March 25, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವಕ್ಫ್ ಕಾಯ್ದೆಗೆ ಅಸಂವಿಧಾನಿಕ ತಿದ್ದುಪಡಿ – ಕಕ್ಕಿಂಜೆಯಲ್ಲಿ ಮೂರು ಪಂಚಾಯತ್ ವ್ಯಾಪ್ತಿಯ ಮಸ್ಜಿದ್ ಗಳ ಜಂಟಿ ಪ್ರತಿಭಟನೆ

ಬೆಳ್ತಂಗಡಿ; ಕೇಂದ್ರ ಸರಕಾರ ಉದ್ಧೇಶಿರುವ ವಕ್ಫ್ ಕಾಯ್ದೆಗೆ ತಿದ್ದುಪಡಿ ಪ್ರಕ್ರಿಯೆಯನ್ನು ವಿರೋಧಿಸಿ ಮುಂಡಾಜೆ, ಚಾರ್ಮಾಡಿ, ನೆರಿಯ ಈ‌ಮೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ಮಸ್ಜಿದ್‌ ಮತ್ತು ಮೊಹಲ್ಲಾಗಳ ಒಗ್ಗೂಡುವಿಕೆಯೊಂದಿಗೆ ಪ್ರತಿಭಟನಾ ಸಭೆಯು ಕಕ್ಕಿಂಜೆ ಪೇಟೆಯಲ್ಲಿ ಜರುಗಿತು.

ಇಲ್ಲಿನ‌ ಹಾರಿಸ್ ಹೊಟೇಲ್ ಬಳಿ‌ ಜಮಾಯಿಸಿದ ಹೋರಟಗಾರರು‌ ಸಾರ್ವಜನಿಕ ಸಭೆ ನಡೆಸಿ ಕೇಂದ್ರ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಅಸಂವಿಧಾನಿಕ ವಕ್ಫ್ ತಿದ್ದುಪಡಿ‌ ಮಸೂದೆ ವಿರುದ್ಧ ವಾಟ್ಸ್ ಆಪ್ ಮೂಲಕ ರಚಿತವಾದ ಬಳಗದ ಸಂಯೋಜನೆಯಲ್ಲಿ ಈ ಹೋರಾಟ ಸಂಘಟಿಸಲಾಗಿತ್ತು.

ಇಸ್ಲಾಂನಲ್ಲಿ ವಕ್ಫ್ ಎಂದರೆ ಏನು? ವಕ್ಫ್ ಕಾಯ್ದೆಯ ತಿದ್ದುಪಡಿ ಹೇಗೇಗೆ ಆಯ್ತು? ಜಂಟಿ ಸದನ‌ಸಮಿತಿ ನಡೆದುಕೊಂಡ ರೀತಿಯ ಬಗ್ಗೆ ಹಿರಿಯ ಪತ್ರಕರ್ತ ಅಶ್ರಫ್ ಆಲಿಕುಂಞಿ ಮುಂಡಾಜೆ ವಿಷಯ ಮಂಡಿಸಿದರು. ಕಾಯ್ದೆಯ ತಿದ್ದುಪಡಿಯ ಲೋಪಗಳೇನೇನು? ಕಾಯ್ದೆ ಬದಲಾವಣೆಯಲ್ಲಿ ಒಳಗೊಂಡಿರುವ ಅಸಂವಿಧಾನಿಕ ಅಂಶಗಳು ಏನೇನು? ಹಾಗೂ ಬದಲಾಗಲಿರುವ ಕಾಯ್ದೆಯಿಂದ ಆಗುವ ತೊಂದರೆಗಳು ಏನು ಎಂಬ ಬಗ್ಗೆ ಯುವ ನ್ಯಾಯವಾದಿ ನವಾಝ್ ಶರೀಫ್ ಅರೆಕ್ಕಲ್ ಮಾತನಾಡಿದರು.

ಸಾಮಾಜಿಕ ಕಾರ್ಯಕರ್ತ ಅಶ್ರಫ್ ಚಾರ್ಮಾಡಿ ಸ್ವಾಗತಿಸಿ ಪ್ರಸ್ತಾವನೆಗೈದರು. ಆರು ಜಮಾಅತ್ ಗಳ ಪದಾಧಿಕಾರಿಗಳು, ಧರ್ಮಗುರುಗಳು, ಜಮಾಅತ್ ಬಾಂಧವರು, ವಿವಿಧ ಸಂಘಟನೆಗಳ ಪ್ರಮುಖರು ಭಾಗವಹಿಸಿದ್ದರು. ಬಳಿಕ ಕಕ್ಕಿಂಜೆ ಪೇಟೆಯ ಮೂಲಕ ಗ್ರಾಮ ಪಂಚಾಯತ್ ಕಚೇರಿ ವರೆಗೆ ಜಾಥಾ ನಡೆಸಲಾಯಿತು. ಅಲ್ಲಿ ಮಾನ್ಯ ರಾಷ್ಟ್ರಪತಿಯವರಿಗೆ ಗ್ರಾಮ ಪಂಚಾಯತ್ ಪಿಡಿಒ‌ ಮೂಲಕ ಮನವಿ ಸಲ್ಲಿಸಲಾಯಿತು. ಅಬ್ದುಲ್ ನಾಸಿರ್ ಕಲ್ಲಗುಡ್ಡೆ ವಂದಿಸಿದರು. ಕಬೀರ್ ಅರೆಕ್ಕಲ್ ಕಾರ್ಯಕ್ರಮವನ್ನು ನಿರೂಪಿಸಿದರು. ನಝೀರ್, ಶರೀಫ್ ಹೆಚ್ ಎ., ಹನೀಫ್ ಕೋಣೆ ಮೊದಲಾದವರು ನಾಯಕತ್ವ ವಹಿಸಿದ್ದರು.

You may also like

News

MLC ಐವನ್‌ ಡಿಸೋಜಾರವರ ನೇತೃತ್ವದಲ್ಲಿ ಮಂಗಳೂರಿನಲ್ಲಿ ಸೌಹಾರ್ದ ಇಫ್ತಾರ್‌ ಕೂಟ

ಮಂಗಳೂರು ಪಂಪ್ ವೆಲ್ ಬಳಿಯ ಫಾದರ್‌ ಮುಲ್ಲರ್‌ ಕನ್ವೆನ್ಷನ್ ಹಾಲ್‌ನಲ್ಲಿ ಕರ್ನಾಟಕ ವಿಧಾನ ಪರಿಷತ್‌ ಶಾಸಕ ಐವನ್‌ ಡಿಸೋಜಾರವರ ನೇತೃತ್ವದಲ್ಲಿ 10ನೇ ವರ್ಷದ ಸೌಹಾರ್ಧ ಇಪ್ತಾರ್‌ ಕೂಟವನ್ನು
News

ಮೊಗರ್ನಾಡ್ ಚರ್ಚ್ ನ ‘ಹೊಸಾನ್ನ ವಲಯ’ದಲ್ಲಿ ಸಂಬ್ರಮದ ಮಹಿಳಾ ದಿನಾಚರಣೆ

ದೇವಮಾತ ಮೊಗರ್ನಾಡ್ ಚರ್ಚ್ ಸ್ಥಾಪನೆಯ 250 ವರ್ಷದ ಜುಬಿಲಿ ಆಚರಣೆ ಪ್ರಯುಕ್ತ ಮಾರ್ಚ್ ತಿಂಗಳಲ್ಲಿ 16 ವರ್ಷ ಮೇಲ್ಪಟ್ಟ ಕುವರಿಯರಿಗೆ ಹಾಗೂ ಮಹಿಳೆಯರಿಗಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

You cannot copy content of this page