September 1, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪರೀಕ್ಷೆಯಲ್ಲಿ ನಕಲು ಆರೋಪ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಬಾಗಲಕೋಟೆಯ ಮುಧೋಳ ನಗರದಲ್ಲಿ ಪರೀಕ್ಷೆಯಲ್ಲಿ ನಕಲು ಮಾಡಿದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮನನೊಂದ ವಿದ್ಯಾರ್ಥಿನಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿ 17 ವರ್ಷ ಪ್ರಾಯದ ತೇಜಸ್ವಿನಿ ದೊಡ್ಡಮನಿ ಎಂದು ತಿಳಿದು ಬಂದಿದೆ.

ತೇಜಸ್ವಿನಿ ದೊಡ್ಡಮನಿ ಮುಧೋಳ ನಗರದ ಶಾರದಾ ಖಾಸಗಿ ಪಿಯು ಕಾಲೇಜಿನಲ್ಲಿ ಪ್ರಥಮ ಪಿಯುಸಿ ಸೈನ್ಸ್ ಓದುತ್ತಿದ್ದಳು. ಫೆಬ್ರವರಿ 27 ರಂದು ರಸಾಯನಶಾಸ್ತ್ರ ವಿಷಯದ ವಾರ್ಷಿಕ ಪರೀಕ್ಷೆ ನಡೆಯಿತು. ಪರೀಕ್ಷೆಯಲ್ಲಿ ತೇಜಸ್ವಿನಿ ನಕಲು ಮಾಡುವುದನ್ನು ಕಂಡ ಕಾಲೇಜು ಸಿಬ್ಬಂದಿ ಪ್ರಶ್ನೆ ಮಾಡಿದರು ಎಂದು ತಿಳಿದು ಬಂದಿದೆ. ಈ ವಿಚಾರವನ್ನು ತೇಜಸ್ವಿನಿ ತನ್ನ ಪೋಷಕರಿಗೆ ತಿಳಿಸಿದ್ದಾಳೆ. ಬಳಿಕ ಪೋಷಕರು ಫೆಬ್ರವರಿ 28ರಂದು ಕಾಲೇಜಿಗೆ ಬಂದು, ನಕಲು ಮಾಡಿದ್ದಕ್ಕೆ ಸಾಕ್ಷಿ ಕೇಳಿದ್ದರು. ಆಗ ಕಾಲೇಜು ಸಿಬ್ಬಂದಿ ಸಿಸಿ ಕ್ಯಾಮರಾ ದೃಶ್ಯ ತೋರಿಸಲು ಮುಂದಾದರು. ಅಲ್ಲದೇ, ಕಾಲೇಜು ಸಿಬ್ಬಂದಿ ಪೋಷಕರ ಮುಂದೆಯೇ ತೇಜಸ್ವಿನಿಗೆ ಬುದ್ದಿವಾದ ಹೇಳಿದ್ದಾರೆ.

ಮನನೊಂದ ವಿದ್ಯಾರ್ಥಿನಿ ತೇಜಸ್ವಿನಿ ಕಾಲೇಜಿನಿಂದ ಹೊರಗೆ ಓಡಿ ಹೋಗಿದ್ದಾಳೆ. ಎಷ್ಟೋ ಹುಡುಕಿದರೂ ತೇಜಸ್ವಿನಿ ಸಿಗಲಿಲ್ಲ. ಬಳಿಕ, ಪೋಷಕರು ಮುಧೋಳ ಪೊಲೀಸ್ ಠಾಣೆಯಲ್ಲಿ ನಾಪತ್ತೆಯಾದ ದೂರು ದಾಖಲಿಸಿದರು. ಭಾನುವಾರದಂದು ಮಹಾರಾಣಿ ಕೆರೆಯಲ್ಲಿ ತೇಜಸ್ವಿನಿ ಶವವಾಗಿ ಪತ್ತೆಯಾಗಿದ್ದಾಳೆ. ಘಟನಾ ಸ್ಥಳಕ್ಕೆ ಮುಧೋಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page