August 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸೇರಿದಂತೆ 17 ಮಂದಿಗೆ ಜೈಲು ಶಿಕ್ಷೆ ಮತ್ತು ದಂಡ

ಸರ್ಕಾರಿ ಖರಾಬ್ ಜಮೀನಿಗೂ ಅಕ್ರಮ ಖಾತೆ ಮಾಡಿಕೊಟ್ಟ ಪ್ರಕರಣ

ಸರಕಾರಿ ಜಮೀನನ್ನು ಅಕ್ರಮವಾಗಿ ಖಾತೆ ಮಾಡಿಕೊಟ್ಟ ಸರ್ಕಾರಿ ಅಧಿಕಾರಿಗಳು ಜನಪ್ರತಿನಿಧಿಗಳಿಗೆ ನ್ಯಾಯಾಲಯವು ತಕ್ಕ ಪಾಠ ಕಲಿಸಿದೆ. ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸೇರಿದಂತೆ 17 ಮಂದಿಗೆ ನ್ಯಾಯಾಲಯ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ. ಈ ಪೈಕಿ ಮೂವರು ಮೃತಪಟ್ಟಿದ್ದಾರೆ. ಈ ಘಟನೆ ನಡೆದಿರುವುದು ಕೆಜಿಎಫ್ ಘಟ್ಟ ಕಾಮಧೇನು ಹಳ್ಳಿಯಲ್ಲಿ.

ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ವಿಚಾರಣೆ ಕೈಗೆತ್ತಿಕೊಂಡ ಕೆಜಿಎಫ್‌ ಎರಡನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯವು ಕೆಜಿಎಫ್ ಘಟ್ಟ ಕಾಮಧೇನು ಹಳ್ಳಿಯ ಹಿಂದಿನ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸೇರಿದಂತೆ 17 ಮಂದಿಗೆ ನ್ಯಾಯಾಲಯ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ.

ಕೆಜಿಎಫ್ ನ ಎರಡನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಎಂ. ಮಂಜು ಇವರಿದ್ದ ನ್ಯಾಯಪೀಠ ಈ ಪ್ರಕರಣದಲ್ಲಿ ತೀರ್ಪು ನೀಡಿದೆ.

ತೀರ್ಪಿನ ಪ್ರಕಾರ ಅಂದಿನ ಅಧ್ಯಕ್ಷ ಮಜು ಭಾರ್ಗವಿ, ಉಪಾಧ್ಯಕ್ಷ ಶಶಿಧರ್, ಪಿಡಿಓ ರತ್ನಮ್ಮ, ಬಿಲ್ ಕಲೆಕ್ಟರ್ ಮತ್ತು ಕಂಪ್ಯೂಟರ್ ಆಪರೇಟರ್‌ಗಳಾದ ನಾರಾಯಣಸ್ವಾಮಿ ಮತ್ತು ರಾಜೇಂದ್ರ ಅವರು ಶಿಕ್ಷೆಗೊಳಗಾದ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು.

ಅದೇ ರೀತಿ, ಫಲಾನುಭವಿಗಳಾದ ಅಕ್ರಮ ಖಾತೆ ಮಾಡಿಕೊಂಡ ಮುರುಗೇಶ್, ಸುಬ್ರಮಣಿ, ಕದಂಬವತಿ, ಶ್ರೀನಿವಾಸ್, ಪ್ರಿಯ, ಶ್ರೀಧರ್, ಅಣ್ಣಾದೊರೈ, ಆರ್. ಪಾಂಡುರಂಗನ್ ಮತ್ತು ಬಿ. ರವಿಚಂದ್ರನ್ ಪ್ರಕರಣದಲ್ಲಿ ಅಪರಾಧಿಗಳಾಗಿದ್ದಾರೆ.

ಉಳಿದ ತಪ್ಪಿತಸ್ಥರಾದ ಗಂಗಾಧರಂ, ಜಗದಂಬಾಲ್ ಮತ್ತು ಎಡ್ವಿನ್ ಮೃತಪಟ್ಟಿದ್ದಾರೆ. ಪ್ರಕರಣದ ಆರೋಪಿಗಳಾದ ಮಂಜು ಭಾರ್ಗವಿ, ಶಶಿಧರ್, ಪಿಡಿಓ ರತ್ನಮ್ಮ, ಸಿಬ್ಬಂದಿ ನಾರಾಯಣಸ್ವಾಮಿ ಮತ್ತು ರಾಜೇಂದ್ರ ಅವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲಾಗಿದೆ. ಇನ್ನು ಅಕ್ರಮ ಜಮೀನಿನ ಫಲಾನುಭವಿಗಳಾದ 9 ಮಂದಿಗೂ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲಾಗಿದೆ. 12 ಮಂದಿಗೆ ಅಕ್ರಮವಾಗಿ ಖಾತೆ ಮಾಡಿಕೊಡಲಾಗಿತ್ತು.

You may also like

News

ಸಮಾಜಮುಖಿ ಸೇವೆ – ದಿವಂಗತ ಸಹೋದರನ ಸ್ಮರಣಾರ್ಥ ಸಾರ್ವಜನಿಕ ಸೇವೆಗೆ ಆಂಬುಲೆನ್ಸ್ ಕೊಡುಗೆ ನೀಡಿದ ಬಶೀರ್ ಬಂಟ್ವಾಳ

ಮಾನವೀಯ ಸೇವೆಗೆ ಯಾವುದೇ ಜಾತಿ, ಮತ ಅಥವಾ ಧರ್ಮದ ಭೇದವಿಲ್ಲ ಎಂಬುದನ್ನು ಸಾರುವಂತೆ, ದುಬೈ ಅಸ್ತರ್ ಆಸ್ಪತ್ರೆಯ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಬಶೀರ್ ಬಂಟ್ವಾಳ ಅವರು ತಮ್ಮ
News

CODP Extends Education Aid to Students, Spreads Awareness on Government Welfare Schemes

The Canara Organisation for Development and Peace (CODP) organised an Education Aid Cheque Distribution Programme along with an awareness session

You cannot copy content of this page