September 1, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಜನಸಾಮಾನ್ಯರ  ಸಮತೋಲನದ ಎಲ್ಲಾ ವರ್ಗಗಳ ಏಳಿಗೆಯ ಪೂರಕ ಬಜೆಟ್‌ – MLC ಐವನ್ ಡಿಸೋಜ

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರ 16ನೇ ಬಜೆಟ್‌ ಜನಸಾಮಾನ್ಯರ  ಸಮತೋಲನದ ಎಲ್ಲಾ ವರ್ಗಗಳ ಏಳಿಗೆಯ ಪೂರಕ ಬಜೆಟ್‌ ನಾಲ್ಕು ಕೋಟಿ ಓಂಬತ್ತು ಲಕ್ಷ ಕೋಟಿಗಳ ಬಜೆಟ್‌ ಜ್ಯದ ಪ್ರಗತಿಯ ದಿಕ್ಸೂಚಿಯನ್ನು ತೋರಿಸುತ್ತದೆ. ರಾಜ್ಯದಲ್ಲಿ ಸಮಾಜದ ಎಲ್ಲಾ ವರ್ಗಗಳ ಜನರಿಗೆ ಪಂಚ ಗ್ಯಾರಂಟಿಗಳಿಗೆ 51 ಕೋಟಿ ಮೀಸಲಿಡುವ ಮೂಲಕ ಗ್ಯಾರಂಟಿಗಳನ್ನು ಸಂಪೂರ್ಣವಾಗಿ ನುಷ್ಠಾನಗೊಳಿಸುವ ಚುನಾವಣೆಯಲ್ಲಿ ಕೊಟ್ಟಂತಹ ಪ್ರನಾಳಿಕೆಯನ್ನು ಮುಂದುವರಿಸುವ ಜೊತೆಗೆ ರಾಜ್ಯದ ಏಲ್ಲಾ ವರ್ಗಗಳಿಗೆ ಪ್ರತ್ಯೇಕವಾಗಿ ವಿದ್ಯಾರ್ಥಿಗಳಗೆ ಶಿಕ್ಷಣಕ್ಕೆ, ಹಾಸ್ಟೆಲ್‌ಗಳಿಗೆ ರೈತರಿಗೆ, ಕಾರ್ಮಿಕರಿಗೆ ಅಲ್ಪಸಂಖ್ಯಾತರಿಗೆ ಏಲ್ಲಾ ವರ್ಗಗಳ ಜನರ ಅಭಿವೃದ್ದಿ ಮತ್ತು ಸಮಾಜವನ್ನು ಮುಖ್ಯವಾಹಿನಿಗೆ ತರುವಂತಹ ಕೆಲಸವನ್ನು ಸಿದ್ದರಾಮಯ್ಯನವರು ಮಾಡಿರುತ್ತಾರೆ.

ಸಿದ್ದರಾಮಯ್ಯನವರ ಬಜೆಟ್‌ ಸಮಾಜಕ್ಕೆ ತನ್ನ 16ನೇ ಬಜೆಟ್‌ ಮಂಡನೆಯ ಸಂಪೂರ್ಣ ಅನುಭವನ್ನು ರಾಜ್ಯಕ್ಕೆ ನೀಡಿದ್ದಾರೆ. ಈ ಬಜೆಟ್‌ ಮೂಲಕ ರಾಜ್ಯದ ಅಭಿವೃದ್ದಿ ಪಥ ಮುಂದೆ ತಂದುಕೊಳ್ಳುತ್ತದೆ. ಮತ್ತು ಸಮಾಜದ ಶಾಂತಿ ಮತ್ತು ಏಕತೆಗೆ ಒಂದು ಕೊಂಡಿಯಾಗಿ ಮೂಡಿಬರುತ್ತದೆ. ರಾಜ್ಯದ ಎಲ್ಲಾ ವರ್ಗದ ಜನರಿಗೂ ರಾಜ್ಯದ ಸಂಪತ್ತು ಮುಟ್ಟಬೇಕು ಎಂಬಂತಹ ತತ್ವದಡಿಯಲ್ಲಿ ಈ ಬಜೆಟ್ ನ್ನು ಮಂಡಿಸಲಾಗಿದೆ. ಬಹಳ ಹರ್ಷದಿಂದ ಈ ಬಜೆಟ್‌ನ್ನು ವಿಧಾನ ಪರಿಷತ್‌ ಶಾಸಕನಾದ ನಾನು ಐವನ್‌ ಡಿʼಸೋಜಾ  ಸ್ವಾಗತಿಸುತ್ತೇನೆ ಎಂದು ಹೇಳಿದರು.

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page