May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಾಣಿ – ಪೆರಾಜೆ ಗ್ರಾಮ ಪಂಚಾಯತ್ ಗೆ ತಹಶೀಲ್ದಾರ್ ರವರಿಂದ ಗ್ರಾಮ ಲೆಕ್ಕಿಗರ ನೇಮಕ –  ಗ್ರಾಮಸ್ಥರ ಮೊಗದಲ್ಲಿ ಮಂದಹಾಸ

ಸಾಮಾಜಿಕ ಕಾರ್ಯಕರ್ತನ ಮನವಿಗೆ ತಕ್ಷಣ ಸ್ಪಂಧಿಸಿದ ಜಿಲ್ಲಾಧಿಕಾರಿಗಳು

ವಾರದಲ್ಲಿ ಮೂರು ದಿವಸ ಕರ್ತವ್ಯಕ್ಕೆ ಹಾಜರಾಗುವಂತೆ ಆದೇಶ

ಮಾಣಿ – ಪೆರಾಜೆ ಗ್ರಾಮ ಪಂಚಾಯತ್ ಇಲ್ಲಿ ಕಳೆದೊಂದು ತಿಂಗಳಿನಿಂದ ಗ್ರಾಮ ಲೆಕ್ಕಿಗರಿಲ್ಲದೆ ಗ್ರಾಮಸ್ಥರು ಕಂಗಾಲಾದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ಟೀವನ್ ಪ್ರಕಾಶ್ ಮಾರ್ಟಿಸ್ ಇವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರಿಗೆ ಲಿಖಿತವಾಗಿ ದೂರು ಸಲ್ಲಿಸಿದ್ದರು. ಗ್ರಾಮ ಲೆಕ್ಕಿಗರಿಲ್ಲದೆ ದಿಕ್ಕುದೆಸೆ ಇಲ್ಲದ ಗ್ರಾಮ ಪಂಚಾಯತ್ ನ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಧಿಕಾರಿಗಳು, ವಾರದ ಮೂರು ದಿವಸ ಮಂಗಳವಾರ, ಗುರುವಾರ ಹಾಗೂ ಶನಿವಾರ ಕರಿಬಸಪ್ಪ ಎಂಬವರನ್ನು ಗ್ರಾಮಲೆಕ್ಕಿಗರಾಗಿ ಕೂಡಲೇ ಕರ್ತವ್ಯಕ್ಕೆ ಹಾಜರಾಗುವಂತೆ ಬಂಟ್ವಾಳ ತಹಶೀಲ್ದಾರ್ ಇವರ ಮುಖಾಂತರ ನಿಯೋಜನೆಗೊಳಿಸಿ ಆದೇಶ ಹೊರಡಿಸಿದ್ದಾರೆ.

ಮಾಣಿ – ಪೆರಾಜೆ ಗ್ರಾಮ ಪಂಚಾಯತ್ ಗ್ರಾಮಲೆಕ್ಕಿಗರಾಗಿ ಕರಿಬಸಪ್ಪ ಇವರು ಇಂದು ಮಾರ್ಚ್ 6ರಂದು ಬೆಳಿಗ್ಗೆ 10:00 ಗಂಟೆಗೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.  ಆದ್ಯತೆಯ ಮೇರೆಗೆ ತಮಗೆ ಗ್ರಾಮಲೆಕ್ಕಿಗರು ಸಿಗಬಹುದೆಂದು ಎನಿಸಿದ ಗ್ರಾಮಸ್ಥರಿಗೆ ಇಂದು ಮಾಣಿ – ಪೆರಾಜೆ ಗ್ರಾಮ ಪಂಚಾಯತ್ ನ ಒಂದು ತಿಂಗಳಿನಿಂದ ಮುಚ್ಚಿದ ಬಾಗಿಲು ತೆರೆದದ್ದು ಕಂಡು ಗ್ರಾಮಸ್ಥರ ಮೊಗದಲ್ಲಿ ಮಂದಹಾಸ ಮೂಡಿದೆ.

ತುರ್ತಾಗಿ ತಮ್ಮ ಕೆಲಸ ಆಗಲೇಬೇಕಾದವರು, ಈ ಕೂಡಲೇ ಮಾಣಿ – ಪೆರಾಜೆ ಗ್ರಾಮ ಪಂಚಾಯತ್ ಕಚೇರಿಗೆ ಹೋಗಿ ಸಂಬಂಧಪಟ್ಟ ಕೆಲಸವನ್ನು ಶೀಘ್ರವಾಗಿ ಮಾಡಿಸಿಕೊಂಡು ಬರಲು ಈಗ ಸಾಧ್ಯವಾಗಿದೆ.

ಸಾಮಾಜಿಕ ಕಾರ್ಯಕರ್ತ ಸ್ಟೀವನ್ ಪ್ರಕಾಶ್ ಮಾರ್ಟಿಸ್ ಇವರಿಗೆ ಹಾಗೂ ಲಿಖಿತ ಮನವಿಗೆ ಕೂಡಲೇ ಸ್ಪಂದಿಸಿದ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ., ಇವರಿಗೆ ತುಂಬು ಹೃದಯದ ಧನ್ಯವಾದಗಳನ್ನು ಮಾಣಿ – ಪೆರಾಜೆ ಗ್ರಾಮಸ್ಥರು ಆರ್ಪಿಸುತ್ತಿದ್ದಾರೆ.

 

ದಕ್ಷ ಅಧಿಕಾರಿ ಇದ್ದಲ್ಲಿ ಯಾವುದೇ ಕ್ಲಿಷ್ಟಕರ ಸಮಸ್ಯೆಗಳಿಗೆ ಪರಿಹಾರ ಕೂಡಲೇ ಸಿಗುತ್ತದೆ ಎಂಬುದಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರು ಮಾದರಿಯಾಗಿದ್ದಾರೆ.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page