April 27, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕರೆಂಟ್ ಕಳ್ಳರಿಗೆ ಭಾರಿ ದಂಡ! ಬರೋಬ್ಬರಿ 6 ಕೋಟಿ ರೂಪಾಯಿಗಿಂತ ಹೆಚ್ಚು ದಂಡ ವಿಧಿಸಿದ ಅಧಿಕಾರಿಗಳು

ವಿದ್ಯುತ್ ಕಳ್ಳತನ ಮಾಡುವುದು ವಿದ್ಯುಚ್ಛಕ್ತಿ ಕಾಯ್ದೆಯ ಅಡಿಯಲ್ಲಿ ಕ್ರಿಮಿನಲ್ ಸ್ವರೂಪದ ಶಿಕ್ಷಾರ್ಹ

ಕರೆಂಟ್ ಕಳ್ಳರಿಗೆ ಅಧಿಕಾರಿಗಳು ಸರಿಯಾಗಿಯೇ ಬಿಸಿ ಮುಟ್ಟಿಸಿದ್ದು, ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದವರ ವಿರುದ್ಧ ಸೆಸ್ಕ್ ಜಾಗೃತ ದಳದ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಂದಿದ್ದಾರೆ. ಸೆಸ್ಕ್ ನಿಂದ 6 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ದಂಡ ವಿಧಿಸಲಾಗಿದೆ.

ಸೆಸ್ಕ್ ವಿಭಾಗದ ವ್ಯಾಪ್ತಿಗೆ ಒಳಪಡುವ ಮೈಸೂರು, ಚಾಮರಾಜನಗರ, ಮಂಡ್ಯ, ಕೊಡಗು ಹಾಗೂ ಹಾಸನ ಜಿಲ್ಲಾ ವ್ಯಾಪ್ತಿಯಲ್ಲಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಈ ಐದು ಜಿಲ್ಲೆಗಳಲ್ಲಿ ಅಕ್ರಮವಾಗಿ ವಿದ್ಯುತ್ ಕಳ್ಳತನ, ವಿದ್ಯುತ್ ದುರುಪಯೋಗ ಮಾಡಿದವರ ವಿರುದ್ಧ ಕ್ರಮ ಕೈಗೊಂಡು ಪ್ರಕರಣಗಳನ್ನು ದಾಖಲಿಸಲಾಗಿದೆ. ಗೃಹ, ವಾಣಿಜ್ಯ ವಿದ್ಯುತ್ ಸಂಪರ್ಕ ಪಡೆದವರ ಪೈಕಿ 1,312 ವಿದ್ಯುತ್ ಕಳ್ಳತನ ಪ್ರಕರಣಗಳು ಸಾಬೀತಾಗಿವೆ. ಈ ಪ್ರಕರಣಗಳಿಂದ ಒಟ್ಟು 6 ಕೋಟಿ ರೂಪಾಯಿಗಿಂತ ಹೆಚ್ಚು ದಂಡ ವಸೂಲಿ ಮಾಡಲಾಗುತ್ತಿದೆ.

ವಿದ್ಯುತ್ ಕಳ್ಳತನ ಮಾಡುವುದು ವಿದ್ಯುಚ್ಛಕ್ತಿ ಕಾಯ್ದೆಯ ಅಡಿಯಲ್ಲಿ ಕ್ರಿಮಿನಲ್ ಸ್ವರೂಪದ ಶಿಕ್ಷಾರ್ಹ ಅಪರಾಧವಾಗಿದೆ. ಹೀಗಾಗಿಯೇ ಸೆಸ್ಕ್ ಅಧಿಕಾರಿಗಳು ಕಟ್ಟನಿಟ್ಟಿನ ಕಾರ್ಯಾಚರಣೆ ನಡೆಸಿದ್ದಾರೆ.

You may also like

News

‘ಪಿದಾಯಿ’ ತುಳು ಚಿತ್ರ ಮೇ 9ಕ್ಕೆ ಬೆಳ್ಳಿತೆರೆಗೆ

ನಮ್ಮ ಕನಸು ಬ್ಯಾನರಿನಲ್ಲಿ ಕೆ. ಸುರೇಶ್ ರವರು ನಿರ್ಮಾಣ ಮಾಡಿದ, ರಮೇಶ್ ಶೆಟ್ಟಿಗಾರ್ ಬರೆದು ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸಂತೋಷ್ ಮಾಡ ನಿರ್ದೇಶನದಲ್ಲಿ ಮೂಡಿ ಬಂದ
News

ಪರಮಪೂಜ್ಯ ಪೋಪ್ ಫ್ರಾನ್ಸಿಸ್‌ರವರಿಗೆ MCC ಬ್ಯಾಂಕ್ ವತಿಯಿಂದ ಗೌರವ ನಮನ

ಮಂಗಳೂರಿನ ಹಂಪನಕಟ್ಟೆಯಲ್ಲಿರುವ MCC ಬ್ಯಾಂಕ್ ಇದರ ಆಡಳಿತ ಕಛೇರಿಯಲ್ಲಿ ಕಥೊಲಿಕ್ ಕ್ರೈಸ್ತರ ಪರಮೋಚ್ಚ ಧರ್ಮಗುರು ಪರಮಪೂಜ್ಯ ಪೋಪ್ ಫ್ರಾನ್ಸಿಸ್ ರವರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮವನ್ನು ಎಪ್ರಿಲ್ 24ರಂದು

You cannot copy content of this page