November 10, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ಎಸ್.ಐ. ಆಗಿ ಮಂಜುನಾಥ್ ಅಧಿಕಾರ ಸ್ವೀಕಾರ

ಬಂಟ್ವಾಳ ಗ್ರಾಮಾಂತರ ‌ಪೋಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಆಗಿ ಮಂಜುನಾಥ್ ಅವರು ಅಧಿಕಾರ ಸ್ವೀಕರಿಸಿದರು. ಬಂಟ್ವಾಳ ಗ್ರಾಮಾಂತರ ಠಾಣಾ ಸಬ್ ಇನ್ಸ್ ಪೆಕ್ಟರ್ ಹರೀಶ್ ಅವರು ರಾಜ್ಯ ಅಂತರಿಕ ಭದ್ರತಾ ವಿಭಾಗಕ್ಕೆ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ಮಂಜುನಾಥ್ ಅವರನ್ನು ನೇಮಕಗೊಳಿಸಿ ಅದೇಶ ಹೊರಡಿಸಿದ್ದರು.

ಮಂಜುನಾಥ್ ಅವರು ವಿಟ್ಲ ಪೋಲೀಸ್ ಠಾಣೆಯಲ್ಲಿ ಪ್ರೊಫೆಷನರಿ ಅವಧಿ ಮುಗಿಸಿ ಬಳಿಕ ಅದೇ ಠಾಣೆಯಲ್ಲಿ ಮೂರು ತಿಂಗಳ ಕಾಲ ಅಪರಾಧ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಆ ಬಳಿಕ ಸುಬ್ರಹ್ಮಣ್ಯ ಪೋಲಿಸ್ ಠಾಣೆಯಲ್ಲಿ ಒಂದು ವರ್ಷಗಳ ಕಾಲ ಕಾನೂನು ಸುವ್ಯವಸ್ಥೆ ವಿಭಾಗದ ಎಸ್.ಐ. ಆಗಿ ಕರ್ತವ್ಯ ‌ನಿರ್ವಹಿಸಿ, ಮಂಗಳೂರು ಸೆನ್ ವಿಭಾಗಕ್ಕೆ ವರ್ಗಾವಣೆಗೊಂಡು ಕರ್ತವ್ಯದಲ್ಲಿದ್ದರು. ಇದೀಗ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ವರ್ಗಾವಣೆಗೊಳಿಸಿದ್ದು, ಅವರು ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಪರಂಗಿಪೇಟೆ ಅಪ್ರಾಪ್ತ ಬಾಲಕನ ನಾಪತ್ತೆ ಪ್ರಕರಣದ ಸಂಧಿಗ್ದ ಪರಿಸ್ಥಿತಿಯಲ್ಲಿರುವ ಸಮಯದಲ್ಲಿ ಮಂಜುನಾಥ್ ಅವರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ದಿಗಂತ್ ನ ಪತ್ತೆ ಕಾರ್ಯಕ್ಕೆ ಜಿಲ್ಲಾ ‌ಪೋಲೀಸ್ ವರಿಷ್ಠಾಧಿಕಾರಿ ಅವರು ನಾಲ್ಕು ವಿಶೇಷ ‌ತಂಡಗಳನ್ನು ರಚನೆ ಮಾಡಲಾಗಿದ್ದು, ನೂತನ ಎಸ್.ಐ. ಮಂಜುನಾಥ್ ‌ಅವರು ತಂಡದೊಂದಿಗೆ ಸೇರಿಕೊಂಡು ಕರ್ತವ್ಯದಲ್ಲಿ ತೊಡಗಿಕೊಂಡಿದ್ದಾರೆ.

ಇವರ ಜೊತೆ ಬಂಟ್ವಾಳದಲ್ಲಿ ಕರ್ತವ್ಯ ನಿರ್ವಹಿಸಿ ಜಿಲ್ಲೆಯ ಹಾಗೂ ಹೊರ ಜಿಲ್ಲೆಯಲ್ಲಿ ಕರ್ತವ್ಯ ಮಾಡುತ್ತಿರುವ ಎಸ್. ಐ. ಗಳಾದ ನಂದಕುಮಾರ್, ಪ್ರಸನ್ನ, ಅವಿನಾಶ್, ಉದಯರವಿ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆಯಿಂದ ವರ್ಗಾವಣೆಗೊಂಡ ಹರೀಶ್ ಅವರು ಕೂಡ ಇಲ್ಲೇ ಉಳಿದುಕೊಂಡು ನಾಪತ್ತೆ ಪ್ರಕರಣದ ತನಿಖೆಯಲ್ಲಿ ನೆರವು ನೀಡುತ್ತಿದ್ದಾರೆ.

You may also like

News

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿ ವಿಲ್ಫ್ರೆಡ್ ಡಿಸೋಜ ವೀಡಿಯೋ ಜರ್ನಲಿಸ್ಟ್ TV9 ಮಂಗಳೂರು ಆಯ್ಕೆ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ.), ದಕ್ಷಿಣ ಕನ್ನಡ ಜಿಲ್ಲಾ ಘಟಕದ 2025–28ರ ಅವಧಿಗೆ ಸಂಬಂಧಿಸಿದ ಪದಾಧಿಕಾರಿಗಳ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರ ಚುನಾವಣೆಯು ಮಂಗಳೂರಿನ ವಾರ್ತಾ
News

ಧರ್ಮಸ್ಥಳ ಲಕ್ಷದೀಪೋತ್ಸವ ವೈಭವ – ನವಂಬರ್ 18ರಂದು ಸರ್ವಧರ್ಮ ಸಮ್ಮೇಳನ ಹಾಗೂ ನವಂಬರ್ 19ರಂದು ಸಾಹಿತ್ಯ ಸಮ್ಮೇಳನ

ನಾಡಿನ ಪವಿತ್ರಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮಗಳು ನವಂಬರ್ 15 ರಿಂದ 19ರ ವರೆಗೆ ನಡೆಯಲಿವೆ. ನವಂಬರ್ 18ರಂದು ಮಂಗಳವಾರ ಸಂಜೆ 5 ಗಂಟೆಯಿಂದ ಸರ್ವಧರ್ಮ

You cannot copy content of this page