May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸೂರಿಕುಮೇರು ಮಸೀದಿಯಲ್ಲಿ ಇಸಾಬಾ ಸ್ವಯಂ ಸೇವಕರಿಂದ ಸ್ವಚ್ಛತಾ ಕಾರ್ಯಕ್ರಮ

ಮಾಣಿ : ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಎಸ್‌ವೈ‌ಎಸ್ ರಾಜ್ಯ ಸಮಿತಿಯ ನಿರ್ದೇಶನದಂತೆ ರಂಝಾನ್ ತಿಂಗಳನ್ನು ಸ್ವಾಗತಿಸುವ ಸಲುವಾಗಿ “ಮನೆ ಮನಗಳನ್ನು ಶುಚಿಗೊಳಿಸೋಣ ಪವಿತ್ರ ಮಾಸವನ್ನು ಸ್ವಾಗತಿಸೋಣ” ಎಂಬ ಧ್ಯೇಯ ವಾಕ್ಯದಡಿ ಸ್ವಚ್ಛತಾ ಕಾರ್ಯಕ್ರಮವನ್ನು ಕರ್ನಾಟಕ ಮುಸ್ಲಿಂ ಜಮಾ‌ಅತ್, ಎಸ್ಸೆಸ್ಸೆಫ್, ಎಸ್‌ವೈ‌ಎಸ್ ಸೂರಿಕುಮೇರು ಯುನಿಟ್ ವತಿಯಿಂದ ಸೂರಿಕುಮೇರು ಬದ್ರಿಯಾ ಜುಮ್ಮಾ ಮಸೀದಿಯ ಪರಿಸರದಲ್ಲಿ ಇಸಾಬಾ ಸ್ವಯಂ ಸೇವಕರು ಸ್ವಚ್ಛತಾ ಕಾರ್ಯ ನಡೆಸಿದರು.

ಅಲ್ ಮುರ್ಶಿದ್ ಅಕಾಡೆಮಿ ಕೆದಿಲ ಇದರ ಮುಖ್ಯಸ್ಥರು ಹಾಗೂ ಸೂರಿಕುಮೇರು ಮಸೀದಿಯ ಅಧ್ಯಕ್ಷರೂ ಆದ ಬಹು| ಅಬ್ದುಲ್ ರಝಾಕ್ ಮದನಿ ಕಾಮಿಲ್ ಸಖಾಫಿ ದುಆ ನೆರವೇರಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಯೂಸುಫ್ ಹಾಜಿ, ಅಶ್ರಫ್ ಸಖಾಫಿ, ಹನೀಫ್ ಸಂಕ, ಅಝೀಂ ನೆಲ್ಲಿ, ಹಮೀದ್ ಮಾಣಿ, ಇಬ್ರಾಹಿಂ ಮುಸ್ಲಿಯಾರ್ ಮಾಣಿ, ಸೂರಿಕುಮೇರು ಇಲ್ಲಿಯವರಾದ ಅಬ್ದುಲ್ ಕರೀಂ, ಉಮ್ಮರ್ ಫಾರೂಕ್, ಇಮ್ರಾನ್, ಉಮ್ಮರ್ ಚಿಕನ್, ಹಂಝ, ಸಮೀರ್ ಲೈಮ್, ಹಾಫಿಳ್ ಮುರ್ಶಿದ್ ಸ್ವಚ್ಛತಾ ಕಾರ್ಯ ನಡೆಸಿದರು. ಸಲೀಂ ಮಾಣಿ ಕಾರ್ಯಕ್ರಮ ನಿರೂಪಿಸಿದರು.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page