April 27, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ರಂಝಾನ್ ಪ್ರಯುಕ್ತ ಕುಟುಂಬಗಳಿಗೆ ಝಕಾತ್ ದಾನ ನಿಧಿ ಮತ್ತು ಶೈಕ್ಷಣಿಕ ನಿಧಿ ಹಸ್ತಾಂತರ

ಬೆಳ್ತಂಗಡಿ : ದಾನಿಗಳ ಸಹಕಾರದೊಂದಿಗೆ ಮಾರ್ಚ್ 4ರಂದು ಮಂಗಳವಾರ ಮದ್ದಡ್ಕದ ಸಮಾಜ‌ಸೇವಕ ಅಬ್ಬೋನು ಮದ್ದಡ್ಕ ಅವರ ನಿವಾಸದಲ್ಲಿ ಅರ್ಹ ಕುಟುಂಬಗಳಿಗೆ ರಂಝಾನ್ ಆಹಾರದ ಕಿಟ್ ವಿತರಣೆ, ಝಕಾತ್ ದಾನ ನಿಧಿ, ಹಾಗೂ‌ ಅರ್ಹ ಫಲಾನುಭವಿಗಳಿಗೆ ಚಿಕಿತ್ಸೆಗೆ ಧನಸಹಾಯ ಮತ್ತು ಶೈಕ್ಷಣಿಕ ನಿಧಿ ಹಸ್ತಾಂತರ ಕಾರ್ಯಕ್ರಮ ಜರುಗಿತು.

ಇಂಡಿಯನ್ ಆಸ್ಪತ್ರೆ ಮಂಗಳೂರು ಇದರ ಚೇರ್ಮೆನ್, ಖ್ಯಾತ ಹೃದಯರೋಗ ತಜ್ಞ ಡಾ. ಯೂಸುಫ್ ಕುಂಬ್ಲೆ ಅವರ ತಾಯಿಯ ಹೆಸರಿನಲ್ಲಿರುವ ಫಾತಿಮಾ ಹೆಲ್ತ್ ಫೌಂಡೇಶನ್ ವತಿಯಿಂದ ತಲಾ 2 ಸಾವಿರದಂತೆ 50 ಕುಟುಂಬಗಳಿಗೆ 1 ಲಕ್ಷ ರೂಪಾಯಿ ವೆಚ್ಚದಲ್ಲಿ ರಂಝಾನ್ ಆಹಾರ ಸಾಮಾಗ್ರಿಗಳ ಕಿಟ್ ಹಸ್ತಾಂತರಿಸಲಾಯಿತು. ಇದೇ ವೇಳೆ ಜಮೀಯತುಲ್ ಫಲಾಹ್ ಉಡುಪಿ ದಕ್ಷಿಣ ಕನ್ನಡ ಘಟಕದ ಪೂರ್ವ ಜಿಲ್ಲಾಧ್ಯಕ್ಷ, ಹಿರಿಯ ಸಾಮಾಜಿಕ ಮುತ್ಸದ್ದಿ ಹಾಜಿ ಅಬ್ದುಲ್‌ ಲೆತೀಫ್ ಸಾಹೇಬ್ ಅವರ ವತಿಯಿಂದ 30 ಕುಟುಂಬಗಳಿಗೆ ತಲಾ 1500 ರಂತೆ ಝಕಾತ್ ದಾನ ನಿಧಿ ವಿತರಿಸಲಾಯಿತು. ಉಳಿದ ಒಂದು ಲಕ್ಷ ರೂಪಾಯಿಗಳನ್ನು ಜಮೀಯತುಲ್ ಫಲಾಹ್ ಮೂಲಕ ನೀಡುವುದೆಂದು ಅವರು ಈ ವೇಳೆ ಘೋಷಿಸಿದರು.

ಹೊಟೇಲ್ ನಲ್ಲಿ ಕೂಲಿ ಕಾರ್ಮಿಕನಾಗಿದ್ದರೂ ತನ್ನ ಮೂವರು ಮಕ್ಕಳಿಗೆ ಉನ್ನತ ವಿದ್ಯಾಭ್ಯಾಸ ನೀಡುತ್ತಿರುವ ಕುಟುಂಬಕ್ಕೆ ಅಬ್ಬೋನು ಮದ್ದಡ್ಕ ಅವರ ಫ್ಯಾಮಿಲಿಯ ವತಿಯಿಂದ ಶೈಕ್ಷಣಿಕ ನಿಧಿ ಹಸ್ತಾಂತರ ಹಾಗೂ ಮೂರು ಮಂದಿ ತೀರಾ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಫಲಾನುಭವಿಗಳಿಗೆ ಚಿಕಿತ್ಸಾ ವೆಚ್ಚವನ್ನು ಈ‌ವೇಳೆ ನೀಡಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಹಾಜಿ ಅಬ್ದುಲ್ ಲೆತೀಫ್ ಸಾಹೇಬ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಿಟ್ಲ ಒಕ್ಕೆತ್ತೂರು ಮಸ್ಜಿದ್ ಧರ್ಮಗುರು ರಫೀಕ್ ಅಹ್ಸನಿ, ಮಲ್‌ಜ‌ಅ ಪ್ರಾರ್ಥನಾ ಸಮ್ಮೇಳನ ಸ್ವಾಗತ ಸಮಿತಿ ಚೇರ್ಮೆನ್ ಹಾಜಿ ಹಸೈನಾರ್ ಶಾಫಿ ಗುರುವಾಯನಕೆರೆ, ಮದ್ದಡ್ಕ ನೂರುಲ್ ಹುದಾ ಜುಮ್ಮಾ ಮಸ್ಜಿದ್ ಅಧ್ಯಕ್ಷ ಅಶ್ರಫ್ ಚಿಲಿಂಬಿ ಇವರು ಶುಭ ಕೋರಿದರು.

ಕರ್ನಾಟಕ ಮುಸ್ಲಿಂ ಜಮಾಅತ್ ಕೋಶಾಧಿಕಾರಿ ಎಂ.ಹೆಚ್. ಅಬೂಬಕ್ಕರ್, ತಾಜುಲ್ ಉಲಮಾ ರಿಲೀಫ್ ಟ್ರಸ್ಟ್ ಅಧ್ಯಕ್ಷ ಎಂ‌.ಹೆಚ್. ಹಸನಬ್ಬ, ಹಿರಿಯರಾದ ಪುತ್ತಾಕ ಮೊದಲಾದವರು ಉಪಸ್ಥಿತರಿದ್ದರು. ಕಾರ್ಯಕ್ರಮ ಸಂಯೋಜಿಸಿದ ಸಮಾಜ ಸೇವಕ‌ ಅಬ್ಬೋನು ಮದ್ದಡ್ಕ ಅವರ ಕಾರ್ಯವನ್ನು ಅತಿಥಿಗಳು ಅಭಿನಂದಿಸಿದರು. ಹಿರಿಯ ಪತ್ರಕರ್ತ ಅಶ್ರಫ್ ಆಲಿಕುಂಞಿ ಮುಂಡಾಜೆ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿ ವಂದಿಸಿದರು.

You may also like

News

‘ಪಿದಾಯಿ’ ತುಳು ಚಿತ್ರ ಮೇ 9ಕ್ಕೆ ಬೆಳ್ಳಿತೆರೆಗೆ

ನಮ್ಮ ಕನಸು ಬ್ಯಾನರಿನಲ್ಲಿ ಕೆ. ಸುರೇಶ್ ರವರು ನಿರ್ಮಾಣ ಮಾಡಿದ, ರಮೇಶ್ ಶೆಟ್ಟಿಗಾರ್ ಬರೆದು ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸಂತೋಷ್ ಮಾಡ ನಿರ್ದೇಶನದಲ್ಲಿ ಮೂಡಿ ಬಂದ
News

ಪರಮಪೂಜ್ಯ ಪೋಪ್ ಫ್ರಾನ್ಸಿಸ್‌ರವರಿಗೆ MCC ಬ್ಯಾಂಕ್ ವತಿಯಿಂದ ಗೌರವ ನಮನ

ಮಂಗಳೂರಿನ ಹಂಪನಕಟ್ಟೆಯಲ್ಲಿರುವ MCC ಬ್ಯಾಂಕ್ ಇದರ ಆಡಳಿತ ಕಛೇರಿಯಲ್ಲಿ ಕಥೊಲಿಕ್ ಕ್ರೈಸ್ತರ ಪರಮೋಚ್ಚ ಧರ್ಮಗುರು ಪರಮಪೂಜ್ಯ ಪೋಪ್ ಫ್ರಾನ್ಸಿಸ್ ರವರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮವನ್ನು ಎಪ್ರಿಲ್ 24ರಂದು

You cannot copy content of this page