July 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಫರಂಗಿಪೇಟೆಯ ನಾಪತ್ತೆಯಾಗಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿ ದಿಗಂತ್ ಕೊನೆಗೂ ಪತ್ತೆ

ಸುರಕ್ಷಿತವಾಗಿ ಕರೆತರುತ್ತಿರುವ ಪೊಲೀಸರು

ಮಂಗಳೂರು: ನಗರದ ಫರಂಗಿಪೇಟೆಯ ಕಿದೆಬೆಟ್ಟು ಪದ್ಮನಾಭ ಮಡಿವಾಳರ ಪುತ್ರ ದಿಗಂತ್ ಕೊನೆಗೂ ಪತ್ತೆಯಾಗಿದ್ದಾನೆ. ಫೆಬ್ರವರಿ 25ರಂದು ನಾಪತ್ತೆಯಾಗಿದ್ದ ದಿಗಂತ್ ಇದೀಗ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು ಮಾಹಿತಿ ತಿಳಿದು ಬಂದಿದೆ.

ಪಶ್ಚಿಮ ‌ವಲಯ ಐ.ಜಿ. ಅಮೀತ್ ಸಿಂಗ್ ಅವರ ಮಾರ್ಗದರ್ಶನದಲ್ಲಿ ದಕ್ಷಿಣ ‌ಕನ್ನಡ ಜಿಲ್ಲಾ ಎಸ್ಪಿ ಯತೀಶ್‌ ನೇತೃತ್ವದಲ್ಲಿ ‌ಮತ್ತಷ್ಟು ತನಿಖೆ ತೀವ್ರಗೊಳಿಸಲಾಗಿತ್ತು. ಜಿಲ್ಲೆಯ ವಿವಿಧ ಠಾಣೆಗಳ ಸಬ್ ಇನ್ಸ್ ಪೆಕ್ಟರ್ ‌ಗಳು ಮತ್ತು ಜಿಲ್ಲೆಯ ವಿವಿಧ ಠಾಣೆಗಳ ಕ್ರೈಮ್ ವಿಭಾಗದಲ್ಲಿ ಕರ್ತವ್ಯ ಮಾಡುತ್ತಿರುವ ಸಿಬ್ಬಂದಿಗಳು ತನಿಖೆ ಕಾರ್ಯ ನಡೆಸುತ್ತಿದ್ದರು.

ಇಂದು ಬೆಳಿಗ್ಗೆಯಿಂದ ದಿಗಂತ್ ಪತ್ತೆಗಾಗಿ ಕೂಬಿಂಗ್ ಕಾರ್ಯ ಕೊಡ ನಡೆದಿತ್ತು ಮತ್ತು ಸದನದಲ್ಲಿ ವಿಧಾನಸಭಾ ಅಧ್ಯಕ್ಷ ಸನ್ಮಾನ್ಯ ಯು.ಟಿ. ಖಾದರ್ ರವರು ಸ್ವತಃ ಪ್ರಸ್ತಾಪಿಸಿದ್ದರು. ಪತ್ತೆಗಾಗಿ ಏಳು ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದೆ ಎಂದು ತಿಳಿಸಿದ್ದರು.

You may also like

News

ಶಿಲುಬೆ ಧ್ವಂಸಗೊಳಿಸಿದರೆ ನಂಬಿಕೆ ನಾಶವಾಗದು – ಪಶ್ಚಿಮ ಬಂಗಾಳದ ಚರ್ಚ್ ಮೇಲಿನ ದಾಳಿಗೆ AICU ರಾಜಾಧ್ಯಕ್ಷ ಅಲ್ವಿನ್ ಡಿಸೋಜ ಪಾನೀರ್ ಆಕ್ರೋಶ

ಪಶ್ಚಿಮ ಬಂಗಾಳದ ಬರೂಯಿಪುರದಲ್ಲಿ ಹೊಸದಾಗಿ ನಿರ್ಮಾಣಗೊಂಡಿರುವ ಚರ್ಚ್ ಮೇಲೆ ದಾಳಿ ನಡೆಸಿ, ಪವಿತ್ರ ಶಿಲುಬೆಯನ್ನು ಧ್ವಂಸಗೊಳಿಸಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ಧಾರ್ಮಿಕ ಸೌಹಾರ್ದತೆಗೆ ಧಕ್ಕೆ ತರುವ ಇಂತಹ
News

Former CSST General Councillor Sr Josephette Passes Away

The Congregation of the Carmelite Sisters of Saint Teresa (CSST) is mourning the passing of Sr Josephette, former General Councillor

You cannot copy content of this page