November 8, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕರೆಂಟ್ ಕಳ್ಳರಿಗೆ ಭಾರಿ ದಂಡ! ಬರೋಬ್ಬರಿ 6 ಕೋಟಿ ರೂಪಾಯಿಗಿಂತ ಹೆಚ್ಚು ದಂಡ ವಿಧಿಸಿದ ಅಧಿಕಾರಿಗಳು

ವಿದ್ಯುತ್ ಕಳ್ಳತನ ಮಾಡುವುದು ವಿದ್ಯುಚ್ಛಕ್ತಿ ಕಾಯ್ದೆಯ ಅಡಿಯಲ್ಲಿ ಕ್ರಿಮಿನಲ್ ಸ್ವರೂಪದ ಶಿಕ್ಷಾರ್ಹ

ಕರೆಂಟ್ ಕಳ್ಳರಿಗೆ ಅಧಿಕಾರಿಗಳು ಸರಿಯಾಗಿಯೇ ಬಿಸಿ ಮುಟ್ಟಿಸಿದ್ದು, ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದವರ ವಿರುದ್ಧ ಸೆಸ್ಕ್ ಜಾಗೃತ ದಳದ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಂದಿದ್ದಾರೆ. ಸೆಸ್ಕ್ ನಿಂದ 6 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ದಂಡ ವಿಧಿಸಲಾಗಿದೆ.

ಸೆಸ್ಕ್ ವಿಭಾಗದ ವ್ಯಾಪ್ತಿಗೆ ಒಳಪಡುವ ಮೈಸೂರು, ಚಾಮರಾಜನಗರ, ಮಂಡ್ಯ, ಕೊಡಗು ಹಾಗೂ ಹಾಸನ ಜಿಲ್ಲಾ ವ್ಯಾಪ್ತಿಯಲ್ಲಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಈ ಐದು ಜಿಲ್ಲೆಗಳಲ್ಲಿ ಅಕ್ರಮವಾಗಿ ವಿದ್ಯುತ್ ಕಳ್ಳತನ, ವಿದ್ಯುತ್ ದುರುಪಯೋಗ ಮಾಡಿದವರ ವಿರುದ್ಧ ಕ್ರಮ ಕೈಗೊಂಡು ಪ್ರಕರಣಗಳನ್ನು ದಾಖಲಿಸಲಾಗಿದೆ. ಗೃಹ, ವಾಣಿಜ್ಯ ವಿದ್ಯುತ್ ಸಂಪರ್ಕ ಪಡೆದವರ ಪೈಕಿ 1,312 ವಿದ್ಯುತ್ ಕಳ್ಳತನ ಪ್ರಕರಣಗಳು ಸಾಬೀತಾಗಿವೆ. ಈ ಪ್ರಕರಣಗಳಿಂದ ಒಟ್ಟು 6 ಕೋಟಿ ರೂಪಾಯಿಗಿಂತ ಹೆಚ್ಚು ದಂಡ ವಸೂಲಿ ಮಾಡಲಾಗುತ್ತಿದೆ.

ವಿದ್ಯುತ್ ಕಳ್ಳತನ ಮಾಡುವುದು ವಿದ್ಯುಚ್ಛಕ್ತಿ ಕಾಯ್ದೆಯ ಅಡಿಯಲ್ಲಿ ಕ್ರಿಮಿನಲ್ ಸ್ವರೂಪದ ಶಿಕ್ಷಾರ್ಹ ಅಪರಾಧವಾಗಿದೆ. ಹೀಗಾಗಿಯೇ ಸೆಸ್ಕ್ ಅಧಿಕಾರಿಗಳು ಕಟ್ಟನಿಟ್ಟಿನ ಕಾರ್ಯಾಚರಣೆ ನಡೆಸಿದ್ದಾರೆ.

You may also like

News

ಸೈಂಟ್ ತೆರೆಸಾ ಆಫ್ ಲಿಶುಕ್ಸ್ ರವರ ಸಂತ ಪದವಿಯ ಶತಮಾನೋತ್ಸವ

ನಾಳೆ ನವೆಂಬರ್ 9ರಂದು ಬೆಂದೂರ್ ಚರ್ಚ್ ಇಲ್ಲಿ ದಿವ್ಯ ಬಲಿಪೂಜೆ   ಮಂಗಳೂರು ಧರ್ಮಕ್ಷೇತ್ರದ ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ದಾನ್ಹಾರವರ ನೇತೃತ್ವ ಸೈಂಟ್ ತೆರೆಸಾ ಆಫ್
News

ಪ್ರಾಥಮಿಕ ಶಾಲಾ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ನೇರಳಕಟ್ಟೆಯ ತರುಣ್ ಕೃಷ್ಣ ಜಿ.ಎಸ್. ರಾಜ್ಯ ಮಟ್ಟಕ್ಕೆ ಆಯ್ಕೆ

ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಬೆಂಗಳೂರಿನಲ್ಲಿ ಜರಗುವ ರಾಜ್ಯ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಕಬಡ್ಡಿ ಪಂದ್ಯಾಟಕ್ಕೆ ಬಂಟ್ವಾಳ ತಾಲೂಕಿನ ನೇರಳಕಟ್ಟೆಯ ತರುಣ್ ಕೃಷ್ಣ ಜಿ.ಎಸ್.  ಆಯ್ಕೆಯಾಗಿರುತ್ತಾನೆ.

You cannot copy content of this page