May 7, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸೇರಿದಂತೆ 17 ಮಂದಿಗೆ ಜೈಲು ಶಿಕ್ಷೆ ಮತ್ತು ದಂಡ

ಸರ್ಕಾರಿ ಖರಾಬ್ ಜಮೀನಿಗೂ ಅಕ್ರಮ ಖಾತೆ ಮಾಡಿಕೊಟ್ಟ ಪ್ರಕರಣ

ಸರಕಾರಿ ಜಮೀನನ್ನು ಅಕ್ರಮವಾಗಿ ಖಾತೆ ಮಾಡಿಕೊಟ್ಟ ಸರ್ಕಾರಿ ಅಧಿಕಾರಿಗಳು ಜನಪ್ರತಿನಿಧಿಗಳಿಗೆ ನ್ಯಾಯಾಲಯವು ತಕ್ಕ ಪಾಠ ಕಲಿಸಿದೆ. ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸೇರಿದಂತೆ 17 ಮಂದಿಗೆ ನ್ಯಾಯಾಲಯ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ. ಈ ಪೈಕಿ ಮೂವರು ಮೃತಪಟ್ಟಿದ್ದಾರೆ. ಈ ಘಟನೆ ನಡೆದಿರುವುದು ಕೆಜಿಎಫ್ ಘಟ್ಟ ಕಾಮಧೇನು ಹಳ್ಳಿಯಲ್ಲಿ.

ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ವಿಚಾರಣೆ ಕೈಗೆತ್ತಿಕೊಂಡ ಕೆಜಿಎಫ್‌ ಎರಡನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯವು ಕೆಜಿಎಫ್ ಘಟ್ಟ ಕಾಮಧೇನು ಹಳ್ಳಿಯ ಹಿಂದಿನ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸೇರಿದಂತೆ 17 ಮಂದಿಗೆ ನ್ಯಾಯಾಲಯ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ.

ಕೆಜಿಎಫ್ ನ ಎರಡನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಎಂ. ಮಂಜು ಇವರಿದ್ದ ನ್ಯಾಯಪೀಠ ಈ ಪ್ರಕರಣದಲ್ಲಿ ತೀರ್ಪು ನೀಡಿದೆ.

ತೀರ್ಪಿನ ಪ್ರಕಾರ ಅಂದಿನ ಅಧ್ಯಕ್ಷ ಮಜು ಭಾರ್ಗವಿ, ಉಪಾಧ್ಯಕ್ಷ ಶಶಿಧರ್, ಪಿಡಿಓ ರತ್ನಮ್ಮ, ಬಿಲ್ ಕಲೆಕ್ಟರ್ ಮತ್ತು ಕಂಪ್ಯೂಟರ್ ಆಪರೇಟರ್‌ಗಳಾದ ನಾರಾಯಣಸ್ವಾಮಿ ಮತ್ತು ರಾಜೇಂದ್ರ ಅವರು ಶಿಕ್ಷೆಗೊಳಗಾದ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು.

ಅದೇ ರೀತಿ, ಫಲಾನುಭವಿಗಳಾದ ಅಕ್ರಮ ಖಾತೆ ಮಾಡಿಕೊಂಡ ಮುರುಗೇಶ್, ಸುಬ್ರಮಣಿ, ಕದಂಬವತಿ, ಶ್ರೀನಿವಾಸ್, ಪ್ರಿಯ, ಶ್ರೀಧರ್, ಅಣ್ಣಾದೊರೈ, ಆರ್. ಪಾಂಡುರಂಗನ್ ಮತ್ತು ಬಿ. ರವಿಚಂದ್ರನ್ ಪ್ರಕರಣದಲ್ಲಿ ಅಪರಾಧಿಗಳಾಗಿದ್ದಾರೆ.

ಉಳಿದ ತಪ್ಪಿತಸ್ಥರಾದ ಗಂಗಾಧರಂ, ಜಗದಂಬಾಲ್ ಮತ್ತು ಎಡ್ವಿನ್ ಮೃತಪಟ್ಟಿದ್ದಾರೆ. ಪ್ರಕರಣದ ಆರೋಪಿಗಳಾದ ಮಂಜು ಭಾರ್ಗವಿ, ಶಶಿಧರ್, ಪಿಡಿಓ ರತ್ನಮ್ಮ, ಸಿಬ್ಬಂದಿ ನಾರಾಯಣಸ್ವಾಮಿ ಮತ್ತು ರಾಜೇಂದ್ರ ಅವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲಾಗಿದೆ. ಇನ್ನು ಅಕ್ರಮ ಜಮೀನಿನ ಫಲಾನುಭವಿಗಳಾದ 9 ಮಂದಿಗೂ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲಾಗಿದೆ. 12 ಮಂದಿಗೆ ಅಕ್ರಮವಾಗಿ ಖಾತೆ ಮಾಡಿಕೊಡಲಾಗಿತ್ತು.

You may also like

News

12 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮುಂಬೈ ವಿಮಾನ ನಿಲ್ದಾಣದಲ್ಲಿ ದಸ್ತಗಿರಿ

ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 12 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಘಟನೆಯ ವಿವರ:
News

ಸಾಹಿತ್ಯ ಸಂಭ್ರಮ – ಮೇ 10ರಂದು ವಲ್ಲಿ ವಗ್ಗ ಅವರ ‘ವಿಂಚ್ಣಾರ್ ಕಾಣಿಯೊ’ ಕೃತಿ ಲೋಕಾರ್ಪಣೆ

ಕೊಂಕಣಿ ಸಾಹಿತ್ಯ ಲೋಕದ ಹಿರಿಯ ಸಾಹಿತಿ ವಲ್ಲಿ ವಗ್ಗ (ವಲೇರಿಯನ್ ಡಿಸೋಜ) ಅವರ ಬಹುನಿರೀಕ್ಷಿತ ನೂತನ ಕೃತಿ ‘ವಿಂಚ್ಣಾರ್ ಕಾಣಿಯೊ’ ಬಿಡುಗಡೆಗೆ ಸಜ್ಜಾಗಿದೆ. ಈ ಪುಸ್ತಕ ಲೋಕಾರ್ಪಣೆ

You cannot copy content of this page