಗಳ ಶಿಬಿರವನ್ನು ಉದ್ಘಾಟಿಸಿ ವಿಧಾನ ಪರಿಷತ್‌ ಶಾಸಕರಾದ ಐವನ್‌ ಡಿಸೋಜಾರವರು ಮಾತನಾಡಿದರು.

ಈ ಸಮಾರಂಭದಲ್ಲಿ ಮಾಜಿ ಶಾಸಕ ಜೆ.ಆರ್‌. ಲೋಬೋರವರು ಉಪಸ್ಥಿತರಿದ್ದು ಈ ಪಂಚ ಗ್ಯಾರಂಟಿಗಳ ಯೋಜನೆಯ ಸದುಪಯೋಗವನ್ನು ಪತ್ರಿಯೊಬ್ಬರು ಪಡೆಯುವಂತಾಗಬೇಕು ಯಾರೊಬ್ಬರೂ ವಂಚಿತರಾಗಬಾರದು ಎಂದು ತಿಳಿಸಿದರು.

ಸಮಾರಂಭದಲ್ಲಿ ಮಾಜಿ ಉಪಮೇಯರ್‌ ಕವಿತಾ ವಾಸು, ಸೌತ್‌ ಬ್ಲಾಕ್‌ ಅಧ್ಯಕ್ಷ ಸಲೀಂ, ಬಿ.ಇ.ಒ. ಈಶ್ವರ್‌, ಮಹಿಳಾ ಮತ್ತು ಮಕ್ಕಳ ಇಲಾಖೆಯ ಸುಪರ್‌ವೈಸರ್‌ ಅನುಪಮ, ಮೆಸ್ಕಾಂ ಸೆಕ್ಷನ್‌ ಆಫೀಸರ್‌ ಸ್ಪರ್ಶ, ಅಲ್ಟೈನ್‌ ಡಿಕುನ್ಹಾ, ಶಾಲಿನಿ, ವಿದ್ಯಾ, ನೀತು, ಮುಸ್ಥಾಫ, ದಿನೇಶ್‌ ಮುಂತಾದವರು ಉಪಸ್ಥಿತರಿದ್ದರು.

You may also like

News

MLC ಐವನ್ ಡಿಸೋಜ ಹಾಗೂ ಕಥೊಲಿಕ್ ಸಭಾ ಕೇಂದ್ರಿಯ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ರವರಿಂದ ಬಿಷಪ್ಸ್ ಹೌಸ್ ನಲ್ಲಿ ಪೋಪ್ ರವರಿಗೆ ಅಂತಿಮ ನಮನ

ಕ್ರಿಶ್ಚಿಯನ್ನರ ಪರಮೋಚ್ಚ ಜಗದ್ಗುರು ಪೋಪ್ ಫ್ರಾನ್ಸಿಸ್ ರವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಇಂದು ಎಪ್ರಿಲ್ 21ರಂದು ಸೋಮವಾರ ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ| ಪೀಟರ್
News

ಜಗದ್ಗುರು ಪೋಪ್ ಫ್ರಾನ್ಸಿಸ್ ಇನ್ನಿಲ್ಲ

ಲ್ಯಾಟಿನ್ ಅಮೆರಿಕದ ಮೊದಲ ಪೋಪ್ ಮತ್ತು ಆಧುನಿಕ ರೋಮನ್ ಕ್ಯಾಥೋಲಿಕ್ ಚರ್ಚ್‌ನಲ್ಲಿ ಪರಿವರ್ತನಾಶೀಲ ವ್ಯಕ್ತಿಯಾಗಿದ್ದ ಜಗದ್ಗುರು ಪೋಪ್ ಫ್ರಾನ್ಸಿಸ್ ಇಂದು ಏಪ್ರಿಲ್ 21ರಂದು ಸೋಮವಾರ ತಮ್ಮ 88

You cannot copy content of this page